AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದ ಬ್ಯಾರಕ್​ಗಳ ಮೇಲೆ ರೇಡ್​: ದಾಳಿಗೂ ಮುನ್ನವೇ ಮಾಹಿತಿ ಲೀಕ್​?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಹಾಗೂ ಮೊಬೈಲ್ ಬಳಕೆ ಆರೋಪದ ಬೆನ್ನಲ್ಲೇ ಬ್ಯಾರಕ್​ಗಳ ಮೇಲೆ ದಾಳಿ ನಡೆಸಲಾಗಿದೆ. ಉಮೇಶ್ ರೆಡ್ಡಿ, ಲಷ್ಕರ್ ಉಗ್ರ ಮೊಬೈಲ್ ಬಳಸುವ ವಿಡಿಯೋ ವೈರಲ್ ಆದ ನಂತರ ಜೈಲಾಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದು, ರೇಡ್​​ಗೂ ಮೊದಲೇ ಮಾಹಿತಿ ಲೀಕ್​ ಆಗಿತ್ತಾ ಎಂಬ ಅನುಮಾನವೂ ಹುಟ್ಟುಕೊಂಡಿದೆ.

ಪರಪ್ಪನ ಅಗ್ರಹಾರದ ಬ್ಯಾರಕ್​ಗಳ ಮೇಲೆ ರೇಡ್​: ದಾಳಿಗೂ ಮುನ್ನವೇ ಮಾಹಿತಿ ಲೀಕ್​?
ಪರಪ್ಪನ ಅಗ್ರಹಾರ
ಪ್ರಸನ್ನ ಹೆಗಡೆ
|

Updated on: Nov 09, 2025 | 9:16 AM

Share

ಬೆಂಗಳೂರು, ನವೆಂಬರ್​ 09: ಜೈಲಲ್ಲಿ ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿ ಮೊಬೈಲ್ ಬಳಸುತ್ತಾ ಮತ್ತು ಟಿವಿ ನೋಡುತ್ತಿರುವ, ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್​ ಬೆನ್ನಲ್ಲೇ ಅಲರ್ಟ್​ ಆಗಿರುವ ಜೈಲಾಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ಗಳ ಮೇಲೆ ರೇಡ್​ ಮಾಡಿದ್ದಾರೆ. ಒಟ್ಟು 100 ಸಿಬ್ಬಂದಿ ಬ್ಯಾರಕ್​ಗಳ ಪರಿಶೀಲನೆ ಮಾಡಿದ್ದು,ತಲಾಶ್​ ವೇಳೆ ಯಾವುದೇ ವಸ್ತು ಪತ್ತೆಯಾಗಿಲ್ಲ ಎನ್ನಲಾಗಿದೆ.

ಲೀಕ್​ ಆಗಿತ್ತಾ ರೇಡ್​ ಮಾಹಿತಿ?

ಬ್ಯಾರಕ್​ಗಳಲ್ಲಿ ಸಿಬ್ಬಂದಿ ಪರಿಶೀಲನೆ ವೇಳೆ ಯಾವುದೇ ವಸ್ತುಗಳು ಪತ್ತೆಯಾಗದ ಹಿನ್ನಲೆ ರೇಡ್​ ಮಾಹಿತಿ ಲೀಕ್​ ಆಗಿರುವ ಅನುಮಾನ ವ್ಯಕ್ತವಾಗಿದೆ. ಮತ್ತೊಂದೆಡೆ ವಿಡಿಯ ವೈರಲ್​ ವಿಚಾರವನ್ನ ಗಂಭೀರವಾಗಿ ಪರಿಗಣಿಸಲಾಗಿದ್ದು, ಹೊರ ಬಂದಿರುವ ವಿಡಿಯೋಗಳು 2023ರಲ್ಲಿ ಚಿತ್ರೀಕರಣ ಮಾಡಿದ್ದು ಎನ್ನಲಾಗಿದೆ. ಜೈಲಿನ ಕೆಲ ಸಿಬ್ಬಂದಿಯಿಂದಲೇ ಪಿತೂರಿ ನಡೆದಿರೋ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಡಿಐಜಿ ಆನಂದ್ ರೆಡ್ಡಿ ಮತ್ತು ಜೈಲಾಧಿಕಾರಿಗಳಿಂದ ಎಡಿಜಿಪಿ ದಯಾನಂದ್ ಅವರಿಗೆ ಮಾಹಿತಿ ನೀಡಲಾಗಿದೆ. ಮೊಬೈಲ್ ಬಳಕೆ ಹಾಗೂ ವಿಡಿಯೋ ವೈರಲ್ ಕುರಿತಾಗಿ ಆಂತರಿಕ ತನಿಖೆಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೂ ಸಿಗುತ್ತೆ ಮೊಬೈಲ್: ಲಷ್ಕರ್ ಉಗ್ರನ ಬಿಂದಾಸ್ ಲೈಫ್ ಹೀಗಿದೆ ನೋಡಿ!

ಪರಪ್ಪನ ಅಗ್ರಹಾರಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ ಟೀಕೆಗೆ ಗ್ರಾಸವಾಗಿತ್ತು. ವಿಚಾರಣಾಧೀನ ಕೈದಿಗಳಿಗೆ LED ಟಿವಿ ಸೌಲಭ್ಯದ ಜೊತೆಗೆ ಅಡುಗೆ ಮಾಡಿಕೊಳ್ಳಲು ಒಲೆ, ಪಾತ್ರೆ, ಅಡುಗೆ ಪದಾರ್ಥಗಳೂ ಸಿಗುತ್ತಿವೆ. ಮೊಟ್ಟೆ , ಚಿಕನ್ ಐಟಂಗಳು, ಮೊಬೈಲ್, ಚಾರ್ಜರ್, ಪಾರ್ಟಿ ಮಾಡಲು ಸೌಂಡ್​ ಬಾಕ್ಸ್​ ಸೇರಿ ಐಶಾರಾಮಿ ವ್ಯವಸ್ಥೆ ನೀಡಲಾದ ಫೋಟೋ ವೈರಲ್​ ಆಗಿತ್ತು. ಈ ಹಿನ್ನಲೆ ಕೈದಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದವು. ಈ ವಿಷಯ ಮಾಸುವ ಮುನ್ನವೇ ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಐಸಿಸ್​ನ ಮೋಸ್ಟ್ ವಾಂಟೆಡ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಎಂಬಾತನಿಗೂ ರಾಜಾತಿಥ್ಯ ದೊರೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈತ ಜೈಲಿನಲ್ಲಿ ರಾಜಾರೋಷವಾಗಿ ಫೋನ್ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ಇದರೊಂದಿಗೆ, ಪರಪ್ಪನ ಅಗ್ರಹಾರ ಜೈಲು ಕೈದಿಗಳು, ಭಯೋತ್ಪಾದಕರಿಗೆ ಸ್ವರ್ಗವಾಗಿ ಮಾರ್ಪಟ್ಟಿದೆಯಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ವರದಿ: ವಿಕಾಸ್​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ