AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ, ಅಧಿಕಾರಿಗಳ ವಿರುದ್ಧ FIR

ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದ ಸಾವು ಪ್ರಕರಣ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಸಿಬ್ಬಂದಿ ಆತ್ಮಹತ್ಯೆ ವಿಚಾರವಾಗಿ ಆರಂಭದಲ್ಲಿ ಪೊಲೀಸರು ಯಡಿಆರ್​ ದಾಖಲಿಸಿಕೊಂಡಿದ್ದರು. ಆದರೆ ಆ ಬಳಿಕ ಮನೆಯಲ್ಲಿ ಡೆತ್​ ನೋಟ್​ ಪತ್ತೆಯಾಗಿದ್ದು, ಅಧಿಕಾರಿಗಳ ಕಿರುಕುಳದ ವಿಷಯವನ್ನು ಸಿಬ್ಬಂದಿ ಅದರಲ್ಲಿ ಉಲ್ಲೇಖಿಸಿದ್ದರು. ಈ ಬಗ್ಗೆ ಕುಟುಂಬಸ್ಥರು ನೀಡಿದ್ದ ದೂರಿನ ಅನ್ವಯ ಕೇಸ್​ ದಾಖಲು ಮಾಡಲಾಗಿದೆ.

ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ, ಅಧಿಕಾರಿಗಳ ವಿರುದ್ಧ FIR
ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒಗೆ ಶಾಕ್​ ಕೊಟ್ಟ ಖಾಕಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 20, 2025 | 12:32 PM

Share

ಬೆಂಗಳೂರು, ಅಕ್ಟೋಬರ್​ 20: ಬೆಂಗಳೂರಲ್ಲಿ ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದ ಸಾವು ಪ್ರಕರಣ ಸಂಬಂಧ ಓಲಾ (Ola) ಎಲೆಕ್ಟ್ರಿಕ್ ಕಂಪನಿ ಸಿಇಒ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಸಿಇಒ ಭವೇಶ್, ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ದಾಸ್, ಭವೀಶ್ ವಿರುದ್ಧ ಕೇಸ್ ದಾಖಲಾಗಿದೆ. ಕಂಪನಿಯ ಹೋಮೋಲೋಗೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್, ಸೆಪ್ಟೆಂಬರ್​ 28ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಸಹಜವಾಗಿ ಪೊಲೀಸರು ಯುಡಿಆರ್​ ದಾಖಲಿಸಿಕೊಂಡಿದ್ದರು. ಆದರೆ ಅರವಿಂದ್ ಸಾವಿನ ಎರಡು ದಿನಗಳ ನಂತರ ಅವರ ಖಾತೆಗೆ ಕಂಪನಿಯಿಂದ 17 ಲಕ್ಷ 46 ಸಾವಿರ ಹಣ ಜಮೆ ಆಗಿತ್ತು. ಈ ಬಗ್ಗೆ ಅನುಮಾನದಿಂದ ಕಂಪನಿಯವರನ್ನು ಕುಟುಂಬ ಪ್ರಶ್ನಿಸಿದ್ದು, ಆ ವೇಳೆ ಕಂಪನಿಯ ಹೆಚ್​​ಆರ್ ಸೇರಿದಂತೆ ಕೆಲ ಸಿಬ್ಬಂದಿಯಿಂದ ಅಸ್ಪಷ್ಟ ಮಾಹಿತಿ ಸಿಕ್ಕಿತ್ತು. ಹೀಗಾಗಿ ಕುಟುಂಬಸ್ಥರು ಮನೆಯಲ್ಲಿ ಪರಿಶೀಲಿಸಿದಾಗ ಡೆತ್​ ನೋಟ್​ ಪತ್ತೆಯಾಗಿತ್ತು.

ಶಾಕ್​ ಕೊಟ್ಟ ಪೊಲೀಸರು

ಪತ್ತೆಯಾಗಿದ್ದ 28 ಪುಟಗಳ ಡೆತ್​ ನೋಟ್​

ಆತ್ಮಹತ್ಯೆ ವಿಚಾರವಾಗಿ ಅರವಿಂದ್​ ಬರೆದಿದ್ದ 28 ಪುಟಗಳ ಡೆತ್​ ನೋಟ್​ ನಲ್ಲಿ ಕೆಲಸದ ವಿಚಾರವಾಗಿ ಸುಬ್ರತ್ ಕುಮಾರ್, ಸಿಇಒ ಭವೀಶ್ ಅಗರ್ವಾಲ್ ಇಬ್ಬರೂ ನನಗೆ ತೀವ್ರ ಒತ್ತಡ ನೀಡುತ್ತಿದ್ದಾರೆ. ಭತ್ಯೆ ಮತ್ತು ವೇತನ ನೀಡದೆ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಿದ್ದರು. ಡೆತ್ ನೋಟ್ ಆಧಾರದಲ್ಲಿ ಅರವಿಂದ್ ಕುಟುಂಬಸ್ಥರು ದೂರು ನೀಡಿದ್ದು, ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದರ ಅನ್ವಯ ಸುಬ್ರತ್ ಕುಮಾರ್ ದಾಸ್, ಭವೀಶ್ ಅಗರ್ವಾಲ್, ಓಲಾ ಎಲೆಕ್ಟ್ರಿಕ್ ಕಂಪನಿಯನ್ನ ಆರೋಪಿಗಳನ್ನಾಗಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್