AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು

ಹಳೆ ಕೆಎಸ್​ಆರ್​ಟಿಸಿ ಬಸ್​ಗಳನ್ನು ನವೀಕರಿಸುವ ಕಾರ್ಯ ಕೆಲವು ತಿಂಗಳ ಹಿಂದೆ ಆರಂಭವಾಗಿತ್ತು. ಅದರಂತೆ ಕೆಲವು ಬಸ್​ಗಳು ಹೊಸ ರೂಪ ಪಡೆದು ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಕಾರ್ಯಾಚರಣೆಗೆ ಇಳಿದಿವೆ.

ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು
ಕೆಎಸ್​​ಆರ್​ಟಿಸಿ
Rakesh Nayak Manchi
|

Updated on:Aug 07, 2023 | 6:32 PM

Share

ಕೋಲಾರ/ ಚಿಕ್ಕಬಳ್ಳಾಪುರ, ಆಗಸ್ಟ್ 7: ಹಳೆ ಕೆಎಸ್​ಆರ್​ಟಿಸಿ (KSRTC) ಬಸ್​ಗಳು ಹೊಸ ರೂಪದೊಂದಿಗೆ ಕಾರ್ಯಾಚರಣೆ ಆರಂಭಿಸಿವೆ. ಬೆಂಗಳೂರಿನ (Bengaluru) ಕೆಂಗೇರಿಯಲ್ಲಿರುವ ಪ್ರಾದೇಶಿಕ ಕಾರ್ಯಾಗಾರದಲ್ಲಿ ನವೀಕರಿಸಿದ ಸುಮಾರು 45 ಬಸ್​ಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ (Chikkaballapur) ಮತ್ತು ಕೋಲಾರ (Kolar) ವಿಭಾಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ಕೆಎಸ್​​ಆರ್​​ಟಿಸಿ ಚಿಕ್ಕಬಳ್ಳಾಪುರ ವಿಭಾಗದ ಮೂಲಗಳ ಪ್ರಕಾರ, ವಿಭಾಗಕ್ಕೆ ಸೇರಿದ ವಿವಿಧ ಡಿಪೋಗಳಲ್ಲಿ 14 ನವೀಕರಿಸಿದ ಬಸ್ಸುಗಳನ್ನು ಬಳಸಲಾಗುತ್ತಿದೆ. ಕೋಲಾರದಲ್ಲಿ ಒಟ್ಟು 20 ನವೀಕರಿಸಿದ ಬಸ್ಸುಗಳನ್ನು ಸೇವೆಗೆ ಬಳಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನ್ನು ಕೆಎಸ್​ಆರ್​ಟಿಸಿ ಬಸ್​​ಗಳು ಎಡ ಬದಿಯ ಲೇನ್​ನಲ್ಲೇ ಸಂಚರಿಸಬೇಕು

ಸಾಮಾನ್ಯವಾಗಿ, ಒಂಬತ್ತು ಲಕ್ಷ ಕಿಲೋಮೀಟರ್​ಗಿಂತ ಹೆಚ್ಚು ಚಲಿಸಿದ ಬಸ್ಸುಗಳನ್ನು ಗುಜರಿ ಬಸ್​ಗಳೆಂದು ಪರಿಗಣಿಸಲಾಗುತ್ತದೆ. ಆದರೆ, ಶಕ್ತಿ ಯೋಜನೆ ಜಾರಿ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾದ ಹಿನ್ನೆಲೆ ಹೆಚ್ಚುವರಿ ಬಸ್​ಗಳನ್ನು ಕಾರ್ಯಾಚರಣೆ ನಡೆಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಬಸ್​ಗಳ ಖರೀದಿ ಬದಲು ಹಳೇ ಬಸ್ಸುಗಳನ್ನು ನವೀಕರಿಸಲು ಕೆಎಸ್ಆರ್​ಟಿಸಿ ನಿರ್ಧರಿಸಿತ್ತು.

ನವೀಕರಿಸಿದ ಬಸ್​ಗಳ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಪ್ರಭಾರ ಡಿಪೋ ಮ್ಯಾನೇಜರ್ ಶಿಲ್ಪಾ, ನವೀಕರಿಸಿದ ಬಸ್​ಗಳನ್ನು ಇನ್ನೂ ಒಂದೂವರೆಯಿಂದ ಎರಡು ಲಕ್ಷ ಕಿಲೋಮೀಟರ್ ವರೆಗೆ ಓಡಿಸಬಹುದು. ಅಂತಹ ಆರು ಬಸ್ಸುಗಳನ್ನು ಚಿಕ್ಕಬಳ್ಳಾಪುರ ಡಿಪೋವೇ ನಿರ್ವಹಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Mon, 7 August 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ