AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ

ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
shruti hegde
| Edited By: |

Updated on: Apr 04, 2021 | 11:05 AM

Share

ಮೈಸೂರು: ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಸ್ಥಳಕ್ಕೆ ಆಗಮಿಸಿ ಹಿಮ್ಮಾವು ಸಮೀಪದಲ್ಲಿನ ಸ್ಥಳ ಪರಿಶೀಲನೆ ಮಾಡಿದ್ದಾರೆ. 2021-22ರ ಬಜೆಟ್​ನಲ್ಲಿ ಮುಖ್ಯಂತ್ರಿ ಬಿ.ಎಸ್​ ಯಡಿಯೂರಪ್ಪ ಘೋಷಿಸಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಕಾರ್ಯ ಚುರುಕಾಗಿ ನಡೆಯುತ್ತಿದೆ.

ಹಿಮ್ಮಾವು ಗ್ರಾಮದಲ್ಲಿರುವ ಜಾಗ ಚಿತ್ರ ಜನರಿಗೆ ಅತ್ಯಂತ ಸೂಕ್ತ ಜಾಗವಾಗಿದೆ. ಈ ಕಾರಣದಿಂದ ಮೂಲ ಸೌಕರ್ಯ ಒದಗಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಕೆಐಎಡಿಬಿ ಅಧಿಕಾರಿಗಳಿಗೆ ವಾರ್ತಾ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಸ್ಥಳ ಪರಿಶೀಲನೆಯ ನಂತರದಲ್ಲಿ ಜಾಗದ ದಾಖಲೆ, ಇತರ ವಿಷಯಗಳ ಕುರಿತು ವಾರ್ತಾ ಇಲಾಖೆ ಆಯುಕ್ತ ಹರ್ಷ ಜಾಗದ ವಿವರ ಪಡೆದಿದ್ದಾರೆ. ಏಪ್ರಿಲ್​ 7ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

mysuru film city place

ಚಿತ್ರನಗರಿ ನಿರ್ಮಿಸುವ ಸ್ಥಳ

ಇದನ್ನೂ ಓದಿ: ಮೈಸೂರಿನಲ್ಲಿ ಚಿತ್ರನಗರಿ ಫೈನಲ್? ಸಿಎಂ ಅನುಮೋದನೆಯಷ್ಟೇ ಬಾಕಿ

ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ: ಸಚಿವ ಸಿ.ಸಿ. ಪಾಟೀಲ್

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು