AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಉಬರ್​ ಬ್ಯಾನ್, ಮುಂದಿನ ಜೀವನ ಗೊತ್ತಿಲ್ಲ: ಆಟೋ ಚಾಲಕ ಮುತ್ತುರಾಜ್​ ಬಿಚ್ಚಿಟ್ರು ಅಸಲಿ ಕಹಾನಿ

ಬೆಂಗಳೂರಿನಲ್ಲಿ ಇತ್ತೀಚೆಗೆ ಓಲಾ ಆಟೋ ಬುಕ್ಕಿಂಗ್ ರದ್ದು ಮಾಡಿದರು ಎಂದು ಯುವತಿ ಮೇಲೆ ರೇಗಾಡಿ, ಅಶ್ಲೀಲ ಪದಗಳಿಂದ ನಿಂದನೆ ಆರೋಪದಲ್ಲಿ ಬಂಧನಕೊಳ್ಳಗಾಗಿದ್ದ ಆಟೋ ಚಾಲಕ ಮುತ್ತುರಾಜ್​ಗೆ ಜಾಮೀನು ಸಿಕ್ಕಿದ್ದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಸದ್ಯ ಓಲಾ, ಉಬರ್​ಗಳಂತಹ ಆ್ಯಪ್​ಗಳು ಅವರನ್ನು ಬ್ಯಾನ್ ಮಾಡಿದ್ದು, ಅಂದು ನಡೆದ ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿದ್ದಾರೆ.

ಓಲಾ, ಉಬರ್​ ಬ್ಯಾನ್, ಮುಂದಿನ ಜೀವನ ಗೊತ್ತಿಲ್ಲ: ಆಟೋ ಚಾಲಕ ಮುತ್ತುರಾಜ್​ ಬಿಚ್ಚಿಟ್ರು ಅಸಲಿ ಕಹಾನಿ
ಓಲಾ, ಉಬರ್​ ಬ್ಯಾನ್, ಮುಂದಿನ ಜೀವನ ಗೊತ್ತಿಲ್ಲ: ಆಟೋ ಚಾಲಕ ಮುತ್ತುರಾಜ್​ ಬಿಚ್ಚಿಟ್ರು ಅಸಲಿ ಕಹಾನಿ
ಗಂಗಾಧರ​ ಬ. ಸಾಬೋಜಿ
|

Updated on:Sep 16, 2024 | 8:41 PM

Share

ಬೆಂಗಳೂರು, ಸೆಪ್ಟೆಂಬರ್​ 16: ಓಲಾ ಆಟೋ ಬುಕ್ಕಿಂಗ್ ರದ್ದು ಮಾಡಿದ್ದಕ್ಕೆ ಕೋಪಗೊಂಡು ಯುವತಿ ಮೇಲೆ ಆಟೋ ಚಾಲಕ (Auto Driver) ಹಲ್ಲೆ ನಡೆಸಿದ್ದ ಘಟನೆ ಇತ್ತೀಚೆಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಯುವತಿ ದೂರು ಆಧರಿಸಿ ಆಟೋ ಚಾಲಕ ಮುತ್ತುರಾಜ್​ರನ್ನು ಪೊಲೀಸರು ಬಂಧಿಸಿದ್ದರು. ಅಂದು ಲಾಯರ್ ಖರ್ಚು ಸೇರಿ ಜಾಮೀನಿಗಾಗಿ ಹಣ ಹೊಂದಿಸಲು ಪರದಾಡಿದ್ದ ಆಟೋ ಚಾಲಕ ಇದೀಗ ಜಾಮೀನು ಸಿಕ್ಕಿದ್ದು  ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಘಟನೆ ಬಗ್ಗೆ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಟೋ ಚಾಲಕ ಮುತ್ತುರಾಜ್​ ಜೈಲಿನಿಂದ ಬಿಡುಗಡೆ ಬಳಿಕ ಯೂಟ್ಯೂಬ್​ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅಂದು ನಡೆದ ಘಟನೆಯ ಅಸಲಿಯತ್ತು ಬಿಚ್ಚಿಟ್ಟಿದ್ದಾರೆ. ಲೊಕೇಷನ್​ಗೆ ಹೊಗುವುದಕ್ಕೂ ಮುಂಚೆ ಪ್ರಯಾಣಿಕರಿಗೆ ಕಾಲ್ ಮಾಡಿದಾಗ ಬನ್ನಿ ಬಯ್ಯಾ ಎಂದರು. ಲೊಕೇಷನ್​ಗೆ ಹೋಗಿ ಕಾಯುತ್ತಿದ್ದೆ. ಐದು ನಿಮಿಷ ಬಿಟ್ಟು ಇಬ್ಬರು ಯುವತಿಯರು ಬಂದರು. ನಾನು ನಿಂತಿದ್ದ ಜಾಗದಿಂದ ಸ್ಪಲ್ಪ ದೂರದಲ್ಲಿ ನಿಂತಿದ್ದ ಇನ್ನೊಂದು ಆಟೋವನ್ನು ಹತ್ತಿದರು. ಬಳಿಕ ಅವರಿಗೆ ಕಾಲ್​ ಮಾಡಿದಾಗ ಕಟ್​ ಮಾಡಿದ್ದು ಕೂಡಲೇ ಬುಕಿಂಗ್​ ರದ್ದು ಮಾಡಿದ್ದಾರೆ ಎಂದು ಮುತ್ತುರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಯುವತಿ ಜೊತೆ ಗಲಾಟೆ: ಲಾಯರ್ ಖರ್ಚು ಸೇರಿ ಜಾಮೀನಿಗಾಗಿ ಹಣ ಹೊಂದಿಸಲು ಆಟೋ ಚಾಲಕನ ಪೀಕಲಾಟ

ಯುವತಿಯರು ಹತ್ತಿದ್ದ ಇನ್ನೊಂದು ಆಟೋ ಬಳಿ ಹೋಗಿ ವಿಚಾರಿಸಿದ್ದಾಗ ಬುಕ್ಕಿಂಗ್ ಮಾಡಿದ್ದು ಅವರೇ ಎಂದು ಗೊತ್ತಾಗಿದೆ. ಯಾಕೆ ರದ್ದು ಮಾಡಿದ್ದು ಎಂದು ಪ್ರಶ್ನಿಸಿದ್ದಕ್ಕೆ ನನ್ನ ಇಷ್ಟ, ನೀವ್ಯಾರು ಕೇಳುವುದಕ್ಕೆ ಎಂದಿದ್ದಾರೆ. ಆಗ ತಾವು ಕೂಡ ಕೋಪಗೊಂಡ ಬಗ್ಗೆ ತಿಳಿಸಿದ್ದಾರೆ.

ಘಟನೆ ವೇಳೆ ಅವರು ಪೊಲೀಸರಿಗೆ ಫೋನ್ ಮಾಡಬಾರದು ಎಂದು ಫೋನ್ ಕಿತ್ತುಕೊಂಡೆ. ಆದರೆ ಯುವತಿಗೆ ಹೊಡೆದಿದ್ದೇನೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ನನ್ನ ತಪ್ಪನ್ನು ಒಪ್ಪಿಕೊಳ್ಳುತ್ತೇನೆ ಏಕೆಂದರೆ ನಾನು ಯುವತಿ ಫೋನ್ ಕಿತ್ತುಕೊಳ್ಳಬಾರದಿತ್ತು ಎಂದಿದ್ದಾರೆ.

ಇದನ್ನೂ ಓದಿ: ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಯವತಿ ಮೇಲೆ ರೇಗಾಡಿದ ಆಟೋ ಚಾಲಕ, ಅಶ್ಲೀಲ ಪದಗಳಿಂದ ನಿಂದನೆ

ಈ ಘಟನೆ ಬಳಿಕ ಆಟೋ ಚಾಲಕ ಮುತ್ತುರಾಜ್​ರನ್ನು ಓಲಾ, ಉಬರ್​ಗಳಂತಹ ಆ್ಯಪ್​ಗಳು ಅವರನ್ನು ಬ್ಯಾನ್ ​ಮಾಡಿವೆ. ಕೆಲ ಬೆದರಿಕೆ ಕರೆಗಳು ಕೂಡ ಮುತ್ತುರಾಜ್ ಅವರಿಗೆ ಬಂದಿವೆ ಎಂದಿದ್ದಾರೆ. ಮುಂದಿನ ಜೀವನ ಗೊತ್ತಿಲ್ಲ, ಏನು ಮಾಡಬೇಕು ಎನ್ನುವುದು ತಿಳಿಯುತ್ತಿಲ್ಲ. ಇದು ಬಾಡಿಗೆ ಆಟೋ. ನನ್ನ ಮಾಲೀಕರು ಖಂಡಿತ ನನಗೆ ಆಟೋ ನೀಡುವುದಿಲ್ಲ. ಹೀಗಾಗಿ ಇದಕ್ಕೆ ಪೊಲೀಸರೇ ಪರಿಹಾರ ಸೂಚಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:34 pm, Mon, 16 September 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು