AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Sudhakar Press Meet: ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ; ಸಚಿವ ಸುಧಾಕರ್ ಸ್ಪಷ್ಟನೆ

Chamarajanagar Death Incident: ಇದೇ ವೇಳೆ ಮಾತನಾಡಿದ ಚಾಮರಾಜನಗರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಆಸ್ಪತ್ರೆಗೆ ಬಂದ ಪ್ರತಿಯೊಬ್ಬ ವ್ಯಕ್ತಿಯೂ ಗುಣಮುಖರಾಗಿ ಹೋಗಬೇಕು. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದರೂ ದುರಂತ ನಡೆದಿದೆ. ದುರಂತ ಸಂಭವಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

K Sudhakar Press Meet: ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ; ಸಚಿವ ಸುಧಾಕರ್ ಸ್ಪಷ್ಟನೆ
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
preethi shettigar
| Updated By: guruganesh bhat|

Updated on:May 03, 2021 | 3:58 PM

Share

ಚಾಮರಾಜನಗರ: ‘ಇಂದು ಸಂಭವಿಸಿದ ಘಟನೆ ಬಹಳ ದುಃಖಕರವಾದುದು. ಮೃತರ ಕುಟುಂಬಗಳ ಜೊತೆ ರಾಜ್ಯ ಸರ್ಕಾರ ಇದೆ. ಈಗಾಗಲೇ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ. ನ್ಯಾಯಸಮ್ಮತ ತನಿಖೆ ಆಗಲಿ.  ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 123 ಸೋಂಕಿತರು ದಾಖಲಾಗಿದ್ದಾರೆ. ವೆಂಟಿಲೇಟರ್‌ನಲ್ಲಿ 14 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಬೆಳಗ್ಗೆ 7 ಗಂಟೆಯಿಂದ ಮಧ್ಯರಾತ್ರಿವರೆಗೆ 14 ಜನ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಕೊವಿಡ್ ಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.  ಮಧ್ಯರಾತ್ರಿ 12ರಿಂದ 3 ಗಂಟೆವರೆಗೆ ಮೂವರು ಸಾವನ್ನಪ್ಪಿದ್ದಾರೆ. ಮುಂಜಾನೆ 3 ಗಂಟೆಯಿಂದ 7 ಗಂಟೆಯವರೆಗೆ 7 ಜನ ಸಾವುನ್ನಪ್ಪಿದ್ದು, 24 ಗಂಟೆಯಲ್ಲಿ 23 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 24 ಸೋಂಕಿತರು ಮೃತಪಟ್ಟಿದ್ದಾರೆ. ನಮಗೆ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಮೃತಪಟ್ಟಿದ್ದಾರೆ’ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದರು. 

ಇದೇ ವೇಳೆ ಮಾತನಾಡಿದ ಚಾಮರಾಜನಗರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಆಸ್ಪತ್ರೆಗೆ ಬಂದ ಪ್ರತಿಯೊಬ್ಬ ವ್ಯಕ್ತಿಯೂ ಗುಣಮುಖರಾಗಿ ಹೋಗಬೇಕು. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದರೂ ದುರಂತ ನಡೆದಿದೆ. ದುರಂತ ಸಂಭವಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಘಟನೆ ಬಗ್ಗೆ ತನಿಖೆ ನಡೆಸಿ 3 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಪ್ರತಿಯೊಬ್ಬರ ಸಾವು ನಮಗೆ ದೊಡ್ಡ ನಷ್ಟ. ಅವರವರ ಕುಟುಂಬಕ್ಕೂ ಇದು ದೊಡ್ಡ ಆಘಾತ. ಆಮ್ಲಜನಕ ಕೊರತೆಯಿಂದ ಈ ಸಾವು ಅಗಿದೆ ಎಂಬ ಭಾವನೆ ಎಲ್ಲರಲ್ಲೂ ಇದೆ. ಆಮ್ಲಜನಕ ಯಾವ ಯಾವ ಪ್ರಮಾಣದಲ್ಲಿ ಬಂದಿದೆ ಮಾಹಿತಿ ಇದೆ. ಎಲ್ಲಾ ಸಾವುಗಳು ಅಮ್ಲಜನಕ ಕೊರತೆಯಿಂದಲೇ ಸಂಭವಿಸಿದ್ದಲ್ಲ. ಕೊವಿಡ್ ನಲ್ಲೇ ಕೊನೆ ಹಂತದಲ್ಲಿ‌ ದಾಖಲಾಗಿದ್ದವರೂ ಇದ್ದಾರೆ. ಈ ಬಗ್ಗೆ ತನಿಖೆ ಅಗಬೇಕು. 24 ರಲ್ಲಿ ಅಮ್ಲಜನಕದಿಂದ ಎಷ್ಟು ಸಾವು ಎಂಬುದನ್ನು ಪತ್ತೆ ಮಾಡಬೇಕು. 3 ದಿನಗಳಲ್ಲಿ ವಿಚಾರಣೆ ಮಾಡಲು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್ ಅವರನ್ನು ಸರ್ಕಾರ ನಿಯೋಜಿಸಿದೆ. 3 ದಿನದಲ್ಲಿ ಅವರು ತನಿಖಾ ವರದಿ ಸಲ್ಲಿಸಲಿದ್ದಾರೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಇದನ್ನೂ ಓದಿ: ಆಕ್ಸಿಜನ್ ವ್ಯತ್ಯಯ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರೂ ಸೇರಿ 22 ರೋಗಿಗಳ ಸಾವು 

ಚಾಮರಾಜನಗರ ದುರಂತ: ಎಚ್ಚೆತ್ತ ಸರ್ಕಾರದಿಂದ ಆಕ್ಸಿಜನ್ ಪೂರೈಕೆ ಬಗ್ಗೆ ಮಹತ್ವದ ಆದೇಶ

(Only 3 people died from lack of medical oxygen in Chamarajanagar clarifies Karnataka health minister K Sudhakar)

Published On - 3:50 pm, Mon, 3 May 21