AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಡೋಸ್ ಕೊರೊನಾ​ ಲಸಿಕೆಗೆ ವಾರಪೂರ್ತಿ ಅಲೆದಾಟ; ನಡುರಾತ್ರಿ ಲಸಿಕಾ ಕೇಂದ್ರಕ್ಕೆ ಬಂದ ವೃದ್ಧ ದಂಪತಿ

ಅಟ್ಟೂರು ಲೇಔಟ್​ ನಿವಾಸಿಗಳಾದ ದೇವೇಂದ್ರಪ್ಪ (65 ವರ್ಷ), ಲಕ್ಷ್ಮಮ್ಮ (56 ವರ್ಷ) ಏಪ್ರಿಲ್ 3 ರಂದು ಮೊದಲ ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡಿದ್ದರು. ಇಬ್ಬರೂ ಕೊವ್ಯಾಕ್ಸಿನ್ ಲಸಿಕೆ ಪಡೆದಿದ್ದು, ಮೇ 1ರಂದು 2ನೇ ಡೋಸ್ ಪಡೆಯಲು ಬನ್ನಿ ಎಂದು ಕೇಂದ್ರದಲ್ಲಿ ಹೇಳಿಕಳುಹಿಸಿದ್ದರು.

ಎರಡನೇ ಡೋಸ್ ಕೊರೊನಾ​ ಲಸಿಕೆಗೆ ವಾರಪೂರ್ತಿ ಅಲೆದಾಟ; ನಡುರಾತ್ರಿ ಲಸಿಕಾ ಕೇಂದ್ರಕ್ಕೆ ಬಂದ ವೃದ್ಧ ದಂಪತಿ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Skanda
|

Updated on: May 14, 2021 | 11:52 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸಿರುವ ಹೊತ್ತಿನಲ್ಲಿ ಲಸಿಕೆ ಕೊರತೆಯೂ ತಲೆದೋರಿರುವುದು ಮತ್ತಷ್ಟು ಸಂಕಟಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಬಹುತೇಕ ಎಲ್ಲಾ ಕಡೆ ಕೊರೊನಾ ಲಸಿಕೆಗೆ ಅಭಾವ ಉಂಟಾಗಿರುವ ಕಾರಣ ಜನರು ಎರಡನೇ ಡೋಸ್ ಪಡೆಯಲು ಸಾಧ್ಯವಾಗದೇ ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಎರಡನೇ ಡೋಸ್​ ಲಸಿಕೆ ಪಡೆಯಲು ಹರಸಾಹಸಪಟ್ಟ ವೃದ್ಧ ದಂಪತಿ ಅವ್ಯವಸ್ಥೆಯಿಂದ ಬೇಸತ್ತು ಮಧ್ಯರಾತ್ರಿ 2 ಗಂಟೆಗೆ ಯಲಹಂಕದ ಪಿಯು ಕಾಲೇಜಿನ ಲಸಿಕಾ ಕೇಂದ್ರಕ್ಕೆ ಬಂದ ಘಟನೆ ನಡೆದಿದೆ.

ಅಟ್ಟೂರು ಲೇಔಟ್​ ನಿವಾಸಿಗಳಾದ ದೇವೇಂದ್ರಪ್ಪ (65 ವರ್ಷ), ಲಕ್ಷ್ಮಮ್ಮ (56 ವರ್ಷ) ಏಪ್ರಿಲ್ 3 ರಂದು ಮೊದಲ ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡಿದ್ದರು. ಇಬ್ಬರೂ ಕೊವ್ಯಾಕ್ಸಿನ್ ಲಸಿಕೆ ಪಡೆದಿದ್ದು, ಮೇ 1ರಂದು 2ನೇ ಡೋಸ್ ಪಡೆಯಲು ಬನ್ನಿ ಎಂದು ಕೇಂದ್ರದಲ್ಲಿ ಹೇಳಿಕಳುಹಿಸಿದ್ದರು. ಆದರೆ, ಕಳೆದ ಒಂದು ವಾರದಿಂದ ಮೂರು ಬಾರಿ ಲಸಿಕಾ ಕೇಂದ್ರಕ್ಕೆ ಬಂದರೂ ಲಸಿಕೆ ಸಿಗದ ಕಾರಣ ವಾಪಾಸು ಹೋಗುವಂತಾಗಿದೆ. ಇದರಿಂದ ಬೇಸತ್ತ ದಂಪತಿ ಟೋಕನ್ ಕೊಡುತ್ತಾರೆ ಎಂದು ಮಧ್ಯರಾತ್ರಿಯೇ ಕೇಂದ್ರಕ್ಕೆ ಬಂದಿದ್ದಾರೆ.

ಕೇವಲ ಬೆಂಗಳೂರಿನಲ್ಲಿ ಮಾತ್ರ ಅಲ್ಲದೇ ರಾಜ್ಯದ ಹಲವೆಡೆ ಈ ಸಮಸ್ಯೆ ತಲೆದೋರಿದ್ದು, ಎರಡನೇ ಡೋಸ್ ಲಸಿಕೆ ಪಡೆಯಲಾಗದೇ ಜನರು ಪರದಾಟ ನಡೆಸುತ್ತಿದ್ದಾರೆ. ಏತನ್ಮಧ್ಯೆ ಮೇ 1ರಿಂದ 18ರಿಂದ 44 ವರ್ಷದವರಿಗೂ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿತ್ತಾದರೂ ಇದೀಗ ರಾಜ್ಯದಲ್ಲಿ ಎರಡನೇ ಡೋಸ್ ಪೂರೈಕೆಗೆ ಸಮರ್ಪಕ ವ್ಯವಸ್ಥೆ ಮಾಡುವ ತನಕ 18-44 ವರ್ಷದವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್