AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali Special Train: ಪ್ರಯಾಣಿಕರಿಗೆ ಸಿಹಿ ಸುದ್ದಿ; ಬೆಂಗಳೂರಿನಿಂದ ತಾಳಗುಪ್ಪ, ಬೆಳಗಾವಿಗೆ ದೀಪಾವಳಿ ವಿಶೇಷ ರೈಲು

ದೀಪಾವಳಿ ಹಿನ್ನಲೆ ಬೆಂಗಳೂರಿನಿಂದ ತಾಳಗುಪ್ಪ ಮತ್ತು ಬೆಳಗಾವಿಗೆ ವಿಶೇಷ ರೈಲುಗಳನ್ನ ಸೌತ್​ ವೆಸ್ಟರ್ನ್​ ರೈಲ್ವೇ (SWR) ಘೋಷಿಸಿದೆ. ಯಾವ ಯಾವ ದಿನ ಈ ರೈಲುಗಳು ಸಂಚರಿಸಲಿವೆ? ರೈಲು ಹೊರಡುವ ನಿಲ್ದಾಣ ಯಾವುದು? ಯಾವ ಮಾರ್ಗವಾಗಿ ಸಂಚಾರ? ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ ಗಮನಿಸಿ.

Deepavali Special Train: ಪ್ರಯಾಣಿಕರಿಗೆ ಸಿಹಿ ಸುದ್ದಿ; ಬೆಂಗಳೂರಿನಿಂದ ತಾಳಗುಪ್ಪ, ಬೆಳಗಾವಿಗೆ ದೀಪಾವಳಿ ವಿಶೇಷ ರೈಲು
ವಿಶೇಷ ರೈಲು
ಪ್ರಸನ್ನ ಹೆಗಡೆ
|

Updated on:Oct 13, 2025 | 12:19 PM

Share

ಬೆಂಗಳೂರು, ಅಕ್ಟೋಬರ್​ 13: ದೀಪಾವಳಿ ಹಬ್ಬದ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು (Train) ಸೌತ್​ ವೆಸ್ಟರ್ನ್​ ರೈಲ್ವೇ (SWR) ಘೋಷಿಸಿದೆ. ಬೆಂಗಳೂರು-ತಾಳಗುಪ್ಪ, ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಹಬ್ಬದ ವೇಳೆ ಕರ್ನಾಟಕದ ವಿವಿಧ ಭಾಗಗಳಿಗೆ ತೆರಳಲಿರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು ಘೋಷಿಸಿರೋದಾಗಿ ಎಸ್​ ಡಬ್ಲ್ಯೂಆರ್​ ತಿಳಿಸಿದೆ. ವಿಶೇಷ ರೈಲುಗಳ ಘೋಷಣೆಯಿಂದ ಈ ಮಾರ್ಗದಲ್ಲಿ ಪ್ರತಿನಿತ್ಯ ಸಂಚರಿಸುತ್ತಿರೋ ರೈಲುಗಳಲ್ಲಿ ಪ್ರಯಾಣಿಕರ ನೂಕುನುಗ್ಗಲು ಕೂಡ ಕಡಿಮೆಯಾಗಲಿದೆ.

ಅಕ್ಟೋಬರ್​ 17 ಮತ್ತು 24ರಂದು ರೈಲು ಸಂಖ್ಯೆ 06587 (ಯಶವಂತಪುರ-ತಾಳಗುಪ್ಪ) ಯಶವಂತಪುರ ರೈಲ್ವೇ ನಿಲ್ದಾಣದಿಂದ ರಾತ್ರಿ 10.30ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 4.15ಕ್ಕೆ ತಾಳುಗುಪ್ಪ ತಲುಪಲಿದೆ. ಅಕ್ಟೋಬರ್​ 18 ಮತ್ತು 25ರಂದು ರೈಲು ಸಂಖ್ಯೆ 06588 (ತಾಳಗುಪ್ಪ-ಯಶವಂತಪುರ) ತಾಳಗುಪ್ಪ ರೈಲ್ವೇ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ಹೊರಡಲಿದ್ದು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ತುಮಕೂರು, ತಿಪಟೂರು, ಅರಸೀಕೆರೆ, ಬಿರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ನಗರ, ಆನಂದಪುರ, ಸಾಗರ, ಜಂಬಗಾರು ಮಾರ್ಗವಾಗಿ ಈ ರೈಲು ಸಂಚರಿಸಲಿದೆ.

ಇದನ್ನೂ ಓದಿ: ದೀಪಾವಳಿಯ ಮುಂದಿನ 6 ತಿಂಗಳು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ

ಬೆಂಗಳೂರಿನ ಶ್ರೀ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​ (SMVT)ಯಿಂದ ಬೆಳಗಾವಿಗೂ ಹಬ್ಬದ ಹಿನ್ನಲೆ ವಿಶೇಷ ರೈಲು ಸಂಚರಿಸಲಿದೆ. ಅಕ್ಟೋಬರ್​ 17ರಂದು ರೈಲು ಸಂಖ್ಯೆ 06503 (SMVT ಬೆಂಗಳೂರು- ಬೆಳಗಾವಿ) ಎಸ್​ಎಂವಿಟಿಯಿಂದ ಸಂಜೆ 5.30ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 5.30ಕ್ಕೆ ಬೆಳಗಾವಿ ತಲುಪಲಿದೆ. ಅಕ್ಟೋಬರ್​ 22ರಂದು ರೈಲು ಸಂಖ್ಯೆ 06504 (ಬೆಳಗಾವಿ-SMVT ಬೆಂಗಳೂರು) ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 5 ಗಂಟೆಗೆ SMVT ಬೆಂಗಳೂರು ನಿಲ್ದಾಣ ತಲುಪಲಿದೆ. ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಮಾರ್ಗವಾಗಿ ಈ ರೈಲು ಸಂಚಾರ ನಡೆಸಲಿದೆ.

ಹಬ್ಬದ ಸಂದರ್ಭ ಪ್ರಯಾಣಿಕರ ಓಡಾಟ ಹೆಚ್ಚಿರಲಿದ್ದು, ಬೇಡಿಕೆಗೆ ಅನುಗುಣವಾಗಿ ಈ ವಿಶೇಷ ರೈಲುಗಳು ಸಂಚರಿಸಲಿವೆ. ದೀಪಾವಳಿ ಸಂದರ್ಭ ಪ್ರತಿವರ್ಷ ಬೆಂಗಳೂರಿನಿಂದ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಿರಲಿದೆ. ಹೀಗಾಗಿ ಈ ವಿಶೇಷ ರೈಲುಗಳು ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ನೆರವಾಗಲಿದೆ ಎಂದು ಸೌತ್​ ವೆಸ್ಟರ್ನ್​ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬೇರೆ ಮಾರ್ಗಗಳಲ್ಲಿಯೂ ವಿಶೇಷ ರೈಲುಗಳನ್ನು ಎಸ್​ ಡಬ್ಲ್ಯೂಆರ್ ಘೋಷಿಸುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:18 pm, Mon, 13 October 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ