ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಮತ್ತೊಂದು ಬಲಿ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಎರಡನೇ ಬಲಿಯಾಗಿದೆ. ಉಸಿರಾಟದ ತೊಂದರೆ ಎಂದು ಆಸ್ವತ್ರೆಗೆ ಹೋಗಿದ್ದ 60 ವರ್ಷದ ವೃದ್ಧೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಹೊಸಕೋಟೆ ನಗರದ ಎಂವಿ ಬಡಾವಣೆಯ 60 ವರ್ಷದ ಮಹಿಳೆ ಎದೆನೋವು ಮತ್ತು ಉಸಿರಾಟದ ತೊಂದರೆ ಎಂದು ಜಯದೇವ ಆಸ್ಪತ್ರೆಗೆ ಹೋಗಿದ್ದರು. ಈ‌ ವೇಳೆ ಎದೆನೋವಿಲ್ಲ ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ವೈದ್ಯರು ರವಾನಿಸಿದ್ದರು. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಕೊರೊನಾ ಸೋಂಕು […]

ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಮತ್ತೊಂದು ಬಲಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 20, 2020 | 3:58 PM

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಎರಡನೇ ಬಲಿಯಾಗಿದೆ. ಉಸಿರಾಟದ ತೊಂದರೆ ಎಂದು ಆಸ್ವತ್ರೆಗೆ ಹೋಗಿದ್ದ 60 ವರ್ಷದ ವೃದ್ಧೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಹೊಸಕೋಟೆ ನಗರದ ಎಂವಿ ಬಡಾವಣೆಯ 60 ವರ್ಷದ ಮಹಿಳೆ ಎದೆನೋವು ಮತ್ತು ಉಸಿರಾಟದ ತೊಂದರೆ ಎಂದು ಜಯದೇವ ಆಸ್ಪತ್ರೆಗೆ ಹೋಗಿದ್ದರು. ಈ‌ ವೇಳೆ ಎದೆನೋವಿಲ್ಲ ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ವೈದ್ಯರು ರವಾನಿಸಿದ್ದರು. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು.

ಕೊರೊನಾ ಸೋಂಕು ತಗುಲಿದ ಕಾರಣ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಮಾಹಾಮಾರಿ ಕೊರೊನಾದಿಂದ ಸಾವಿಗೀಡಾಗಿರುವುದಾಗಿ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us