AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಈರುಳ್ಳಿ ದರ ಮತ್ತೆ ಏರಿಕೆ: ಶತಕದತ್ತ ದಾಪುಗಾಲು, ಗ್ರಾಹಕರು ಶಾಕ್

ಕರ್ನಾಟಕದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ಕೆಜಿಗೆ 70 ರೂ.ನಿಂದ 80ರ ವರೆಗೆ ಕೆಲವೆಡೆ ಮಾರಾಟವಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ಈರುಳ್ಳಿ ದರ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಅಕಾಲಿಕ ಮಳೆ, ಬೆಳೆ ಹಾನಿ ದರ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಸದ್ಯದ ದರ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಈರುಳ್ಳಿ ದರ ಮತ್ತೆ ಏರಿಕೆ: ಶತಕದತ್ತ ದಾಪುಗಾಲು, ಗ್ರಾಹಕರು ಶಾಕ್
ಕರ್ನಾಟಕದಲ್ಲಿ ಈರುಳ್ಳಿ ದರ ಮತ್ತೆ ಏರಿಕೆ
Follow us
Poornima Agali Nagaraj
| Updated By: Ganapathi Sharma

Updated on: Nov 09, 2024 | 10:32 AM

ಬೆಂಗಳೂರು, ನವೆಂಬರ್ 9: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ‌ ಬೆಲೆ‌ ದುಬಾರಿಯಾಗುತ್ತಿದ್ದು ಬಡವರು, ಮಧ್ಯಮವರ್ಗದವರು ಜೀವನ ನಡೆಸುವುದು ಕಷ್ಟವಾಗಿ ಹೋಗಿದೆ.‌ ಈ ಮಧ್ಯೆ, ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣಿರಿಳಿಸುತ್ತಿದೆ. ಸದ್ಯ ರಾಜ್ಯದಲ್ಲಿ‌ ಮಳೆ ತಗ್ಗಿದೆ. ಆದರೂ ಕಳೆದ ತಿಂಗಳು ಬಂದಂತಹ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರು‌ಪಾಲಾಗಿದ್ದು, ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂಪಾಯಿ ವರೆಗೆ ಏರಿಕೆಯಾಗಿದೆ.

ಈರುಳ್ಳಿ ಬೆಲೆ ಏರಿಕೆಗೆ ಕಾರಣವೇನು?

ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ. ಮಳೆ ಇಲ್ಲದಿದ್ದರೂ ಬೆಲೆ 70 ರ ಗಡಿ ದಾಟಿದೆ. ಕಳೆದ ತಿಂಗಳು ಸುರಿದ ಭಾರಿ ಮಳೆಯ ಪರಿಣಾಮ ನಿರೀಕ್ಷೆಯಷ್ಟು ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ. ಬಂದಂತಹ ಅಲ್ಪಸ್ವಲ್ಪ ಈರುಳ್ಳಿಯ ಗುಣಮಟ್ಟವೂ ಚೆನ್ನಾಗಿಲ್ಲ.‌ ಹೀಗಾಗಿ ಸದ್ಯ ಈರುಳ್ಳಿಯನ್ನು ಮಹಾರಾಷ್ಟದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.‌ ಆದರೆ, ಮಹಾರಾಷ್ಟ್ರದಿಂದಲೂ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ‌ ಪೂರೈಕೆಯಾಗುತ್ತಿಲ್ಲ. ಇದು ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ.

ಹೆಚ್ಚಿದ ಈರುಳ್ಳಿ ಬೇಡಿಕೆ

ಒಂದೆಡೆ ಪೂರೈಕೆ ಕಡಿಮೆಯಾಗಿದ್ದರೆ, ಮತ್ತೊಂದೆಡೆ ಬೇಡಿಕೆಯೂ ಗಣನೀವಾಗಿ ಹೆಚ್ಚಿದೆ. ಪರಿಣಾಮವಾಗಿ ಬೆಲೆ ಏರಿಕೆಯಾಗುತ್ತಿದೆ. ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಈಗೆಷ್ಟಿದೆ ಈರುಳ್ಳಿ ಬೆಲೆ?

ಸದ್ಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿಗೆ 70 ರಿಂದ 80 ರೂ. ಇದ್ದರೆ, ಸಣ್ಣಪುಟ್ಟ ಅಂಗಡಿಗಳಲ್ಲಿ ಚಿಲ್ಲರೆ ಮಾರಾಟ ದರ 90 ರೂ. ಆಗಿದೆ.‌ ಮುಂದಿನ ದಿನಗಳಲ್ಲಿ 100 ರ ಗಡಿದಾಟುವ ಸಾಧ್ಯತೆಗಳಿವೆ.

ಇದನ್ನೂ ಓದಿ: ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದು ಆಗುತ್ತಿರುವ ಈ ಆಹಾರ ಪದಾರ್ಥ ತಿಂದರೆ ನಿಮ್ಮ ಆರೋಗ್ಯಕ್ಕೆ ಅಪಾಯ

ಬೆಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) 100,480 ಚೀಲ ಈರುಳ್ಳಿ ಬಂದಿದ್ದು, ಈ ಪೈಕಿ ಮಹಾರಾಷ್ಟ್ರದಿಂದ 8-10 ಲಾರಿ ಉತ್ತಮ ಗುಣಮಟ್ಟದ ಹಳೆಯ ದಾಸ್ತಾನು ಈರುಳ್ಳಿ ಬಂದಿದೆ. ಈ ಉನ್ನತ ದರ್ಜೆಯ ಈರುಳ್ಳಿ ಪ್ರತಿ ಕ್ವಿಂಟಲ್‌ಗೆ 7,200 ರಿಂದ 7,500 ರೂ.ಗಳ ದರದಲ್ಲಿ ಮಾರಾಟವಾಗುತ್ತಿದೆ. ಕಡಿಮೆ ಗುಣಮಟ್ಟದ ಸ್ಥಳೀಯ ಈರುಳ್ಳಿ ಕ್ವಿಂಟಲ್‌ಗೆ 1,500 ರಿಂದ 5,500 ರೂ. ವರೆಗೆ ಮಾರಾಟವಾಗುತ್ತಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ