AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆನ್​ಲೈನ್ ಹೂಡಿಕೆ ಹೆಸರಿನಲ್ಲಿ ಭಾರಿ ವಂಚನೆ, ಬೃಹತ್ ಜಾಲ ಭೇದಿಸಿದ ಕೆಂಗೇರಿ ಪೊಲೀಸರು, 8 ಮಂದಿಯ ಬಂಧನ

ಬೆಂಗಳೂರಿನಲ್ಲಿ ಆನ್​​ಲೈನ್​​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಬೃಹತ್ ಜಾಲ ಪತ್ತೆಯಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ದೇಶ ವಿದೇಶದ ಜನರನ್ನು ತಮ್ಮ ಜಾಲದಲ್ಲಿ ಬೀಳಿಸಿ ಕೋಟಿಗಟ್ಟಲೆ ಹಣ ದೊಚಿದ್ದಾರೆ. ಲಾಭದ ಆಮಿಷವೊಡ್ಡಿ ಜನರಿಗೆ ಮೋಸ ಮಾಡುತ್ತಿದ್ದವರು ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ಆನ್​ಲೈನ್ ಹೂಡಿಕೆ ಹೆಸರಿನಲ್ಲಿ ಭಾರಿ ವಂಚನೆ, ಬೃಹತ್ ಜಾಲ ಭೇದಿಸಿದ ಕೆಂಗೇರಿ ಪೊಲೀಸರು, 8 ಮಂದಿಯ ಬಂಧನ
ಬೆಂಗಳೂರಿನಲ್ಲಿ ಕೋಟ್ಯಂತರ ರೂ.ಗಳ ಆನ್​ಲೈನ್ ದೋಖಾ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 07, 2025 | 2:43 PM

Share

ಬೆಂಗಳೂರು, ಅಕ್ಟೋಬರ್ 7: ಇತ್ತೀಚೆಗೆ ಆನ್​ಲೈನ್ ವಂಚನೆಗಳು, ಸೈಬರ್ ಅಪರಾಧಗಳು ( Cyber fraud) ಹೆಚ್ಚುತ್ತಲೇ ಇವೆ. ದಿನ ಬೆಳಗಾದರೆ ಒಬ್ಬರಲ್ಲ ಒಬ್ಬರು ಈ ಅಪರಾಧ ಜಾಲಕ್ಕೆ ಸಿಲುಕಿ ಹಣವನ್ನು ಕಳೆದುಕೊಳ್ಳುತ್ತಾರೆ. ಇದೀಗ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಇಂಥದ್ದೇ ಪ್ರಕರಣ ದಾಖಲಾಗಿದ್ದು, 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆನ್​ಲೈನ್ ಹೂಡಿಕೆಯ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಗಳು ದೇಶ ವಿದೇಶದ ಜನರನ್ನು ತಮ್ಮ ಜಾಲದಲ್ಲಿ ಬೀಳಿಸುತ್ತಿದ್ದರು.

ಲಾಭದ ಆಮಿಷವೊಡ್ಡಿ ಕೋಟ್ಯಂತರ ಹಣ ಲೂಟಿ

ಬೆಂಗಳೂರಿನಲ್ಲಿ ಆನ್​​ಲೈನ್​​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಫೇಸ್​​ಬುಕ್​​, ವಾಟ್ಸಾಪ್​, ಇನ್​​ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳ ಮೂಲಕ ಹೂಡಿಕೆಗೆ ಆಮಿಷವೊಡ್ಡಲಾಗುತ್ತಿತ್ತು. ದೇಶ ವಿದೇಶಗಳ ಜನರಿಗೆ ಹಣ ಹೂಡಿಕೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಹೂಡಿಕೆ ಮಾಡಿದ ಹಣಕ್ಕಿಂತ ಹೆಚ್ಚು ಲಾಭ ನೀಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ  ಆನ್​ಲೈನ್ ಟ್ರೇಡಿಂಗ್​ನಲ್ಲಿ ಬರೋಬ್ಬರಿ 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!

ನಿನ್ನೆ (ಅ.6) 7 ಕಡೆ ದಾಳಿ ನಡೆಸಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 19 ಲ್ಯಾಪ್​​ಟಾಪ್​​​, 40 ಮೊಬೈಲ್‌, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲುಗಳು, 10 ಮೆಮೊರಿ ಕಾರ್ಡ್ ಹಾಗೂ ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷಿನ್, 6 ಕೋಟಿ ಬೆಲೆಬಾಳುವ ಸ್ಥಿರಾಸ್ತಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆಯ ಪ್ರಕರಣಗಳು

ಈ ಹಿಂದೆಯೂ ಕರ್ನಾಟಕದ ಹಲವೆಡೆ ಸೈಬರ್ ವಂಚನೆಯ ಪ್ರಕರಣಗಳು ಕಂಡುಬಂದಿವೆ. ಇದೇ ತಿಂಗಳಿನಲ್ಲಿ ಬೆಂಗಳೂರು ಮೂಲದ ಇಬ್ಬರು ವ್ಯಕ್ತಿಗಳು ನಕಲಿ ಆನ್​ಲೈನ್ ಟ್ರೇಡಿಂಗ್ ಆ್ಯಪ್​ಗಳನ್ನು ನಂಬಿ ಸೈಬರ್ ವಂಚನೆಗೆ ಒಳಗಾಗಿದ್ದರು. ಇಬ್ಬರೂ ಸೇರಿ ಒಟ್ಟೂ 2.28 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದರು. ಅದಲ್ಲದೇ ಮ್ಯಾಟ್ರಿಮೊನಿಯಲ್ಲಿ 59 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರು ವ್ಯಕ್ತಿಯೊಬ್ಬನಿಂದ 2.3 ಕೋಟಿ ರೂ.ಗಳ ವಂಚನೆಗೆ ಒಳಗಾಗಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Tue, 7 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್