AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್: ಚಾಕು, ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿ

ಹಳೆ ದ್ವೇಷ ಹಿನ್ನೆಲೆ ಮಾರಾಕಾಸ್ತ್ರಗಳ ಸಮೇತ ಮನೆಗೆ ನುಗ್ಗಿ ಒಂದು ಗ್ಯಾಂಗ್​ನಿಂದ ಇನ್ನೊಂದು ಗ್ಯಾಂಗ್​ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವಂತಹ ಘಟನೆ ಬೆಂಗಳೂರಿನ ರಾಜಗೋಪಾಲದ ಕಪಿಲಾನಗರದ 4ನೇ ಕ್ರಾಸ್​ ಮನೆಯಲ್ಲಿ ನಡೆದಿದೆ. ಮನೆಯಲ್ಲಿದ್ದ ಮೂವರ ಮೇಲೆ 6-7 ಜನರ ಗ್ಯಾಂಗ್​ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್: ಚಾಕು, ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿ
ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್: ಚಾಕು, ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿ
TV9 Web
| Edited By: |

Updated on: Sep 28, 2024 | 6:36 PM

Share

ಬೆಂಗಳೂರು, ಸೆಪ್ಟೆಂಬರ್ 28: ಇಬ್ಬರು ರೌಡಿಶೀಟರ್​ಗಳ (Rowdy Sheeter) ಗ್ಯಾಂಗ್ ಮಧ್ಯೆ ಅನೇಕ ವರ್ಷಗಳಿಂದ ದ್ವೇಷ ಇತ್ತು. ಇದೇ ವೈರತ್ವ ಈಗ ಕೊಲೆ ಯತ್ನಕ್ಕೂ ಕಾರಣವಾಗಿದೆ. ಪಾರ್ಟಿ ಮಾಡುತ್ತಿದ್ದ ಒಂದು ಗ್ಯಾಂಗ್ ಮೇಲೆ ಮತ್ತೊಂದು ಗ್ಯಾಂಗ್ ದಾಳಿ ನಡೆಸಿತ್ತು. ಮಚ್ಚು, ಲಾಂಗ್​ಗಳಿಂದ 4-5 ಜನರ ಮೇಲೆ ಹಲ್ಲೆ ಮಾಡಿತ್ತು. ಅದೃಷ್ಟವಶಾತ್ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ. ಆದರೆ ಇಂತ ಕೃತ್ಯ ಎಸಗಿದ್ದ ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸದಾ ಶಾಂತವಾಗಿರುವ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿರುವ ಕಪಿಲಾ ನಗರ, ಕಳೆದ ಗುರುವಾರ ರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. 4ನೇ ಕ್ರಾಸ್​ನ ಬಿಲ್ಡಿಂಗ್​ನ 4ನೇ ಫ್ಲೋರ್ ಮನೆಯಲ್ಲಿ ಚಾಕು, ಲಾಂಗ್ ಝಳಪಿಸಿತ್ತು. ಇಬ್ಬರು ರೌಡಿಶೀಟರ್​ಗಳ ಮಧ್ಯೆ ಇದ್ದಂತ ಹಳೇ ದ್ವೇಷ ತಾರಕ್ಕಕ್ಕೇರಿ ಒಬ್ಬನನ್ನ ಕೊಲೆ ಮಾಡಲು ಇನ್ನೊಬ್ಬ ವಿಫಲ ಯತ್ನ ನಡೆಸಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಯೆಸ್. ನಂದಿನಿ ಲೇಔಟ್ ಪೊಲೀಸ್ ಠಾಣೆಯ ರೌಡಿಶೀಟರ್​​ಗಳಾದ ನರೇಂದ್ರ ಅಲಿಯಾಸ್​​ ದಾಸ ಮತ್ತು ರಮೇಶ್ ಅಲಿಯಾಸ್​​ ಬಳಿಲು ಮಧ್ಯೆ ಕೆಲ ವರ್ಷಗಳಿಂದ ದ್ವೇಷ ಇತ್ತು. ಆಗಾಗ ಜಗಳ ಆಗುತ್ತಿತ್ತು. ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ಆಗಿತ್ತು. ಹೀಗಿರೋವಾಗ ನರೇಂದ್ರ ತನ್ನ ಸ್ನೇಹಿತರ ಜೊತೆ ಪಾರ್ಟಿ ಮಾಡುವಾಗ ರಮೇಶ್ ತನ್ನ ಸಹಚರರೊಂದಿಗೆ ದಾಳಿ ನಡೆಸಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ. ಸದ್ಯ ಗಾಯಳು ನರೇಂದ್ರ ರಾಜಗೋಪಾಲ ನಗರ ಠಾಣೆಯಲ್ಲಿ ರಮೇಶ್ ಮತ್ತು ಟೀಂ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಿದ್ದಾನೆ.

ನಡುರಾತ್ರಿಯಲ್ಲಿ ಬೈಕ್​ನಲ್ಲಿ ಹೋಗ್ತಿದ್ದ ಯುವಕರ ಸುಲಿಗೆ

ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿ ಮೀರಿದೆ. ನಡುರಾತ್ರಿ ಯಾರೂ ಓಡಾಡದ ಸ್ಥಿತಿ ಎದುರಾಗಿದೆ. ಎರಡು ದಿನದ ಹಿಂದೆ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿರುವ ಸುಲಿಗೆಯೇ ಇದಕ್ಕೆ ಕಾರಣ. ಹೌದು. ಸೋಮವಾರ ಮುಂಜಾನೆ 3.30ರ ಸುಮಾರಿಗೆ ಇಬ್ಬರು ಯುವಕರು ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ  ಸರ್ಕಲ್ ಬಳಿ ತಮ್ಮ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ನಂಬರ್ ಪ್ಲೇಟ್ ಇಲ್ಲದ ಬೈಕ್​ನಲ್ಲಿ ಬಂದ ಇಬ್ಬರು ಪುಂಡರು ಇಬ್ಬ ಯುವಕನ ಬಳಿ ಚಿನ್ನದ ಸರ ಕಿತ್ತು ಎಸ್ಕೇಪ್ ಆಗುತ್ತಿದ್ದರು. ಆದರೆ ಅವರನ್ನ ಚೇಸ್ ಮಾಡಿದ ಯುವಕರನ್ನ ಮತ್ತೆ ಮಾಡಿ ಅಡ್ಡಗಟ್ಟಿದ ಅದೇ ಪುಂಡರು ಮತ್ತೊಬ್ಬನ ಬಳಿಯೂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!