AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರನ್ನು ಎದುರು ಹಾಕಿಕೊಂಡವರು ಈವರೆಗೂ ಉಳಿದಿಲ್ಲ: ಐಎನ್​ಟಿಯುಸಿ ಪ್ರಧಾನ ಕಾರ್ಯದರ್ಶಿ ಬೋರ್ ಶೆಟ್ಟಿ

Karnataka Bus Strike: ಯುಗಾದಿ ಹಬ್ಬದ ಒಳಗೆ ಸಮಸ್ಯೆ ಇತ್ಯರ್ಥ ಮಾಡಬೇಕು . ಇಲ್ಲದಿದ್ದರೆ ಮುಷ್ಕರ ಅನಿರ್ದಿಷ್ಟಾವಧಿವರೆಗೆ ಮುಂದುವರಿಸುತ್ತೇವೆ. ನಾಳೆ ಸಾರಿಗೆ ನೌಕರರ ಕುಟುಂಬದವರು ವಿಭಿನ್ನ ಚಳವಳಿ ನಡೆಸಲಿದ್ದಾರೆ: ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನೌಕರರನ್ನು ಎದುರು ಹಾಕಿಕೊಂಡವರು ಈವರೆಗೂ ಉಳಿದಿಲ್ಲ: ಐಎನ್​ಟಿಯುಸಿ ಪ್ರಧಾನ ಕಾರ್ಯದರ್ಶಿ ಬೋರ್ ಶೆಟ್ಟಿ
ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್​ಗಳು
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 11, 2021 | 7:37 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ, ಈ ಮುಷ್ಕರಕ್ಕೆ ನೀವೇ ಜವಾಬ್ಧಾರರಾಗುತ್ತೀರಿ. ಸರ್ಕಾರ ಎಸ್ಮಾ ಜಾರಿ ಮಾಡಿದರೆ ಮಾಡಲಿ. ಮುಷ್ಕರಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೆಂಬಲ ಸಿಕ್ಕಿದೆ. ಸಾರಿಗೆ ನಿಗಮಗಳ ನೌಕರರೇ ಹೆದರಬೇಡಿ, ಸಾರಿಗೆ ನೌಕರರನ್ನು ಎದುರು ಹಾಕಿಕೊಂಡವರು ಈವರೆಗೂ ಉಳಿದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಬೋರ್ ಶೆಟ್ಟಿ ಎಚ್ಚರಿಕೆ ನೀಡಿದರು. ಅವರು ಸಾರಿಗೆ ನೌಕರರ ಸಭೆ ಮುಕ್ತಾಯಗೊಂಡ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಂಧ್ರದಲ್ಲಿ, ತೆಲಂಗಾಣದಲ್ಲಿ ಮಾಡಿದ್ದಾರೆ. ಅಲ್ಲಿ ಮಾಡಿದ ಮೇಲೆ ನೀವ್ಯಾಕೆ ಮಾಡೋಕೆ ಆಗ್ತಿಲ್ಲ. ಅವರು ಮಾಡಿಲ್ಲ ಅಂದ್ರೆ ನಾವು ಕೇಳ್ತಾ ಇರ್ಲಿಲ್ಲ. 6ನೇ ವೇತನಶ್ರೇಣಿ ಕೊಡ್ತೀವಿ ಅಂತ ಸರ್ಕಾರವೇ ಒಪ್ಪಿಕೊಂಡಿತ್ತು. ಆದರೆ ಈಗ ಕೊಡ್ತಿಲ್ಲ. ಸಂಬಳ ಕೊಡದೇ ಕಿರುಕುಳ ಕೊಡ್ತಿದ್ದೀರಿ. ಸಾರಿಗೆ ನಿಗಮಗಳ ನೌಕರರ ಕುಟುಂಬಗಳು ಸಂಕಷ್ಟದಲ್ಲಿವೆ. ಸಾರಿಗೆ ಸಂಸ್ಥೆ ಕಾರ್ಮಿಕರನ್ನು ಎದುರು ಹಾಕಿಕೊಂಡವರು ಯಾರೂ ಉಳಿದಿಲ್ಲ. ಎಸ್ಮಾ ತಂದ್ರೆ ಅವರೇ ಭಸ್ಮವಾಗ್ತಾರೆ ಎಂದು ಸಾರಿಗೆ ನಿಗಮದ ಐಎನ್​ಟಿಯುಸಿ ಪ್ರಧಾನ ಕಾರ್ಯದರ್ಶಿ ಬೋರ್ ಶೆಟ್ಟಿ ಎಚ್ಚರಿಸಿದರು.

‘ನೌಕರರ ಕಷ್ಟ ನಿಮಗೆ ಗೊತ್ತಾಗ್ತಿಲ್ಲ ಮಿಸ್ಟರ್ ಸವದಿ ಅವರೇ..’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಮೇಲೆ ಹರಿಹಾಯ್ದ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಯುಗಾದಿ ಹಬ್ಬದ ಒಳಗೆ ಸಮಸ್ಯೆ ಇತ್ಯರ್ಥ ಮಾಡಬೇಕು . ಇಲ್ಲದಿದ್ದರೆ ಮುಷ್ಕರ ಅನಿರ್ದಿಷ್ಟಾವಧಿವರೆಗೆ ಮುಂದುವರಿಸುತ್ತೇವೆ. ನಾಳೆ ಸಾರಿಗೆ ನೌಕರರ ಕುಟುಂಬದವರು ವಿಭಿನ್ನ ಚಳವಳಿ ನಡೆಸಲಿದ್ದಾರೆ ಎಂದು ಆಗ್ರಹಿಸಿದರು.

ನಾಳೆಯಿಂದ ಇವತ್ತು ಓಡಿರುವಷ್ಟೂ ಬಸ್​ಗಳು ಓಡಲ್ಲ. ಸರ್ಕಾರ ಒತ್ತಾಯದಿಂದ ಕಾರ್ಮಿಕರನ್ನು ಕೆಲಸಕ್ಕೆ ಕರೆಸಿಕೊಳ್ಳುತ್ತಿದೆ. ನಾವು ಎಲ್ಲೂ ಬಸ್​ಗಳಿಗೆ ಕಲ್ಲು ಹೊಡೆದಿಲ್ಲ, ಬೆಂಕಿ ಹಚ್ಚಿಲ್ಲ. ನಾವು ಗೌರವಯುತವಾಗಿ ಮುಖ್ಯಮಂತ್ರಿಯನ್ನ ಕೇಳುತ್ತೇವೆ. ನಾವು ಎಲ್ಲೂ ಬಸ್​ಗಳಿಗೆ ಕಲ್ಲು ಹೊಡೆದಿಲ್ಲ, ಬೆಂಕಿ ಹಚ್ಚಿಲ್ಲ. ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲಿಯೇ ಇದ್ದೇವೆ. ಸರ್ಕಾರ ಇದಕ್ಕೆಲ್ಲ ಪರಿಹಾರವನ್ನು ನೀಡಲೇ ಬೇಕು. ಮುಷ್ಕರ ಅಂತ್ಯ ಮಾಡುವುದು ಸರ್ಕಾರದ ಕೈಯಲ್ಲಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಟ್ಟ ಮಾತು ಜಾರಿ ಮಾಡದೇ ಸರ್ಕಾರ ತಪ್ಪು ಮಾಡುತ್ತಿದೆ. ಮಾರ್ಚ್​​​ 16ರಂದು ಸರ್ಕಾರಕ್ಕೆ ನೋಟಿಸ್​ ಕೊಟ್ಟಿದ್ದೆವು. ಸರ್ಕಾರಕ್ಕೆ ಸಾಕಷ್ಟು ಕಾಲಾವಕಾಶವನ್ನೂ ಕೊಟ್ಟಿದ್ದೇವೆ. ಸರ್ಕಾರದ ಮಾತುಕತೆಗಳು ವಿಫಲವಾದಾಗ ಚಳುವಳಿಗಳು ಆರಂಭವಾಗಿವೆ. ಸಿಎಂ ಯಡಿಯೂರಪ್ಪ ಅಥವಾ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ನಮ್ಮನ್ನು ಚರ್ಚೆಗೆ ಕರೆದಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದರು.

ಇದನ್ನೂ ಓದಿ: ನಾಳೆಯಿಂದ ಎಂದಿನಂತೆ ಬಸ್​ಗಳು ಸಂಚರಿಸಲಿವೆ: ಕೆಎಸ್‌ಆರ್‌ಟಿಸಿ ಮುಖ್ಯ ವ್ಯವಸ್ಥಾಪಕ ಪ್ರಭಾಕರ್‌ ರೆಡ್ಡಿ ವಿಶ್ವಾಸ

KSRTC BMTC Strike: ನಾಳೆಯೂ ಮುಂದುವರಿಯಲಿದೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್

(One who oppose transport workers who did not survive says INTUC secretary Bore shetty)

ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು