AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

2 ವರ್ಷಗಳ ಹಿಂದೆ ವ್ಯಾಪಾರಿಯೊಬ್ಬರ ಬಳಿ 35 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರಿಂದ ನಾಲ್ವರ ಬಂಧನವಾಗಿದೆ.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!
2 ವರ್ಷಗಳ ಹಿಂದೆ ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​
KUSHAL V
|

Updated on: Jan 24, 2021 | 5:47 PM

Share

ಹುಬ್ಬಳ್ಳಿ: 2 ವರ್ಷಗಳ ಹಿಂದೆ ವ್ಯಾಪಾರಿಯೊಬ್ಬರ ಬಳಿ 35 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರಿಂದ ನಾಲ್ವರ ಬಂಧನವಾಗಿದೆ. ಬಂಧಿತರನ್ನು ಇಸಾಕ್ ಸುತಾರ್, ದಾದಾಪೀರ್ ನದಾಫ್, ಖಾಜಾ ದುಕಾಂದರ್ ಹಾಗೂ ಆಸಿಫ್ ಬಂಕಾಪುರ್ ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ? ಆರೋಪಿಗಳು ಸುಮಾರು 2 ವರ್ಷಗಳ ಹಿಂದೆ ಶಿರಸಿಯ ಅಡಕೆ ವ್ಯಾಪಾರಿಗೆ ಸೇರಿದ್ದ 35 ಲಕ್ಷ ರೂಪಾಯಿ ನಗದನ್ನು ದೋಚಿದ್ರು. ನಗರದ ದುರ್ಗದ ಬೈಲನಲ್ಲಿರುವ ವ್ಯಾಪಾರಿಯೊಬ್ಬರಿಂದ ಹಣ ಪಡೆದು ಶಿರಸಿಯ ಅಡಿಕೆ ವ್ಯಾಪಾರಿಯ ನೌಕರ ರಜಾಕ್​ ಬಸ್​ನಲ್ಲಿ ತನ್ನ ಊರಿಗೆ ತೆರಳುತ್ತಿದ್ದರು. ಈ ವೇಳೆ, ದರೋಡೆಕೋರರು ನಗರದ ಹೊರವಲಯದ ಕಾರವಾರ ರಸ್ತೆಯಲ್ಲಿ ಬಸ್​ನ ಅಡ್ಡಗಟ್ಟಿ ಸಿನಿಮೀಯ ಸ್ಟೈಲ್​ನಲ್ಲಿ ರಜಾಕ್​ನಿಂದ ಹಣವಿದ್ದ ಬ್ಯಾಗ್ ಕಸಿದು ಪರಾರಿಯಾಗಿದ್ದರು.

ಈ ಕುರಿತು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ, ಹಳೇ ಹುಬ್ಬಳ್ಳಿ ಠಾಣೆಯ ಇನ್​ಸ್ಪೆಕ್ಟರ್​ ಕಮತರ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರ ಶೋಧಕಾರ್ಯ ನಡೆಸುತ್ತಿದ್ದಾರೆ.

ಈಜಲು ಹೋಗುತ್ತೇನೆ ಎಂದು ನಿನ್ನೆ ಮನೆಯಿಂದ ತೆರಳಿದ್ದ ಬಾಲಕ.. ಇಂದು ಕೆರೆಯಲ್ಲಿ ಶವವಾಗಿ ಪತ್ತೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?