AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಲ್ಟಾ ಪ್ಲಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈಸೂರಿನಲ್ಲಿ ಹೊಸ ಲ್ಯಾಬ್, ಪ್ರತ್ಯೇಕ ವಾರ್ಡ್‌ಗೆ ಸಿದ್ಧತೆ

ಮೈಸೂರು ಮೆಡಿಕಲ್ ಕಾಲೇಜಿನಲ್ಲಿರುವ ಕೊರೊನಾ ಲ್ಯಾಬ್ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶಕ್ಕೆ ಸರ್ಕಾರದ ಮಾರ್ಗದರ್ಶನಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಡೆಲ್ಟಾ ಪ್ಲಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈಸೂರಿನಲ್ಲಿ ಹೊಸ ಲ್ಯಾಬ್, ಪ್ರತ್ಯೇಕ ವಾರ್ಡ್‌ಗೆ ಸಿದ್ಧತೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jun 29, 2021 | 11:04 AM

Share

ಮೈಸೂರು: ಮಹಾಮಾರಿ ಕೊರೊನಾ ಬೆನ್ನಲ್ಲೆ ಡೆಲ್ಟಾ ಪ್ಲಸ್ ಸಂಕಷ್ಟ ಎದುರಾಗಿದೆ. ಹೀಗಾಗಿ ಡೆಲ್ಟಾ ಪ್ಲಸ್ ಸೋಂಕನ್ನು ಎದುರಿಸಲು ಮೈಸೂರಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಡೆಲ್ಟಾ ಪ್ಲಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈಸೂರಿನಲ್ಲಿ ಹೊಸ ಲ್ಯಾಬ್, ಪ್ರತ್ಯೇಕ ವಾರ್ಡ್‌ಗೆ ಸಿದ್ಧತೆ ನಡೆಯುತ್ತಿದೆ.

ಮೈಸೂರು ಮೆಡಿಕಲ್ ಕಾಲೇಜಿನಲ್ಲಿರುವ ಕೊರೊನಾ ಲ್ಯಾಬ್ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶಕ್ಕೆ ಸರ್ಕಾರದ ಮಾರ್ಗದರ್ಶನಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಅಧಿಕಾರಿಗಳು ಲ್ಯಾಬ್ ರೂಪುರೇಷೆಗಳ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಡೆಲ್ಟಾ ಪ್ಲಸ್ ಮಾದರಿ ವರದಿ ಬರಲು ಸಾಕಷ್ಟು ತಡವಾಗುತ್ತಿದೆ. ಈ ಕಾರಣಕ್ಕೆ ಜಿಲ್ಲೆಯಲ್ಲೆ ಲ್ಯಾಬ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಸಾದ್ ಮಾಹಿತಿ ನೀಡಿದ್ದಾರೆ.

ವೈರಸ್‌ನ ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಹೆಚ್ಚುತ್ತಿರುವ ಆತಂಕಗಳ ಮಧ್ಯೆ, ನೀತಿ ಆಯೋಗ್ ಸದಸ್ಯರೂ ಆಗಿರುವ ಪೌಲ್ , ಹೊಸ ರೂಪಾಂತರವು ಹೆಚ್ಚು ಹರಡಬಲ್ಲದು ಅಥವಾ ಲಸಿಕೆ ಪರಿಣಾಮಕಾರಿತ್ವವನ್ನು ಕಡಿಮೆ ಮಾಡುತ್ತದೆ ಎಂದು ವಾದಿಸಲು ಇಲ್ಲಿಯವರೆಗೆ ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ ಎಂದು ಪ್ರತಿಪಾದಿಸಿದರು.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪೌಲ್ ಯಾವುದೇ ಗಾತ್ರದ ಮತ್ತೊಂದು ಅಲೆಯು ಕೊವಿಡ್ ಸೂಕ್ತವಾದ ನಡವಳಿಕೆ, ಪರೀಕ್ಷೆ ಮತ್ತು ಕಂಟೈನ್ ಮೆಂಟ್ ತಂತ್ರಗಳು ಮತ್ತು ವ್ಯಾಕ್ಸಿನೇಷನ್ ದರಗಳ ವಿಷಯದಲ್ಲಿ ಒಟ್ಟಾರೆ ಶಿಸ್ತು ಸೇರಿದಂತೆ ಹಲವಾರು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದರು.

“ಇದಲ್ಲದೆ, ವೈರಸ್ ವ ಅನಿರೀಕ್ಷಿತ ನಡವಳಿಕೆಯು ಸಾಂಕ್ರಾಮಿಕ ಚಲನಶಾಸ್ತ್ರವನ್ನು ಸಹ ಬದಲಾಯಿಸಬಹುದು. ಅಂತಹ ಸನ್ನಿವೇಶದಲ್ಲಿ ಅವುಗಳ ಸಂಕೀರ್ಣ ಅಂಶವು ಪ್ರಸರಣ ಮತ್ತು ಸೋಂಕು ಹೆಚ್ಚಳವನ್ನು ನಿರ್ಧರಿಸುತ್ತದೆ.

“ಯಾವುದೇ ಅಲೆ ಸಂಭವಿಸುವುದು ಅಥವಾ ಸಂಭವಿಸದಿರುವುದು ನಮ್ಮ ಕೈಯಲ್ಲಿದೆ. ನನಗನಿಸಿದಂತೆ ಯಾವುದೇ ಅಲೆಗೆ ಯಾವುದೇ ದಿನಾಂಕವನ್ನು ಹಾಕುವುದು ನ್ಯಾಯವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶ್ವಾಸಕೋಶದ ಮೇಲೆ ಡೆಲ್ಟಾ ಪ್ಲಸ್​ ಪರಿಣಾಮ ಹೀಗಿದೆ; ಕೊರೊನಾ ಲಸಿಕೆ ಪಡೆದವರಿಗೆ ಹೆಚ್ಚು ಸಮಸ್ಯೆ ಇಲ್ಲ: ಡಾ.ಎನ್​.ಕೆ.ಅರೋರಾ

Published On - 11:03 am, Tue, 29 June 21

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು