ಮೂಲವ್ಯಾಧಿ: ನಾಳೆ ಸಂಪುಟ ವಿಸ್ತರಣೆ, ಇಂದು BSYಗೆ ದೂರವಾಣಿ ‘ಶಾ’ಕ್

ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸಂಪುಟ ವಿಸ್ತರಿಸಲು ಭಾರಿ ಸಂಭ್ರಮದಲ್ಲಿದ್ದಾರೆ. ಆದರೆ ಬಿಜೆಪಿಗೆ ಮೂಲವ್ಯಾಧಿ ಕಾಡತೊಡಗಿದೆ. ಇಂದು ಮುಂಜಾನೆ ಬಿಎಸ್​ವೈಗೆ ವರಿಷ್ಠ ಅಮಿತ್ ಶಾ ಕರೆಮಾಡಿ ಶಾಕ್ ಕೊಟ್ಟಿದ್ದಾರೆ. ನಾಳೆಯ ಸಂಪುಟ ವಿಸ್ತರಣೆಯಲ್ಲಿ ಕೇವಲ ಹತ್ತು ಜನರಿಗೆ ಮಾತ್ರ ಸಚಿವ ಸ್ಥಾನ ನೀಡುವಂತೆ ಸೂಚನೆ ನೀಡಿದ್ದಾರಂತೆ. ಮೂಲ ಬಿಜೆಪಿ ಶಾಸಕರಿಗೆ ನಾಳೆ ಸಚಿವ ಸ್ಥಾನ ಸಿಗುವುದಿಲ್ಲ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ BSY ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ ಅಮಿತ್ ಶಾ […]

ಮೂಲವ್ಯಾಧಿ: ನಾಳೆ ಸಂಪುಟ ವಿಸ್ತರಣೆ, ಇಂದು BSYಗೆ ದೂರವಾಣಿ ಶಾಕ್

Updated on: Feb 05, 2020 | 11:41 AM

ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸಂಪುಟ ವಿಸ್ತರಿಸಲು ಭಾರಿ ಸಂಭ್ರಮದಲ್ಲಿದ್ದಾರೆ. ಆದರೆ ಬಿಜೆಪಿಗೆ ಮೂಲವ್ಯಾಧಿ ಕಾಡತೊಡಗಿದೆ. ಇಂದು ಮುಂಜಾನೆ ಬಿಎಸ್​ವೈಗೆ ವರಿಷ್ಠ ಅಮಿತ್ ಶಾ ಕರೆಮಾಡಿ ಶಾಕ್ ಕೊಟ್ಟಿದ್ದಾರೆ. ನಾಳೆಯ ಸಂಪುಟ ವಿಸ್ತರಣೆಯಲ್ಲಿ ಕೇವಲ ಹತ್ತು ಜನರಿಗೆ ಮಾತ್ರ ಸಚಿವ ಸ್ಥಾನ ನೀಡುವಂತೆ ಸೂಚನೆ ನೀಡಿದ್ದಾರಂತೆ. ಮೂಲ ಬಿಜೆಪಿ ಶಾಸಕರಿಗೆ ನಾಳೆ ಸಚಿವ ಸ್ಥಾನ ಸಿಗುವುದಿಲ್ಲ ಎಂದು ತಿಳಿದು ಬಂದಿದೆ.

ಇಂದು ಮುಂಜಾನೆ BSY ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ ಅಮಿತ್ ಶಾ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡಿದ್ದಾರೆ. ನಂತರ ಅಮಿತ್ ಶಾ ಸೂಚನೆಯಂತೆ BSY ಉಮೇಶ್ ಕತ್ತಿ, ಯೋಗೇಶ್ವರ್ ಇಬ್ಬರನ್ನೂ ಮನೆಗೆ ಕರೆಸಿ ಮಾತನಾಡಿದ್ದಾರೆ. ಹೈಕಮಾಂಡ್ ನೀಡಿದ್ದ ಮಾಹಿತಿಯನ್ನು ಇಬ್ಬರ ಜೊತೆ ಹಂಚಿಕೊಂಡಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದ 10 ಶಾಸಕರಿಗೆ ಮಾತ್ರ ನಾಳೆ ಮಂತ್ರಿಗಿರಿ ಸಿಗಲಿದ್ದು, ಅಧಿವೇಶನ ಮುಗಿದ ಬಳಿಕ ಸಚಿವ ಸ್ಥಾನ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us