AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿಗೆ ದರ ಏರಿಕೆ ಪೆಟ್ಟು; ಮನೆಗಳಲ್ಲಿ ಈರುಳ್ಳಿ ಹಚ್ಚಲು ಗೃಹಿಣಿಯರು ಹಿಂದೇಟು!

ಬೆಂಗಳೂರು: ಈರುಳ್ಳಿ ದರ ದಿನೇ ದಿನೇ ಗಗನಕ್ಕೇರುತ್ತಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಏರುತ್ತಿರುವ ಈರುಳ್ಳಿ ರೇಟ್ ಕೇಳಿ ಜನ ಪುಲ್ ಶಾಕ್‌ ಆಗ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ವರ್ಷ ಉಂಟಾದ ಅತಿವೃಷ್ಟಿಯಿಂದಾಗಿ ಈರುಳ್ಳಿ ಬೆಳೆಹಾನಿಯಾಗಿದೆ. ಈರುಳ್ಳಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆ ಆಗಿದೆ ಈ ಹಿನ್ನೆಲೆ ಬೆಲೆ ಏರಿಕೆಯಾಗಿದೆ. ಇದರಿಂದ ಗ್ರಾಹಕರ ಜೊತೆ ಬೆಳೆಗಾರರು ಕಣ್ಣೀರು ಹಾಕುವಂತಾಗಿದೆ. ಅತೀ ವೃಷ್ಠಿ, ಅನಾವೃಷ್ಠಿಯಿದಾಗಿ ಹೀಗೆಲ್ಲ.. ಅತಿಹೆಚ್ಚು ಈರುಳ್ಳಿ ಬೆಳೆಯುವ ಕರ್ನಾಟಕದಲ್ಲೇ ಈರುಳ್ಳಿ ದುಬಾರಿಯಾಗಿದೆ. ಕೆಜಿಗೆ 40 […]

ಈರುಳ್ಳಿಗೆ ದರ ಏರಿಕೆ ಪೆಟ್ಟು; ಮನೆಗಳಲ್ಲಿ ಈರುಳ್ಳಿ ಹಚ್ಚಲು ಗೃಹಿಣಿಯರು ಹಿಂದೇಟು!
ಸಾಧು ಶ್ರೀನಾಥ್​
|

Updated on:Nov 28, 2019 | 11:01 AM

Share

ಬೆಂಗಳೂರು: ಈರುಳ್ಳಿ ದರ ದಿನೇ ದಿನೇ ಗಗನಕ್ಕೇರುತ್ತಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಏರುತ್ತಿರುವ ಈರುಳ್ಳಿ ರೇಟ್ ಕೇಳಿ ಜನ ಪುಲ್ ಶಾಕ್‌ ಆಗ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ವರ್ಷ ಉಂಟಾದ ಅತಿವೃಷ್ಟಿಯಿಂದಾಗಿ ಈರುಳ್ಳಿ ಬೆಳೆಹಾನಿಯಾಗಿದೆ. ಈರುಳ್ಳಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆ ಆಗಿದೆ ಈ ಹಿನ್ನೆಲೆ ಬೆಲೆ ಏರಿಕೆಯಾಗಿದೆ. ಇದರಿಂದ ಗ್ರಾಹಕರ ಜೊತೆ ಬೆಳೆಗಾರರು ಕಣ್ಣೀರು ಹಾಕುವಂತಾಗಿದೆ.

ಅತೀ ವೃಷ್ಠಿ, ಅನಾವೃಷ್ಠಿಯಿದಾಗಿ ಹೀಗೆಲ್ಲ.. ಅತಿಹೆಚ್ಚು ಈರುಳ್ಳಿ ಬೆಳೆಯುವ ಕರ್ನಾಟಕದಲ್ಲೇ ಈರುಳ್ಳಿ ದುಬಾರಿಯಾಗಿದೆ. ಕೆಜಿಗೆ 40 ರಿಂದ 50 ರೂಪಾಯಿ ಇದ್ದ ಈರುಳ್ಳಿ ರೇಟ್ ಈಗ 100 -130 ರೂಪಾಯಿಗೆ ಏರಿಕೆಯಾಗಿದೆ. ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಿ ಈರುಳ್ಳಿ ಬೆಳೆ ಕೊಚ್ಚಿ ಹೋಗಿವೆ. ಮತ್ತೆ ಕೆಲವು ಕಡೆ ಕಡಿಮೆ ಮಳೆಯಾಗಿ ಈರುಳ್ಳಿ ಬೆಳೆ ಸರಿಯಾಗಿ ಬೆಳೆದಿಲ್ಲ.

ನೆರೆ ಮತ್ತು ಹೆಚ್ಚಿನ ಮಳೆಯಿಂದ ಈರುಳ್ಳಿ ಸಮಸ್ಯೆ ಹೆಚ್ಚಾಗಿದೆ. ಕರ್ನಾಟಕದ ಹೊಸ ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ. ಇನ್ನೂ ಡಿಸೆಂಬರ್ ಕೊನೆಯ ವರೆಗೂ ಈರುಳ್ಳಿ ಬೆಲೆ ಇದೇ ರೀತಿ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಗ್ರಾಹಕರಲ್ಲಿ ಆತಂಕ ಮನೆ ಮಾಡಿದೆ. ಈರುಳ್ಳಿ ಖರೀದಿಸಲು ಚಿಂತಿಸುವಂತಾಗಿದೆ.

ದರದರ ಏರಿದೆ ಈರುಳ್ಳಿ ದರ! ಹಾಗಾಗಿ ಈರುಳ್ಳಿ ಹಚ್ಚಲು ಗೃಹಿಣಿಯರು ಹಿಂದೆಮುಂದೆ ನೋಡುತ್ತಿದ್ದಾರೆ. ಹೆಚ್ಚು ಬೆಲೆ ಕೊಟ್ಟು ಈರುಳ್ಳಿ ತಿನ್ನೋದು ಬೇಡ ಎಂದು ಇದ್ದಬದ್ದ ತರಕಾರಿಗಳಲ್ಲೇ ಅಡುಗೆ ಮಾಡಿ, ತಮ್ಮ ಬದ್ಧತೆ ಮೆರೆಯುತ್ತಿದ್ದಾರೆ.

Published On - 9:37 am, Thu, 28 November 19

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ