AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮತ್ತೇ ಭೂಕಂಪನ; ಭಾರೀ ಶಬ್ದ ಕೇಳಿ, ಭೂಮಿ ನಡುಗಿದ ಅನುಭವ

ಬೆಳಗ್ಗೆ 11.22ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರು ಭಯಗೊಂಡಿದ್ದಾರೆ. ಕೆಲ ತಿಂಗಳ ಬಳಿಕ ಮತ್ತೇ ಭೂಕಂಪದ ಆತಂಕ ಉಂಟಾಗಿದೆ.

ವಿಜಯಪುರದಲ್ಲಿ ಮತ್ತೇ ಭೂಕಂಪನ; ಭಾರೀ ಶಬ್ದ ಕೇಳಿ, ಭೂಮಿ ನಡುಗಿದ ಅನುಭವ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 22, 2022 | 2:06 PM

Share

ವಿಜಯಪುರ: ಜಿಲ್ಲೆಯಲ್ಲಿ ಮತ್ತೇ ಭೂಕಂಪನ (Earthquake) ದ ಅನುಭವ ಉಂಟಾಗಿದೆ. ಭಾರೀ ಶಬ್ದ ಕೇಳಿ ಬಂದು ಭೂಮಿ‌ನಡುಗಿದ ಅನುಭವವಾಗಿದೆ. ವಿಜಯಪುರ ನಗರ ಸೇರಿದಂತೆ‌ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪನವಾಗಿದೆ. ಬೆಳಗ್ಗೆ 11.22ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರು ಭಯಗೊಂಡಿದ್ದಾರೆ. ಕೆಲ ತಿಂಗಳ ಬಳಿಕ ಮತ್ತೇ ಭೂಕಂಪದ ಆತಂಕ ಉಂಟಾಗಿದೆ. 3.5ರಷ್ಟು ತೀವ್ರತೆಯಲ್ಲಿ ರಿಕ್ಟರ್‌ ಮಾಪನದಲ್ಲಿ ಭೂಮಿ‌ ಕಂಪಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ. ಈ ಹಿಂದೆ (ಜನವರಿ 30) ಬೆಳಿಗ್ಗೆ 9.15 ಗಂಟೆಗೆ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪನದಲ್ಲಿ(Richter scale) 2.9 ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ (Vijayapura) ನಗರ ಹಾಗೂ ವಿಜಯಪುರ ತಾಲೂಕಿನ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿಯೂ ಭೂಕಂಪನದ ಅನುಭವವಾಗಿತ್ತು.

ಭೂಮಿಯ 5 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿತ್ತು. ಕಳೆದ ಮೂರು ತಿಂಗಳ ಹಿಂದೆ ಸರಣಿ ಭೂಕಂಪನವಾಗಿತ್ತು. ಹಾಗೂ ಭೂಮಿಯಿಂದ ಭಾರೀ ಶಬ್ಧ ಕೇಳಿ ಬರುತ್ತಿತ್ತು. ಈ ಸಂಬಂಧ ವಿಜಯಪುರ ಜಿಲ್ಲೆಗೆ ವಿಜ್ಞಾನಿಗಳ ತಂಡ ಭೇಟಿ ನೀಡಿತ್ತು, ಸ್ಥಳ ಪರಿಶೀಲನೆಗೆ ಮುಂದಾಗಿದ್ದರು. ಸ್ಥಳ ಪರಿಶೀಲನೆ ಬಳಿಕ ವಿಜ್ಞಾನಿಗಳ ತಂಡ ಸ್ಥಳೀಯರಲ್ಲಿ ಧೈರ್ಯ ತುಂಬಿದ್ದರು.

ವಿಜಯಪುರದಲ್ಲಿ ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾದರೆ, ಕೆಲ ಬಾರಿ ಮಾಪನದಲ್ಲಿ ದಾಖಲಾಗಿಲ್ಲ. ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ.

ಇದನ್ನೂ ಓದಿ:

ಪುನೀತ್​ಗೆ​ ಮೈಸೂರು ವಿವಿಯಿಂದ ಡಾಕ್ಟರೇಟ್​; ಕಾರ್ಯಕ್ರಮದಲ್ಲಿ ರಾಜ್​ ಕುಟುಂಬ ಭಾಗಿ

ACB Raid: ಬೆಂಗಳೂರಿನಲ್ಲಿಂದು ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ; ಪತ್ತೆಯಾಯಿತು ಕಂತೆ ಕಂತೆ ಹಣ, ಒಬ್ಬರಿಗಿಂತ ಒಬ್ಬರು ಭ್ರಷ್ಟರು

Published On - 1:05 pm, Tue, 22 March 22

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ