ರಾಜ್ಯದಲ್ಲಿ ಆನ್‌ಲೈನ್ ಗೇಮ್ ನಿಷೇಧಕ್ಕೆ ಚಿಂತನೆ; ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು

ಅಪರಾಧ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ. ಜತೆಗೆ, ಸೈಬರ್ ಕ್ರೈಂ ಕಡಿಮೆ ಮಾಡಲು ಆನ್‌ಲೈನ್ ಬೆಟ್ಟಿಂಗ್ ನಿಷೇಧ ಮಾಡುವ ಬಗ್ಗೆಯೂ ಯೋಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಆನ್‌ಲೈನ್ ಗೇಮ್ ನಿಷೇಧಕ್ಕೆ ಚಿಂತನೆ; ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Aug 01, 2023 | 9:26 PM

ಮಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಗೇಮ್ ನಿಷೇಧ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಆನ್‌ಲೈನ್ ಗೇಮ್ ನಿಷೇಧಿಸಲಾಗಿದೆ. ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ. ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ಗಳಿಂದ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ ಎಂದರು.

ಅಪರಾಧ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ. ಜತೆಗೆ, ಸೈಬರ್ ಕ್ರೈಂ ಕಡಿಮೆ ಮಾಡಲು ಆನ್‌ಲೈನ್ ಬೆಟ್ಟಿಂಗ್ ನಿಷೇಧ ಮಾಡುವ ಬಗ್ಗೆಯೂ ಯೋಚಿಸಲಾಗಿದೆ. ಇದೊಂದು ಜೂಜುದಂಧೆ ಇದ್ದಂತೆ. ಇದರಿಂದ ಜನ ಹಣ ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆತಂಕ ವ್ಯಕ್ತಪಡಿಸಿದರು.

ಜತೆಗೆ ಮಾಧ್ಯಮ ವರದಿಗಳನ್ನು ಪ್ರಸ್ತಾಪಿಸಿ, ಸೈಬರ್ ಕ್ರೈಂ ನಿಯಂತ್ರಣಕ್ಕೆ ನಿಗಾವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡುವ ಸಾಲದ ಆ್ಯಪ್​ಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಇತ್ತೀಚೆಗೆ ಹೇಳಿದ್ದರು. ಅಂಥ ಆ್ಯಪ್​​ಗಳ ಬಗ್ಗೆ ಜಾಗರೂಕರಾಗಿರಬೇಕು. ಅವುಗಳಿಂದ ಸಾಲ ಪಡೆಯಬಾರದು ಎಂದು ಅವರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಖಾಲಿಯಿರುವ ಎರಡೂವರೆ ಲಕ್ಷ ಹುದ್ದೆ ಭರ್ತಿಗೆ ಕ್ರಮ; ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸಿದ್ದರಾಮಯ್ಯ ಅವರು ಮಂಗಳೂರಿನ ಹೊರವಲಯದ ಕಡಲ್ಕೊರೆತ ಪೀಡಿತ ಪ್ರದೇಶ ಬಟ್ಟಪಾಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿ, ಕಡಲ್ಕೊರತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Tue, 1 August 23

ತಾಜಾ ಸುದ್ದಿ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ