AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali Special Train: ಪ್ರಯಾಣಿಕರಿಗೆ ಸಿಹಿ ಸುದ್ದಿ; ಬೆಂಗಳೂರಿನಿಂದ ತಾಳಗುಪ್ಪ, ಬೆಳಗಾವಿಗೆ ದೀಪಾವಳಿ ವಿಶೇಷ ರೈಲು

ದೀಪಾವಳಿ ಹಿನ್ನಲೆ ಬೆಂಗಳೂರಿನಿಂದ ತಾಳಗುಪ್ಪ ಮತ್ತು ಬೆಳಗಾವಿಗೆ ವಿಶೇಷ ರೈಲುಗಳನ್ನ ಸೌತ್​ ವೆಸ್ಟರ್ನ್​ ರೈಲ್ವೇ (SWR) ಘೋಷಿಸಿದೆ. ಯಾವ ಯಾವ ದಿನ ಈ ರೈಲುಗಳು ಸಂಚರಿಸಲಿವೆ? ರೈಲು ಹೊರಡುವ ನಿಲ್ದಾಣ ಯಾವುದು? ಯಾವ ಮಾರ್ಗವಾಗಿ ಸಂಚಾರ? ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ ಗಮನಿಸಿ.

Deepavali Special Train: ಪ್ರಯಾಣಿಕರಿಗೆ ಸಿಹಿ ಸುದ್ದಿ; ಬೆಂಗಳೂರಿನಿಂದ ತಾಳಗುಪ್ಪ, ಬೆಳಗಾವಿಗೆ ದೀಪಾವಳಿ ವಿಶೇಷ ರೈಲು
ವಿಶೇಷ ರೈಲು
ಪ್ರಸನ್ನ ಹೆಗಡೆ
|

Updated on:Oct 13, 2025 | 12:19 PM

Share

ಬೆಂಗಳೂರು, ಅಕ್ಟೋಬರ್​ 13: ದೀಪಾವಳಿ ಹಬ್ಬದ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು (Train) ಸೌತ್​ ವೆಸ್ಟರ್ನ್​ ರೈಲ್ವೇ (SWR) ಘೋಷಿಸಿದೆ. ಬೆಂಗಳೂರು-ತಾಳಗುಪ್ಪ, ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಹಬ್ಬದ ವೇಳೆ ಕರ್ನಾಟಕದ ವಿವಿಧ ಭಾಗಗಳಿಗೆ ತೆರಳಲಿರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು ಘೋಷಿಸಿರೋದಾಗಿ ಎಸ್​ ಡಬ್ಲ್ಯೂಆರ್​ ತಿಳಿಸಿದೆ. ವಿಶೇಷ ರೈಲುಗಳ ಘೋಷಣೆಯಿಂದ ಈ ಮಾರ್ಗದಲ್ಲಿ ಪ್ರತಿನಿತ್ಯ ಸಂಚರಿಸುತ್ತಿರೋ ರೈಲುಗಳಲ್ಲಿ ಪ್ರಯಾಣಿಕರ ನೂಕುನುಗ್ಗಲು ಕೂಡ ಕಡಿಮೆಯಾಗಲಿದೆ.

ಅಕ್ಟೋಬರ್​ 17 ಮತ್ತು 24ರಂದು ರೈಲು ಸಂಖ್ಯೆ 06587 (ಯಶವಂತಪುರ-ತಾಳಗುಪ್ಪ) ಯಶವಂತಪುರ ರೈಲ್ವೇ ನಿಲ್ದಾಣದಿಂದ ರಾತ್ರಿ 10.30ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 4.15ಕ್ಕೆ ತಾಳುಗುಪ್ಪ ತಲುಪಲಿದೆ. ಅಕ್ಟೋಬರ್​ 18 ಮತ್ತು 25ರಂದು ರೈಲು ಸಂಖ್ಯೆ 06588 (ತಾಳಗುಪ್ಪ-ಯಶವಂತಪುರ) ತಾಳಗುಪ್ಪ ರೈಲ್ವೇ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ಹೊರಡಲಿದ್ದು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ತುಮಕೂರು, ತಿಪಟೂರು, ಅರಸೀಕೆರೆ, ಬಿರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ನಗರ, ಆನಂದಪುರ, ಸಾಗರ, ಜಂಬಗಾರು ಮಾರ್ಗವಾಗಿ ಈ ರೈಲು ಸಂಚರಿಸಲಿದೆ.

ಇದನ್ನೂ ಓದಿ: ದೀಪಾವಳಿಯ ಮುಂದಿನ 6 ತಿಂಗಳು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ

ಬೆಂಗಳೂರಿನ ಶ್ರೀ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​ (SMVT)ಯಿಂದ ಬೆಳಗಾವಿಗೂ ಹಬ್ಬದ ಹಿನ್ನಲೆ ವಿಶೇಷ ರೈಲು ಸಂಚರಿಸಲಿದೆ. ಅಕ್ಟೋಬರ್​ 17ರಂದು ರೈಲು ಸಂಖ್ಯೆ 06503 (SMVT ಬೆಂಗಳೂರು- ಬೆಳಗಾವಿ) ಎಸ್​ಎಂವಿಟಿಯಿಂದ ಸಂಜೆ 5.30ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 5.30ಕ್ಕೆ ಬೆಳಗಾವಿ ತಲುಪಲಿದೆ. ಅಕ್ಟೋಬರ್​ 22ರಂದು ರೈಲು ಸಂಖ್ಯೆ 06504 (ಬೆಳಗಾವಿ-SMVT ಬೆಂಗಳೂರು) ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 5 ಗಂಟೆಗೆ SMVT ಬೆಂಗಳೂರು ನಿಲ್ದಾಣ ತಲುಪಲಿದೆ. ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಮಾರ್ಗವಾಗಿ ಈ ರೈಲು ಸಂಚಾರ ನಡೆಸಲಿದೆ.

ಹಬ್ಬದ ಸಂದರ್ಭ ಪ್ರಯಾಣಿಕರ ಓಡಾಟ ಹೆಚ್ಚಿರಲಿದ್ದು, ಬೇಡಿಕೆಗೆ ಅನುಗುಣವಾಗಿ ಈ ವಿಶೇಷ ರೈಲುಗಳು ಸಂಚರಿಸಲಿವೆ. ದೀಪಾವಳಿ ಸಂದರ್ಭ ಪ್ರತಿವರ್ಷ ಬೆಂಗಳೂರಿನಿಂದ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಿರಲಿದೆ. ಹೀಗಾಗಿ ಈ ವಿಶೇಷ ರೈಲುಗಳು ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ನೆರವಾಗಲಿದೆ ಎಂದು ಸೌತ್​ ವೆಸ್ಟರ್ನ್​ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬೇರೆ ಮಾರ್ಗಗಳಲ್ಲಿಯೂ ವಿಶೇಷ ರೈಲುಗಳನ್ನು ಎಸ್​ ಡಬ್ಲ್ಯೂಆರ್ ಘೋಷಿಸುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:18 pm, Mon, 13 October 25

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ