Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ರಂಗಭೂಮಿ ತರಬೇತಿ; ರಂಗ ಚಟುವಟಿಕೆ ಆರಂಭಕ್ಕೆ ಮೈಸೂರಿನಲ್ಲಿ ಚಾಲನೆ ನೀಡಿದ ನಟ ಮಂಡ್ಯ ರಮೇಶ್

ಮೈಸೂರಿನ ವಿವಿಧ ಭಾಗದ ಮಕ್ಕಳು. ಮನೆಯಲ್ಲೇ ಕುಳಿತು ರಂಗಭೂಮಿಯ ನಟನೆ, ರಂಗಗೀತೆಗಳನ್ನು ಕಲಿಯುತ್ತಿದ್ದಾರೆ. ಕೊರೊನಾ ನಡುವೆಯೂ ಇದೆಲ್ಲಾ ಸಾಧ್ಯವಾಗಿರುವುದು ಹೇಗೆ ಎಂದು ಹುಬ್ಬೇರಿಸುವವರಿಗೆ ಉತ್ತರ ಮೈಸೂರಿನ ನಟನ ರಂಗಶಾಲೆ.

ಆನ್‌ಲೈನ್ ರಂಗಭೂಮಿ ತರಬೇತಿ; ರಂಗ ಚಟುವಟಿಕೆ ಆರಂಭಕ್ಕೆ ಮೈಸೂರಿನಲ್ಲಿ ಚಾಲನೆ ನೀಡಿದ ನಟ ಮಂಡ್ಯ ರಮೇಶ್
ಆನ್‌ಲೈನ್ ರಂಗಭೂಮಿ ತರಬೇತಿ
Follow us
TV9 Web
| Updated By: preethi shettigar

Updated on: Jun 27, 2021 | 9:40 AM

ಮೈಸೂರು: ಕೊರೊನಾ ಎರಡನೇ ಅಲೆಯ ತೀವ್ರತೆಯನ್ನು ಅರಿತ ರಾಜ್ಯ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿತ್ತು. ಇದರಿಂದಾಗಿ ವ್ಯಾಪಾರ ವ್ಯವಹಾರ ನಿಂತಿದ್ದು, ಜನರು ಮನೆಯಲ್ಲೇ ಕಾಲ ಕಳೆಯಬೇಕಾಯಿತು. ರೈತರು ದಿನಗೂಲಿಕಾರರು ಸೇರಿ ಎಲ್ಲರ ಆರ್ಥಿಕ ಮೂಲ ಬಂದ್ ಆಗಿತ್ತು. ಜತೆಗೆ ಎಲ್ಲಾ ಕ್ಷೇತ್ರದ ಚಟುವಟಿಕೆಗೆಗಳು ಬಹುತೇಕ ಸ್ಥಗಿತವಾಗಿದೆ. ಆದರೆ ಲಾಕ್‌ಡೌನ್ ನಡುವೆಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಂಗಭೂಮಿ ಕಲರವ ಜೋರಾಗಿದ್ದು, ಮೊಬೈಲ್​ನಲ್ಲಿಯೇ ಅಭಿನಯ ಶುರುವಾಗಿದೆ.

ಮೈಸೂರಿನ ವಿವಿಧ ಭಾಗದ ಮಕ್ಕಳು. ಮನೆಯಲ್ಲೇ ಕುಳಿತು ರಂಗಭೂಮಿಯ ನಟನೆ, ರಂಗಗೀತೆಗಳನ್ನು ಕಲಿಯುತ್ತಿದ್ದಾರೆ. ಕೊರೊನಾ ನಡುವೆಯೂ ಇದೆಲ್ಲಾ ಸಾಧ್ಯವಾಗಿರುವುದು ಹೇಗೆ ಎಂದು ಹುಬ್ಬೇರಿಸುವವರಿಗೆ ಉತ್ತರ ಮೈಸೂರಿನ ನಟನ ರಂಗಶಾಲೆ. ನಟ ಮಂಡ್ಯ ರಮೇಶ್ ಅವರ ವಿಭಿನ್ನ ಪ್ರಯತ್ನದಿಂದಾಗಿ ಮಕ್ಕಳು ಆನ್‌ಲೈನ್ ಮೂಲಕವೇ ರಂಗಭೂಮಿ ಚಟುವಟಿಕೆಗಳನ್ನು ಕಲಿಯಲು ಸಾಧ್ಯವಾಗಿದೆ.

ಮೈಸೂರಿನ ದಟ್ಟಗಳ್ಳಿಯಲ್ಲಿರುವ ನಟನ ರಂಗಶಾಲೆಯಲ್ಲಿ ವರ್ಷ ಪೂರ್ತಿ ರಂಗ ಚಟುವಟಿಕೆ‌ ನಡೆಯುತ್ತಿತ್ತು. ಪ್ರತಿ ಬೇಸಿಗೆ ರಜೆಯಲ್ಲೂ ಬೇಸಿಗೆ ಶಿಬಿರವನ್ನು ನಡೆಸಿ ಮಕ್ಕಳಿಗೆ ಅಭಿನಯದ ತರಬೇತಿ ನೀಡಲಾಗುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಇದು ಸಾಧ್ಯವಾಗಿಲ್ಲ. ಇದರಿಂದ ರಂಗಚಟುವಟಿಕೆ ಕಲಿಕೆ ಸಂಪೂರ್ಣ ಬಂದ್ ಆಗಿತ್ತು. ಇದಕ್ಕೊಂದು ತಿಲಾಂಜಲಿ ಇಡಲು ನಟ ಮಂಡ್ಯ ರಮೇಶ್ ಕಂಡುಕೊಂಡಿದ್ದೇ ಆನ್‌ಲೈನ್ ರಂಗಭೂಮಿ ತರಬೇತಿ. ಆ ಮೂಲಕ ತಮ್ಮ ರಂಗಮಂದಿರದಲ್ಲೇ ಕುಳಿತು ಮಕ್ಕಳಿಗೆ ಆನ್‌ಲೈನ್ ಮೂಲಕ ತರಬೇತಿ ನೀಡುವ ಕೆಲಸಕ್ಕೆ ಚಾಲನೆ ನೀಡಿದರು.

ಆನ್‌ಲೈನ್ ಮೂಲಕ ತರಬೇತಿ ನೀಡುವ ಕೆಲಸ  ಫಲ ಕೊಟ್ಟಿದೆ. ನೂರಾರು ಮಕ್ಕಳು ಈ ಮೂಲಕ ರಂಗಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಅತ್ಯಂತ ಶ್ರದ್ಧೆಯಿಂದ ಎಲ್ಲವನ್ನೂ ಕಲಿತಿದ್ದಾರೆ. ಕೇವಲ‌ ಮೈಸೂರಿನ ಮಕ್ಕಳು ಮಾತ್ರವಲ್ಲ ಸಿಂಗಪೂರ, ಅಮೇರಿಕಾ ಸೇರಿದಂತೆ ಬೇರೆ ಬೇರೆ ದೇಶದ ಮಕ್ಕಳು ಇದರ ಸದುಪಯೋಗ ಪಡೆದಿರುವುದು ವಿಶೇಷ ಎಂದು ನಟ ಮಂಡ್ಯ ರಮೇಶ್ ಸಂತೋಷ ವ್ಯಕ್ತಪಡಿಸಿದ್ದಾರೆ.

ಮಂಡ್ಯ ರಮೇಶ್ ಪ್ರಯತ್ನಕ್ಕೆ ಮಗಳು ದಿಶಾ ರಮೇಶ್ ಹಾಗೂ ಕಲಾವಿದರಾದ ಮೇಘಾ ಸಮೀರಾ ಸೇರಿ ಹಲವರು ಸಾಥ್ ನೀಡಿದ್ದಾರೆ. ಅಪ್ಪ ಮಗಳು ಸೇರಿ ರಂಗಭೂಮಿ ಚಟುವಟಿಕೆಯನ್ನು ಜೀವಂತವಾಗಿರಿಸಿದ್ದಾರೆ. ಈ ಮೂಲಕ ನಮ್ಮ ಕಲೆ‌ ಸಂಸ್ಕೃತಿ ಪರಂಪರೆಯ ಉಳಿವಿಗೆ ಕಟ್ಟುಬದ್ಧರಾಗಿದ್ದಾರೆ. ಇವರ ಪ್ರಯತ್ನ ಎಲ್ಲರಿಗೂ ಪ್ರೇರಣೆಯಾಗಲಿ, ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಪ್ರಯತ್ನ ಯಶಸ್ವಿಯಾಗಲಿ ಎನ್ನುವುದು ನಮ್ಮ ಆಶಯ.

ಇದನ್ನೂ ಓದಿ:

ಆನ್​ಲೈನ್ ಯಕ್ಷಗಾನ; ಉಡುಪಿಯಿಂದಲೇ ಬ್ರಿಟನ್‌ ಮತ್ತು ಜರ್ಮನ್​ನಲ್ಲಿರುವವರಿಗೆ ತರಬೇತಿ

ಮತ್ತೊಂದು ನಾಟಕ ಪರ್ವ: ರಂಗಭೂಮಿ ಪ್ರಿಯರ ಸ್ವರ್ಗ ಎನಿಸಿದೆ ಧಾರವಾಡ ರಂಗಾಯಣ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ