AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದವ ಸೇರಿ ನಾಲ್ವರ ಸೆರೆ

ಧಾರವಾಡ: ನಕಲಿ ಅಂಕಪಟ್ಟಿ ನೀಡಿ ಕಿರಿಯ ಲೈನ್‌ಮನ್ ನೌಕರಿ‌ ಗಿಟ್ಟಿಸಿಕೊಂಡಿದ್ದವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 2017ರಲ್ಲಿ ಕಿರಿಯ ಲೈನ್‌ಮನ್ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಹಾವೇರಿಯ ಹಾದ್ರಿಹಳ್ಳಿ ಗ್ರಾಮದ ನಿವಾಸೆ ಸಿದ್ದಪ್ಪ ಹೊನ್ನಪ್ಪ ಕೆಲಸಕ್ಕೆ ಸೇರಿಕೊಂಡಿದ್ದ. ಈತನಿಗೆ ಹಾದ್ರಿಹಳ್ಳಿ ಗ್ರಾಮದ ಶಿವಕುಮಾರ್ ಉಪ್ಪಾರ, ಕಲಬುರಗಿ ಜಿಲ್ಲೆ ಜೇವರ್ಗಿಯ ಕರಣಪ್ಪಗೌಡ ಹಾಗೂ ಕಲಬುರಗಿಯ ಶಿವಶರಣಪ್ಪ ಪಾಟೀಲ್ ಸಹಕರಿಸಿದ್ದರು. ಈ ಬಗ್ಗೆ ಅನುಮಾನಗೊಂಡ ಕೆಪಿಟಿಸಿಎಲ್ ಹುಬ್ಬಳ್ಳಿಯ ಕಾರ್ಯನಿರ್ವಾಹಕ ಅಭಿಯಂತರ […]

ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದವ ಸೇರಿ ನಾಲ್ವರ ಸೆರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 02, 2019 | 9:33 AM

Share

ಧಾರವಾಡ: ನಕಲಿ ಅಂಕಪಟ್ಟಿ ನೀಡಿ ಕಿರಿಯ ಲೈನ್‌ಮನ್ ನೌಕರಿ‌ ಗಿಟ್ಟಿಸಿಕೊಂಡಿದ್ದವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

2017ರಲ್ಲಿ ಕಿರಿಯ ಲೈನ್‌ಮನ್ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಹಾವೇರಿಯ ಹಾದ್ರಿಹಳ್ಳಿ ಗ್ರಾಮದ ನಿವಾಸೆ ಸಿದ್ದಪ್ಪ ಹೊನ್ನಪ್ಪ ಕೆಲಸಕ್ಕೆ ಸೇರಿಕೊಂಡಿದ್ದ. ಈತನಿಗೆ ಹಾದ್ರಿಹಳ್ಳಿ ಗ್ರಾಮದ ಶಿವಕುಮಾರ್ ಉಪ್ಪಾರ, ಕಲಬುರಗಿ ಜಿಲ್ಲೆ ಜೇವರ್ಗಿಯ ಕರಣಪ್ಪಗೌಡ ಹಾಗೂ ಕಲಬುರಗಿಯ ಶಿವಶರಣಪ್ಪ ಪಾಟೀಲ್ ಸಹಕರಿಸಿದ್ದರು.

ಈ ಬಗ್ಗೆ ಅನುಮಾನಗೊಂಡ ಕೆಪಿಟಿಸಿಎಲ್ ಹುಬ್ಬಳ್ಳಿಯ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್ ಕಮಶಿಕರ ಎಂಬುವರು ದೂರು ನೀಡಿದ್ದರು. ಪ್ರಕರಣದ ತನಿಖೆ ಆರಂಭಿಸಿದ ಹಳೇ ಹುಬ್ಬಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು