AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಯಕ್ಷಗಾನ; ಉಡುಪಿಯಿಂದಲೇ ಬ್ರಿಟನ್‌ ಮತ್ತು ಜರ್ಮನ್​ನಲ್ಲಿರುವವರಿಗೆ ತರಬೇತಿ

ವಿದೇಶದಲ್ಲಿ ಇರುವ ಕರಾವಳಿ ಮೂಲದವರಿಗೆ ಯಕ್ಷಗಾನ ಹೇಳಿಕೊಟ್ಟು, ಅವರನ್ನು ಯಕ್ಷಗಾನ ಹವ್ಯಾಸಿ ಮತ್ತು ಯಕ್ಷಗಾನ ಕಲಾವಿದರನ್ನಾಗಿ ಮಾಡಬೇಕು ಎನ್ನುವ ಒಳ್ಳೆಯ ಉದ್ದೇಶ ಇಟ್ಟುಕೊಂಡು, ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಧರ್ ಗಾಣಿಗ ಅವರು ಉಡುಪಿಯ ಉಪ್ಪುಂದದಿಂದ ಆನ್​ಲೈನ್ ಮೂಲಕ ಬ್ರಿಟನ್‌ ಮತ್ತು ಜರ್ಮನ್​ನಲ್ಲಿ ಇರುವ ಯಕ್ಷಗಾನ ಆಸಕ್ತರಿಗೆ ಯಕ್ಷಗಾನದ ನಾಟ್ಯ ಹೇಳಿಕೊಡುತ್ತಿದ್ದಾರೆ.

ಆನ್​ಲೈನ್ ಯಕ್ಷಗಾನ; ಉಡುಪಿಯಿಂದಲೇ ಬ್ರಿಟನ್‌ ಮತ್ತು ಜರ್ಮನ್​ನಲ್ಲಿರುವವರಿಗೆ ತರಬೇತಿ
ಆನ್​ಲೈನ್ ಯಕ್ಷಗಾನ
TV9 Web
| Edited By: |

Updated on:Jun 05, 2021 | 10:39 AM

Share

ಉಡುಪಿ: ಕೊರೊನಾ ಎರಡನೇ ಅಲೆಯ ತೀವ್ರತೆಯಿಂದಾಗಿ ಲಾಕ್​ಡೌನ್ ಜಾರಿಗೆ ತಂದಿದ್ದು, ಯಾವುದೇ ಸಭೆ, ಸಮಾರಂಭ ಮತ್ತು ಇನ್ನಿತರ ಕಾರ್ಯಕ್ರಮಗಳು ನಡೆಸದಂತೆ ಸೂಚನೆ ನೀಡಲಾಗಿದೆ. ಅದರಂತೆ ಕೊರೊನಾ ಕಾರಣದಿಂದ ಸದ್ಯ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನವಾಗುತ್ತಿಲ್ಲ. ಯಕ್ಷಗಾನ ತರಬೇತಿಗಳು ಕೂಡ ನಡೆಯುತ್ತಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ಉಡುಪಿಯಿಂದ ಬ್ರಿಟನ್‌, ಜರ್ಮನ್​ನಲ್ಲಿ ಇರುವ ಯಕ್ಷಗಾನ ಪ್ರೀಯರಿಗೆ ತರಬೇತಿ ನೀಡುತ್ತಿದ್ದಾರೆ. ಯಕ್ಷಗಾನವನ್ನು ವಿಶ್ವಗಾನವಾಗಿಸಲು ಶ್ರಮಿಸುತ್ತಿದ್ದಾರೆ.

ಯಕ್ಷಗಾನ ಕರಾವಳಿಯ ಗಂಡು ಕಲೆ. ಚೆಂಡೆ ಮದ್ದಳೆ ಸದ್ದಿನೊಂದಿಗೆ ಭಾಗವತರ ಇಂಪಾದ ಸ್ವರಕ್ಕೆ ಹೆಜ್ಜೆ ಹಾಕುವ ಕಲಾವಿದರನ್ನು ರಂಗದಲ್ಲಿ ನೋಡುವುದೇ ಚಂದ. ಹಿಂದೆ ಕರಾವಳಿಯಿಂದ ಮಲೆನಾಡಿನವರೆಗೆ ಮಾತ್ರ ಸೀಮಿತವಾಗಿದ್ದ ಈ ಶ್ರೀಮಂತ ಕಲೆ ಈಗ ವಿದೇಶದಲ್ಲೂ ಪ್ರದರ್ಶನಗೊಳ್ಳತ್ತಿದೆ. ಯಕ್ಷಗಾನ ವಿಶ್ವಗಾನವಾಗಿ ಪ್ರದೇಶ ವಿಸ್ತರಣೆಯಾಗುತ್ತಿದೆ. ಸದ್ಯ ಕೊರೊನಾ ಕಾರಣದಿಂದ ಯಕ್ಷಗಾನ ನಡೆಯುತ್ತಿಲ್ಲ.

ಇದರಿಂದಾಗಿ ಕಲಾವಿದರು ಯಕ್ಷಗಾನ ಇಲ್ಲದೇ ಮನೆಯಲ್ಲೇ ಇದ್ದಾರೆ. ಹೀಗಾಗಿ ವಿದೇಶದಲ್ಲಿ ಇರುವ ಕರಾವಳಿ ಮೂಲದವರಿಗೆ ಯಕ್ಷಗಾನ ಹೇಳಿಕೊಟ್ಟು, ಅವರನ್ನು ಯಕ್ಷಗಾನ ಹವ್ಯಾಸಿ ಮತ್ತು ಯಕ್ಷಗಾನ ಕಲಾವಿದರನ್ನಾಗಿ ಮಾಡಬೇಕು ಎನ್ನುವ ಒಳ್ಳೆಯ ಉದ್ದೇಶ ಇಟ್ಟುಕೊಂಡು, ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಧರ್ ಗಾಣಿಗ ಅವರು ಉಡುಪಿಯ ಉಪ್ಪುಂದದಿಂದ ಆನ್​ಲೈನ್ ಮೂಲಕ ಬ್ರಿಟನ್‌ ಮತ್ತು ಜರ್ಮನ್​ನಲ್ಲಿ ಇರುವ ಯಕ್ಷಗಾನ ಆಸಕ್ತರಿಗೆ ಯಕ್ಷಗಾನದ ನಾಟ್ಯ ಹೇಳಿಕೊಡುತ್ತಿದ್ದಾರೆ.

ಯು.ಕೆ ಯಕ್ಷಗಾನ ಸಂಘ ಎನ್ನುವ ಸಂಘಟನೆ ಮಾಡಿಕೊಂಡು ಅದರ ಮೂಲಕವಾಗಿ, ಯಕ್ಷಗಾನ ಆಸಕ್ತಿ ಇರುವವರಿಗೆ ಅವರ ವಯಸ್ಸಿನ ಆಧಾರದ ಮೇಲೆ ಬೇರೆ ಬೇರೆ ಬ್ಯಾಚ್ ಮಾಡಿಕೊಂಡು ಆ್ಯಫ್ ಮೂಲಕ ಯಕ್ಷಗಾನ ಹೇಳಿಕೊಡಲಾಗುತ್ತಿದೆ.‌ ಶ್ರೀಧರ್ ಗಾಣಿಗ ಅವರು ಉಪ್ಪುಂದದಿಂದ ಕಲಿಸಿಕೊಡುವ ಯಕ್ಷಗಾನವನ್ನು ಕಲಿಯುತ್ತಿರುವ ವಿದೇಶದಲ್ಲಿ ಇರುವ ಯಕ್ಷಪ್ರೀಯರು ಈಗ ಯಕ್ಷಗಾನದ ಪೂರ್ವರಂಗ, ಒಡ್ಡೋಲಗವನ್ನು ಕಲಿಯುತ್ತಿದ್ದಾರೆ. ಮಕ್ಕಳು ಮಹಿಳೆಯರು ಕೂಡ ಶೃದ್ಧೆಯಿಂದ ರಂಗದ ನಡೆಯನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದು ಯಕ್ಷಗಾನ ಸಂಘಟಕ ಗುರುಪ್ರಸಾದ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಲಾಕ್​ಡೌನ್ ಎಂದು ಮನೆಯಲ್ಲಿ ಸುಮ್ಮನೆ ಕಾಲಹರಣ ಮಾಡದೇ, ವಿದೇಶದಲ್ಲಿ ಇರುವವರಿಗೆ ಯಕ್ಷಗಾನ ತರಬೇತಿ ನೀಡುವ ಮೂಲಕ, ಯಕ್ಷಗಾನಕ್ಕೆ ವಿದೇಶದಲ್ಲೂ ಮಾನ್ಯತೆ ಸಿಗುವಂತೆ ಮಾಡುತ್ತಿರುವ ಯಕ್ಷಗಾನ ಕಲಾವಿದ ಶ್ರೀಧರ್ ಗಾಣಿಗ ಅವರ ಈ ಸೇವೆ ಶ್ಲಾಘನೀಯವಾದದ್ದು.

ಇದನ್ನೂ ಓದಿ:

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ

ಮದುವೆ ಮನೆಯಲ್ಲಿ ಹಣ್ಣುಗಳ ಸಂಭ್ರಮ! ಹಾಡು ಹೇಳುತ್ತಲೇ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಿದ್ದಾರೆ ವಂದನಾ ಟೀಚರ್

Published On - 10:38 am, Sat, 5 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?