AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು

ಹಳೆ ಕೆಎಸ್​ಆರ್​ಟಿಸಿ ಬಸ್​ಗಳನ್ನು ನವೀಕರಿಸುವ ಕಾರ್ಯ ಕೆಲವು ತಿಂಗಳ ಹಿಂದೆ ಆರಂಭವಾಗಿತ್ತು. ಅದರಂತೆ ಕೆಲವು ಬಸ್​ಗಳು ಹೊಸ ರೂಪ ಪಡೆದು ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಕಾರ್ಯಾಚರಣೆಗೆ ಇಳಿದಿವೆ.

ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು
ಕೆಎಸ್​​ಆರ್​ಟಿಸಿ
Rakesh Nayak Manchi
Rakesh Nayak Manchi|

Updated on:Aug 07, 2023 | 6:32 PM

Share

ಕೋಲಾರ/ ಚಿಕ್ಕಬಳ್ಳಾಪುರ, ಆಗಸ್ಟ್ 7: ಹಳೆ ಕೆಎಸ್​ಆರ್​ಟಿಸಿ (KSRTC) ಬಸ್​ಗಳು ಹೊಸ ರೂಪದೊಂದಿಗೆ ಕಾರ್ಯಾಚರಣೆ ಆರಂಭಿಸಿವೆ. ಬೆಂಗಳೂರಿನ (Bengaluru) ಕೆಂಗೇರಿಯಲ್ಲಿರುವ ಪ್ರಾದೇಶಿಕ ಕಾರ್ಯಾಗಾರದಲ್ಲಿ ನವೀಕರಿಸಿದ ಸುಮಾರು 45 ಬಸ್​ಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ (Chikkaballapur) ಮತ್ತು ಕೋಲಾರ (Kolar) ವಿಭಾಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ಕೆಎಸ್​​ಆರ್​​ಟಿಸಿ ಚಿಕ್ಕಬಳ್ಳಾಪುರ ವಿಭಾಗದ ಮೂಲಗಳ ಪ್ರಕಾರ, ವಿಭಾಗಕ್ಕೆ ಸೇರಿದ ವಿವಿಧ ಡಿಪೋಗಳಲ್ಲಿ 14 ನವೀಕರಿಸಿದ ಬಸ್ಸುಗಳನ್ನು ಬಳಸಲಾಗುತ್ತಿದೆ. ಕೋಲಾರದಲ್ಲಿ ಒಟ್ಟು 20 ನವೀಕರಿಸಿದ ಬಸ್ಸುಗಳನ್ನು ಸೇವೆಗೆ ಬಳಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನ್ನು ಕೆಎಸ್​ಆರ್​ಟಿಸಿ ಬಸ್​​ಗಳು ಎಡ ಬದಿಯ ಲೇನ್​ನಲ್ಲೇ ಸಂಚರಿಸಬೇಕು

ಸಾಮಾನ್ಯವಾಗಿ, ಒಂಬತ್ತು ಲಕ್ಷ ಕಿಲೋಮೀಟರ್​ಗಿಂತ ಹೆಚ್ಚು ಚಲಿಸಿದ ಬಸ್ಸುಗಳನ್ನು ಗುಜರಿ ಬಸ್​ಗಳೆಂದು ಪರಿಗಣಿಸಲಾಗುತ್ತದೆ. ಆದರೆ, ಶಕ್ತಿ ಯೋಜನೆ ಜಾರಿ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾದ ಹಿನ್ನೆಲೆ ಹೆಚ್ಚುವರಿ ಬಸ್​ಗಳನ್ನು ಕಾರ್ಯಾಚರಣೆ ನಡೆಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಬಸ್​ಗಳ ಖರೀದಿ ಬದಲು ಹಳೇ ಬಸ್ಸುಗಳನ್ನು ನವೀಕರಿಸಲು ಕೆಎಸ್ಆರ್​ಟಿಸಿ ನಿರ್ಧರಿಸಿತ್ತು.

ನವೀಕರಿಸಿದ ಬಸ್​ಗಳ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಪ್ರಭಾರ ಡಿಪೋ ಮ್ಯಾನೇಜರ್ ಶಿಲ್ಪಾ, ನವೀಕರಿಸಿದ ಬಸ್​ಗಳನ್ನು ಇನ್ನೂ ಒಂದೂವರೆಯಿಂದ ಎರಡು ಲಕ್ಷ ಕಿಲೋಮೀಟರ್ ವರೆಗೆ ಓಡಿಸಬಹುದು. ಅಂತಹ ಆರು ಬಸ್ಸುಗಳನ್ನು ಚಿಕ್ಕಬಳ್ಳಾಪುರ ಡಿಪೋವೇ ನಿರ್ವಹಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Mon, 7 August 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ