Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು

ಹಳೆ ಕೆಎಸ್​ಆರ್​ಟಿಸಿ ಬಸ್​ಗಳನ್ನು ನವೀಕರಿಸುವ ಕಾರ್ಯ ಕೆಲವು ತಿಂಗಳ ಹಿಂದೆ ಆರಂಭವಾಗಿತ್ತು. ಅದರಂತೆ ಕೆಲವು ಬಸ್​ಗಳು ಹೊಸ ರೂಪ ಪಡೆದು ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಕಾರ್ಯಾಚರಣೆಗೆ ಇಳಿದಿವೆ.

ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು
ಕೆಎಸ್​​ಆರ್​ಟಿಸಿ
Follow us
Rakesh Nayak Manchi
|

Updated on:Aug 07, 2023 | 6:32 PM

ಕೋಲಾರ/ ಚಿಕ್ಕಬಳ್ಳಾಪುರ, ಆಗಸ್ಟ್ 7: ಹಳೆ ಕೆಎಸ್​ಆರ್​ಟಿಸಿ (KSRTC) ಬಸ್​ಗಳು ಹೊಸ ರೂಪದೊಂದಿಗೆ ಕಾರ್ಯಾಚರಣೆ ಆರಂಭಿಸಿವೆ. ಬೆಂಗಳೂರಿನ (Bengaluru) ಕೆಂಗೇರಿಯಲ್ಲಿರುವ ಪ್ರಾದೇಶಿಕ ಕಾರ್ಯಾಗಾರದಲ್ಲಿ ನವೀಕರಿಸಿದ ಸುಮಾರು 45 ಬಸ್​ಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ (Chikkaballapur) ಮತ್ತು ಕೋಲಾರ (Kolar) ವಿಭಾಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ಕೆಎಸ್​​ಆರ್​​ಟಿಸಿ ಚಿಕ್ಕಬಳ್ಳಾಪುರ ವಿಭಾಗದ ಮೂಲಗಳ ಪ್ರಕಾರ, ವಿಭಾಗಕ್ಕೆ ಸೇರಿದ ವಿವಿಧ ಡಿಪೋಗಳಲ್ಲಿ 14 ನವೀಕರಿಸಿದ ಬಸ್ಸುಗಳನ್ನು ಬಳಸಲಾಗುತ್ತಿದೆ. ಕೋಲಾರದಲ್ಲಿ ಒಟ್ಟು 20 ನವೀಕರಿಸಿದ ಬಸ್ಸುಗಳನ್ನು ಸೇವೆಗೆ ಬಳಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನ್ನು ಕೆಎಸ್​ಆರ್​ಟಿಸಿ ಬಸ್​​ಗಳು ಎಡ ಬದಿಯ ಲೇನ್​ನಲ್ಲೇ ಸಂಚರಿಸಬೇಕು

ಸಾಮಾನ್ಯವಾಗಿ, ಒಂಬತ್ತು ಲಕ್ಷ ಕಿಲೋಮೀಟರ್​ಗಿಂತ ಹೆಚ್ಚು ಚಲಿಸಿದ ಬಸ್ಸುಗಳನ್ನು ಗುಜರಿ ಬಸ್​ಗಳೆಂದು ಪರಿಗಣಿಸಲಾಗುತ್ತದೆ. ಆದರೆ, ಶಕ್ತಿ ಯೋಜನೆ ಜಾರಿ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾದ ಹಿನ್ನೆಲೆ ಹೆಚ್ಚುವರಿ ಬಸ್​ಗಳನ್ನು ಕಾರ್ಯಾಚರಣೆ ನಡೆಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಬಸ್​ಗಳ ಖರೀದಿ ಬದಲು ಹಳೇ ಬಸ್ಸುಗಳನ್ನು ನವೀಕರಿಸಲು ಕೆಎಸ್ಆರ್​ಟಿಸಿ ನಿರ್ಧರಿಸಿತ್ತು.

ನವೀಕರಿಸಿದ ಬಸ್​ಗಳ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಪ್ರಭಾರ ಡಿಪೋ ಮ್ಯಾನೇಜರ್ ಶಿಲ್ಪಾ, ನವೀಕರಿಸಿದ ಬಸ್​ಗಳನ್ನು ಇನ್ನೂ ಒಂದೂವರೆಯಿಂದ ಎರಡು ಲಕ್ಷ ಕಿಲೋಮೀಟರ್ ವರೆಗೆ ಓಡಿಸಬಹುದು. ಅಂತಹ ಆರು ಬಸ್ಸುಗಳನ್ನು ಚಿಕ್ಕಬಳ್ಳಾಪುರ ಡಿಪೋವೇ ನಿರ್ವಹಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Mon, 7 August 23

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ