AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ. ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ […]

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!
Guru
| Edited By: |

Updated on:Jul 30, 2020 | 9:16 PM

Share

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ.

ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ ಅರುಣ್‌ ಕುಮಾರ್‌ ಈಗ ಫ್ರಾನ್ಸ್‌ನಿಂದ ಭಾರತಕ್ಕೆ ಬರುತ್ತಿರುವ ರಫೇಲ್‌ ಯುದ್ಧ ವಿಮಾನಗಳನ್ನು ಹಾರಿಸಿಕೊಂಡು ಬರುತ್ತಿರುವವರಲ್ಲಿ ಒಬ್ಬರು.

ಅರುಣ್‌ ಕುಮಾರ್‌ 1995ರಿಂದ 2001ರ ವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಸೈನಿಕ ಶಾಲೆಯಲ್ಲಿನ ಇವರ ನೋಂದಣಿ ಸಂಖ್ಯೆ 2877.

ಮುಂದೆ 2002ರಲ್ಲಿ ನ್ಯಾಷನಲ್ ಡಿಫೆನ್ಸ್ ಆರ್ಮಿಗೆ ಸೇರ್ಪಡೆಯಾಗಿ ಈಗ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಫ್ರಾನ್‌ನಿಂದ ರಫೇಲ್‌ ಯುದ್ಧ ವಿಮಾನಗಳನ್ನ ಹಾರಿಸಿಕೊಂಡು ಬರುತ್ತಿದ್ದಾರೆ. ಅಂದ ಹಾಗೆ ಇವರ ತಂದೆ ಎನ್ ಪ್ರಸಾದ್‌ ಸಹ ಏರಫೋರ್ಸ್ ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ.

Published On - 1:28 pm, Wed, 29 July 20

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು