AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ಅಥವಾ ಜೂನ್​ನಲ್ಲಿ ಈ ಭಾಗದಲ್ಲಿ ತೈಲ ಮತ್ತು ಗ್ಯಾಸ್ ಉತ್ಪಾದನೆ: ಹಾಸನದಲ್ಲಿ ಹರ್ದೀಪ್ ಸಿಂಗ್ ಪುರಿ ಹೇಳಿಕೆ

ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ ಅಥವಾ ಜೂನ್​ನಲ್ಲಿ ಈ ಭಾಗದಲ್ಲಿ ಆಯಿಲ್ ಮತ್ತು ಗ್ಯಾಸ್ ಉತ್ಪಾದನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ಪ್ರಧಾನಿ ಮಂತ್ರಿ ಉಜ್ವಲ್ ಯೋಜನೆಯನ್ನು ಉಚಿತವಾಗಿ ನೀಡುವಂತೆ ಫಲಾನುಭವಿಗಳು ಹೇಳುತ್ತಿದ್ದಾರೆ, ಆದರೆ ಇದು ಅಸಾಧ್ಯ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮೇ ಅಥವಾ ಜೂನ್​ನಲ್ಲಿ ಈ ಭಾಗದಲ್ಲಿ ತೈಲ ಮತ್ತು ಗ್ಯಾಸ್ ಉತ್ಪಾದನೆ: ಹಾಸನದಲ್ಲಿ ಹರ್ದೀಪ್ ಸಿಂಗ್ ಪುರಿ ಹೇಳಿಕೆ
ಮೇ ಅಥವಾ ಜೂನ್​ನಲ್ಲಿ ಈ ಭಾಗದಲ್ಲಿ ಆಯಿಲ್ ಮತ್ತು ಗ್ಯಾಸ್ ಉತ್ಪಾದನೆ ಮಾಡಲಾಗುತ್ತದೆ ಎಂದು ಹಾಸನದಲ್ಲಿ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ
ಮಂಜುನಾಥ ಕೆಬಿ
| Edited By: |

Updated on: Jan 08, 2024 | 9:07 PM

Share

ಹಾಸನ, ಜ.8: ಕೃಷ್ಣ ಗೋದಾವರಿ ಬೇಸ್​ನ 30 ಕಿಲೋ ದೂರದಲ್ಲಿ ತೈಲ ನಿಕ್ಷೇಪ ಪತ್ತೆಯಾಗಿದೆ. ಮೇ ಅಥವಾ ಜೂನ್​ನಲ್ಲಿ ಈ ಭಾಗದಲ್ಲಿ ತೈಲ ಮತ್ತು ಗ್ಯಾಸ್ ಉತ್ಪಾದನೆ ಮಾಡಲಾಗುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಹೇಳಿದ್ದಾರೆ.

ಹಾನಸದಲ್ಲಿ ಮಾತನಾಡಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಒಂದು ವರ್ಷಕ್ಕೆ ಒಂದು ಕುಟುಂಬಕ್ಕೆ ಐದು ಲಕ್ಷವರೆಗೂ ನೆರವು ಸಿಗುತ್ತದೆ. ನಾಲ್ಕು ಕೋಟಿ ಜನಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ ಲಾಭವಾಗಿದೆ. ಕೇಂದ್ರದ ಸಾಕಷ್ಟು ಯೋಜನೆಗಳು ಜನರಿಗಾಗಿ ಜಾರಿಯಲ್ಲಿವೆ ಎಂದರು.

ಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ನಾವು ಜಾರಿಗೆ ತಂದಿರುವುದುದು ಚುನಾವಣೆಯ ಲಾಭಕ್ಕಾಗಿ ಅಲ್ಲ. ಜನರಿಗೆ ಆರ್ಥಿಕ ಸ್ಥಿತಿ ಮತ್ತು ಮೂಲಭೂತ ಸೌಕರ್ಯ ಒದಗಿಸುವುದು ಒಳ್ಳೆಯ ಸರ್ಕಾರದ ಲಕ್ಷಣ ಎಂದರು.

ಇದನ್ನೂ ಓದಿ: ಹಾಸನ: ರಸ್ತೆ ಮಧ್ಯೆ ನಿಂತ ಪೊಲೀಸ್ ಬೆಂಗಾಲು ವಾಹನ; ಗರಂ ಆದ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ

ನಾಲ್ಕು ರಾಜ್ಯಗಳ ಚುನಾವಣಿಯಲ್ಲಿ ಮೂರಲ್ಲಿ ನಾವು (ಬಿಜೆಪಿ) ಗೆದಿದ್ದೇವೆ. ಮೋದಿಯವರ ಗ್ಯಾರೆಂಟಿ ಜನರಿಗೆ ತಲುಪಿದೆ. ಮುಂದೆ ನಡೆಯುವ ಲೋಕಾಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಉತ್ತಮ ಫಲಿತಾಂಶ ಬರಲಿದೆ ಎಂದು ಹರ್ದೀಪ್ ಸಿಂಗ್ ಪುರಿ ವಿಶ್ವಾಸ ವ್ಯಕ್ತಪಡಿಸಿದರು.

ಉಜ್ವಲ ಯೋಜನೆ ಫ್ರೀ ಅಸಾಧ್ಯ

ಉಜ್ವಲ ಯೋಜನೆ ಫಲಾನುಭವಿಗಳಿಗೆ ಈಗಾಗಲೇ ನಾವು 300 ರೂಪಾಯಿ ಸಬ್ಸಿಡಿ ನೀಡುತ್ತಿದ್ದೇವೆ. ಜನರು ಫ್ರೀ ಮಾಡಿ ಅಂತ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಕಡಿಮೆ ಬೆಲೆಗೆ ಜನರಿಗೆ ಸಿಗುವ ಹಾಗೆ ನೋಡಿಕೊಳ್ಳುತ್ತಿದ್ದೇವೆ ಎಂದರು.

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿದ ಹರ್ದೀಪ್ ಸಿಂಗ್ ಪುರಿ, ಪ್ರಪಂಚದ ಬೇರೆ ದೇಶಗಳಲ್ಲಿ ಎರಡು ವರ್ಷಗಳಲ್ಲಿ ಮೂವತ್ತರಿಂದ ನಲವತ್ತರಷ್ಟು ಬೆಲೆ ಏರಿಕೆ ಆಗಿದೆ. ಆದರೆ ಭಾರತದಲ್ಲಿ ಕಡಿಮೆ ದರ ಏರಿಕೆ ಆಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​