AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 1ರಿಂದ ಪುನಃ ಆನ್​ಲೈನ್ ತರಗತಿ ಪ್ರಾರಂಭ: ಮಕ್ಕಳ ಬಳಿ ಸ್ಮಾರ್ಟ್​ಫೋನ್​ನಂತಹ ಅಗತ್ಯ ಸೌಲಭ್ಯ ಇದೆಯೇ ಎಂದು ಪ್ರಶ್ನಿಸಿದ ಹೈಕೋರ್ಟ್​

Online classes: ಜುಲೈ 1ರಿಂದ ಆನ್​ಲೈನ್ ತರಗತಿಗಳನ್ನು ಪುನಃ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಲಾಕ್​ಡೌನ್ ಪರಿಣಾಮ ಪಠ್ಯಪುಸ್ತಕಗಳನ್ನು ಮುದ್ರಿಸಲು ವಿಳಂಬವಾಗಿದೆ. ಆಗಸ್ಟ್, ಸೆಪ್ಟಂಬರ್ ತಿಂಗಳಲ್ಲಿ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುತ್ತದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಜುಲೈ 1ರಿಂದ ಪುನಃ ಆನ್​ಲೈನ್ ತರಗತಿ ಪ್ರಾರಂಭ: ಮಕ್ಕಳ ಬಳಿ ಸ್ಮಾರ್ಟ್​ಫೋನ್​ನಂತಹ ಅಗತ್ಯ ಸೌಲಭ್ಯ ಇದೆಯೇ ಎಂದು ಪ್ರಶ್ನಿಸಿದ ಹೈಕೋರ್ಟ್​
ಕರ್ನಾಟಕ ಹೈಕೋರ್ಟ್
TV9 Web
| Updated By: guruganesh bhat|

Updated on:Jun 08, 2021 | 9:48 PM

Share

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್​ನಲ್ಲಿ ಪಾಠ ಕೇಳಲು ಸ್ಮಾರ್ಟ್ ಫೋನ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್, ಇಂಟರ್‌ನೆಟ್‌ ಸೌಲಭ್ಯ ಹೊಂದಿರುವ ಮಕ್ಕಳ ಸಂಖ್ಯೆ ಎಷ್ಟು? ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಪ್ರಶ್ನೆ ಮಾಡಿದೆ. ಆನ್​ಲೈನ್ ಕ್ಲಾಸ್​ಗೆ ಕೂರಲು ಅಗತ್ಯ ಸೌಲಭ್ಯ ಹೊಂದಿರುವ ಮಕ್ಕಳ ಶಾಲಾವಾರು ಅಂಕಿ ಅಂಶವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಆನ್​ಲೈನ್ ತರಗತಿಗಳಿಗೆ ಕೂರಲು ತಂತ್ರಜ್ಞಾನದ ಲಭ್ಯತೆ ಬಗ್ಗೆ ಶಾಲಾವಾರು ಅಂಕಿ-ಅಂಶಗಳನ್ನು ಜುಲೈ1ರೊಳಗೆ ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ಹೈಕೋರ್ಟ್​ಗೆ ಕೆಲವು ಮುಖ್ಯ ಮಾಹಿತಿಗಳನ್ನು ತಿಳಿಸಿದ ರಾಜ್ಯ ಸರ್ಕಾರ, 2021-22ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಕಾರ್ಯಯೋಜನೆಯನ್ನು ವಿವರಿಸಿದೆ. ಜುಲೈ 1ರಿಂದ ಆನ್​ಲೈನ್ ತರಗತಿಗಳನ್ನು ಪುನಃ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಲಾಕ್​ಡೌನ್ ಪರಿಣಾಮ ಪಠ್ಯಪುಸ್ತಕಗಳನ್ನು ಮುದ್ರಿಸಲು ವಿಳಂಬವಾಗಿದೆ. ಆಗಸ್ಟ್, ಸೆಪ್ಟಂಬರ್ ತಿಂಗಳಲ್ಲಿ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುತ್ತದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಆದರೆ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದೆ. ವಾಹನ ಸವಾರರು ವಾಹನ ರಿಲೀಸ್‌ ಮಾಡಿಸಿಕೊಳ್ಳಲು ಕೋರ್ಟ್‌ಗೆ ಓಡಾಡುವ ಅಗತ್ಯವಿಲ್ಲ. ಪೊಲೀಸರಿಗೇ ವಾಹನ ರಿಲೀಸ್ ಮಾಡುವ ಅಧಿಕಾರವನ್ನೂ ಹೈಕೋರ್ಟ್ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡಿ… ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು. ಸರ್ಕಾರದಿಂದ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಇಂದು ಈ ಆದೇಶ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ. ವಾಹನ ಮಾಲೀಕರು ಕೋರ್ಟ್​​ಗಳತ್ತ ಬಂದು ಜನಸಂದಣಿ ಆಗುವುದು ಬೇಡ. ಜನ ಜಮಾವಣೆಯಾದರೆ ಮತ್ತೆ ಕೊರೊನಾ ಸೋಂಕು ಹಬ್ಬಲು ಸಹಕಾರಿಯಾಗುತ್ತದೆ. ಹಾಗಾಗಿ ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡು, ಬಾಂಡ್​ ಬರೆಯಿಸಿಕೊಂಡು ಇಡೀ ರಾಜ್ಯದಲ್ಲಿ ಆಯಾ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲೇ ಕೇಸುಗಳನ್ನು ಇತ್ಯರ್ಥ ಪಡಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ.

ಇದನ್ನೂ ಓದಿ: ನಾವು ಮನೆಯಲ್ಲಿ ಕುಳಿತು ಫೇಸ್​ಬುಕ್ ಪೆರಟುತ್ತಿದ್ದರೆ ಫೇಸ್​ಬುಕ್ ಸೃಷ್ಟಿಕರ್ತ ಮಾರ್ಕ್ ಜುಕರ್​ಬರ್ಗ್ ಬಯಲಲ್ಲಿ ಈಟಿ ಎಸೆಯುತ್ತಿದ್ದಾರೆ!

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ತೊಡಕುಂಟಾಗದಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ (Online classes are start from July 1 in Karnataka High Court to query how many children have access to a smartphone)

Published On - 9:43 pm, Tue, 8 June 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ