AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಿರುವ ನಿಗಮಗಳಿಗೇ ಕಚೇರಿ ಇಲ್ಲ! ಇನ್ನು ಮುಂದಿನ ನಿಗಮಗಳ ಕಥೆಯೇನು?

ರಾಜ್ಯದಲ್ಲೀಗ ನಿಗಮಗಳದ್ದೇ ಕಾರುಬಾರು, ನಮಗೊಂದು ನಿಗಮ ಬೇಕೇ ಬೇಕು ಎನ್ನುವ ಜನರು ಒಂದು ಕಡೆಯಾದ್ರೆ ಇದನ್ನು ಜಾರಿಗೆ ತರುವಲ್ಲಿ ನಮ್ಮದು ದೊಡ್ಡ ಪಾಲಿರಲಿ ಎನ್ನುವ ರಾಜಕಾರಣಿಗಳು ಇನ್ನೊಂದು ಕಡೆ. ಹೀಗೆ ಜಾರಿಗೆ ಬರುತ್ತಿರುವ ನಿಗಮಗಳು ಜನರನ್ನು ಎಷ್ಟರ ಮಟ್ಟಿಗೆ ತಲುಪಿದೆ ಎಂಬ ವಿಚಾರದ ಬಗೆಗಿನ ಸ್ಪಷ್ಟತೆ ಬಹಳ ಮುಖ್ಯ.   ನಮ್ಮ ಜಾತಿಗೂ ಒಂದು ನಿಗಮ ಬೇಕು ಎನ್ನುವ ಜನರ ಕೂಗಿಗೆ ಸರ್ಕಾರ ಸೊಪ್ಪು ಹಾಕುತ್ತಲೇ ಬಂದಿದ್ದು, ಇದು ರಾಜಕಾರಣದ ಓಲೈಕೆಯ ತಂತ್ರವಾಗಿದೆ. ಸದ್ಯ ಜಾರಿಗೆ ಬಂದಿರುವ […]

ಈಗಿರುವ ನಿಗಮಗಳಿಗೇ ಕಚೇರಿ ಇಲ್ಲ! ಇನ್ನು ಮುಂದಿನ ನಿಗಮಗಳ ಕಥೆಯೇನು?
ಮುಖ್ಯಮಂತ್ರಿ B.S.ಯಡಿಯೂರಪ್ಪ
ಪೃಥ್ವಿಶಂಕರ
| Edited By: |

Updated on: Nov 20, 2020 | 4:07 PM

Share

ರಾಜ್ಯದಲ್ಲೀಗ ನಿಗಮಗಳದ್ದೇ ಕಾರುಬಾರು, ನಮಗೊಂದು ನಿಗಮ ಬೇಕೇ ಬೇಕು ಎನ್ನುವ ಜನರು ಒಂದು ಕಡೆಯಾದ್ರೆ ಇದನ್ನು ಜಾರಿಗೆ ತರುವಲ್ಲಿ ನಮ್ಮದು ದೊಡ್ಡ ಪಾಲಿರಲಿ ಎನ್ನುವ ರಾಜಕಾರಣಿಗಳು ಇನ್ನೊಂದು ಕಡೆ. ಹೀಗೆ ಜಾರಿಗೆ ಬರುತ್ತಿರುವ ನಿಗಮಗಳು ಜನರನ್ನು ಎಷ್ಟರ ಮಟ್ಟಿಗೆ ತಲುಪಿದೆ ಎಂಬ ವಿಚಾರದ ಬಗೆಗಿನ ಸ್ಪಷ್ಟತೆ ಬಹಳ ಮುಖ್ಯ.   ನಮ್ಮ ಜಾತಿಗೂ ಒಂದು ನಿಗಮ ಬೇಕು ಎನ್ನುವ ಜನರ ಕೂಗಿಗೆ ಸರ್ಕಾರ ಸೊಪ್ಪು ಹಾಕುತ್ತಲೇ ಬಂದಿದ್ದು, ಇದು ರಾಜಕಾರಣದ ಓಲೈಕೆಯ ತಂತ್ರವಾಗಿದೆ. ಸದ್ಯ ಜಾರಿಗೆ ಬಂದಿರುವ 20 ನಿಗಮಗಳಲ್ಲಿ ಐದಕ್ಕೆ ಮಾತ್ರ ಅಧ್ಯಕ್ಷರ ನೇಮಕವಾಗಿದೆ ಎಂಬ ವಿಚಾರ ಹೊರಬಿದ್ದಿದೆ. ಉದಾ: ಜೆಡಿಎಸ್-ಕಾಂಗ್ರೆಸ್​ ಸಮ್ಮೀಶ್ರ ಸರ್ಕಾರದಲ್ಲಿ ಘೋಷಣೆಯಾದ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ 25ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿ,15 ಕೋಟಿ ರೂ. ಬಿಡುಗಡೆಯಾಗಿದ್ದರು, ಸರಿಯಾದ ಕಚೇರಿ ಮತ್ತು ಅಧ್ಯಕ್ಷರೇ ಸಿಕ್ಕಿಲ್ಲ. ಇನ್ನು ಸರಿಯಾದ ಕಾರ್ಯಾರಂಭವಾಗುವುದು ಯಾವಾಗ ಹೇಳಿ?   ಸಿದ್ಧರಾನಯ್ಯ ಅವರ ಅವಧಿಯಲ್ಲಿ (2008-213) ಬೋವಿ ಅಭಿವೃದ್ಧಿ ನಿಗಮ, ಸಫಾಯಿ ಕಾರ್ಮಚಾರಿಗಳ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ.   ಎಚ್​ಡಿಕೆ ಕುಮಾರಸ್ವಾಮಿ ಅವರ ಅವಧಿಯಲ್ಲಿ (ಮೈತ್ರಿ ಸರ್ಕಾರದ ಅವಧಿ) ಕ್ರೈಸ್ತ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ಬ್ರಾಹ್ಮಣ ಅಭಿವೃದ್ಧಿ ನಿಗಮ, ಆರ್ಯವೈಶ್ಯ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ.   ಬಿಎಸ್​ ಯಡಿಯೂರಪ್ಪ ಅವರ ಅವಧಿಯಲ್ಲಿ (ಮುಖ್ಯಮಂತ್ರಿಯಾದ ನಂತರ) ಕಾಡುಗೊಲ್ಲ ಅಭಿವೃದ್ಧಿ ನಿಗಮ, ಮರಾಠ ಸಮುದಾಯ ನಿಗಮ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಘೋಷಣೆ ಮಾಡಿದ್ದಾರೆ.   ಹೊಸ ನಿಗಮಗಳಿಗೆ ಬೇಡಿಕೆ ಒಕ್ಕಲಿಗರ ಅಭಿವೃದ್ಧಿ ನಿಗಮ, ರೆಡ್ಡಿ ಸಮುದಾಯ ಅಭಿವೃದ್ಧಿ ನಿಗಮ, ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ.   ಈಗಾಗಲೇ ಇರುವ ಕಚೇರಿಗಳಿಗೆ ಸ್ಥಳಾವಕಾಶ ಇಲ್ಲ, ಕೆಲವು ನಿಗಮಗಳಂತು ಚಿಕ್ಕ ಕೋಣೆಯಲ್ಲಿದೆ ಹೀಗಾಗಿ ನಿಗಮ ಸ್ಥಾಪಿಸುವಾಗ ಇರುವ ಉತ್ಸಾಹ ನಂತರ ಇರುವುದಿಲ್ಲ ಎನ್ನುವುದು ಸ್ಪಷ್ಟ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?