AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಿದ್ದಾನೆ Nithyananda Swamiji? ತಲೆಮರೆಸಿಕೊಂಡಿರುವ ನಿತ್ಯಾನಂದ ಸ್ವಾಮಿ ಹುಡುಕುವಲ್ಲಿ ವಿಫಲವಾದ್ರಾ ಅಧಿಕಾರಿಗಳು

Nithyananda Swamiji ಬಿಡದಿ ಧ್ಯಾನಪೀಠದ ಮೂಲಕ ದಿಢೀರ್ ಹೆಸರುಗಳಿಸಿದ್ದ ನಿತ್ಯಾನಂದ ಸದಾ ಒಂದಿಲ್ಲೊಂದು ವಿವಾದದಿಂದ ಕುಖ್ಯಾತಿ ಪಡೆದಿದ್ದ. ನಿತ್ಯಾನಂದನ ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪವೂ ಇದೆ. ಆದ್ರೆ ನಿತ್ಯಾನಂದ ಈಗ ಎಲ್ಲಿದ್ದಾನೆ, ಏನು ಮಾಡ್ತ್ತಿದ್ದಾನೆ ಅನ್ನೋದು ಯಕ್ಷಪ್ರಶ್ನೆಯಾಗಿದೆ...

ಎಲ್ಲಿದ್ದಾನೆ Nithyananda Swamiji? ತಲೆಮರೆಸಿಕೊಂಡಿರುವ ನಿತ್ಯಾನಂದ ಸ್ವಾಮಿ ಹುಡುಕುವಲ್ಲಿ ವಿಫಲವಾದ್ರಾ ಅಧಿಕಾರಿಗಳು
ನಿತ್ಯಾನಂದ ಸ್ವಾಮಿ
ಆಯೇಷಾ ಬಾನು
|

Updated on:Feb 05, 2021 | 7:16 AM

Share

ರಾಮನಗರ: ತನ್ನ ವೈಭವ ಭರಿತ ಜೀವನ ಹಾಗೂ ವಿವಾದಗಳಿಂದಲೇ ನಿತ್ಯಾನಂದ ದೇಶಾದ್ಯಂತ ಫುಲ್ ಫೇಮಸ್ ಆಗಿದ್ದ. ರಾಮನಗರದ ಬಿಡದಿಯಲ್ಲಿ ಧ್ಯಾನಪೀಠ ಮಾಡ್ಕೊಂಡಿದ್ದ ನಿತ್ಯಾನಂದ ಆಗೊಮ್ಮೆ, ಈಗೊಮ್ಮೆ ತೆರೆಮೇಲೆ ಪ್ರತ್ಯಕ್ಷನಾಗಿ ಮತ್ತೆ ಮರೆಯಾಗ್ತಿದ್ದಾನೆ. ಆದರೆ ನಾಪತ್ತೆಯಾಗಿರುವ ನಿತ್ಯಾನಂದ ಎಲ್ಲಿದ್ದಾನೆ ಎಂಬ ಪಕ್ಕಾ ಮಾಹಿತಿ ಇನ್ನೂ ಸಿಕ್ಕಿಲ್ಲ. ಇದು ಅಧಿಕಾರಿಗಳಿಗೂ ತಲೆನೋವಾಗಿ ಪರಿಣಮಿಸಿದೆ.

ನಿತ್ಯಾನಂದ ಈಗ ಎಲ್ಲಿದ್ದಾನೆ..? ಏನು ಮಾಡ್ತಿದ್ದಾನೆ..? ಅಂದಹಾಗೆ ನಿತ್ಯಾನಂದನ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳದಂಥ ಗಂಭೀರ ಆರೋಪಗಳು ಕೂಡ ಇವೆ. ಪ್ರಕರಣ ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿದೆ. ನಿತ್ಯಾನಂದ 3 ವರ್ಷದಿಂದ ಕೋರ್ಟ್​ಗೂ ಹಾಜರಾಗಿಲ್ಲ. ಹೀಗಾಗಿ ನಿತ್ಯಾನಂದನ ವಿರುದ್ಧ ಓಪನ್ ಇಂಡೆಂಟ್ ವಾರೆಂಟ್’ ಕೂಡ ಜಾರಿಯಾಗಿದೆ. ಆದ್ರೆ ಈಗ ನಿತ್ಯಾನಂದ ಎಲ್ಲಿದ್ದಾನೆ, ಏನು ಮಾಡ್ತಿದ್ದಾನೆ ಅನ್ನೋದು ಯಾರಿಗೂ ಗೊತ್ತಿಲ್ಲ. ಆಗಾಗ ವಿಡಿಯೋ ಮಾಡಿ, ಇಂಟರ್ನೆಟ್​ನಲ್ಲಿ ಹರಿಬಿಡುವ ನಿತ್ಯಾನಂದನ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. ನಿತ್ಯಾನಂದನ ವಿರುದ್ಧ ವಾರಂಟ್ ಜಾರಿಯಾಗಿದ್ದರೂ ಆತನನ್ನ ಹುಡುಕಿ, ಕೋರ್ಟ್ ಮುಂದೆ ಹಾಜರುಪಡಿಸುವ ಕೆಲಸವನ್ನ ಅಧಿಕಾರಿಗಳು ಮಾಡಿಲ್ಲ.

ಅಂದಹಾಗೆ ನಿತ್ಯಾನಂದ ಪದೇಪದೆ ಕೋರ್ಟ್​ಗೆ ಹಾಜರಾಗದ ಹಿನ್ನೆಲೆ ಆತನ ವಿರುದ್ಧ ‘ಓಪನ್ ಇಂಡೆಂಟ್ ವಾರೆಂಟ್’’ ಜಾರಿಯಾಗಿದೆ. ಅಲ್ದೆ ನಿತ್ಯಾನಂದನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ನಿಟ್ಟಿನಲ್ಲಿ, ನಿತ್ಯಾನಂದನ ಆಸ್ತಿಯ ಬಗ್ಗೆ ಮಾಹಿತಿ ನೀಡುವಂತೆ ಕೋರ್ಟ್ ಆದೇಶಿಸಿದೆ. ಆದ್ರೆ ಈಗಾಗಲೇ ಬಿಡದಿಯ ಧ್ಯಾನಪೀಠವನ್ನ ತನ್ನ ತಾಯಿಯ ಹೆಸರಿಗೆ ವರ್ಗಾವಣೆ ಮಾಡಿದ್ದಾನೆ ನಿತ್ಯಾನಂದ. ಹೀಗಾಗಿ ಉಳಿದಿರುವ ಆಸ್ತಿಯನ್ನ ಪತ್ತೆ ಹಚ್ಚೋಕೆ ಅಧಿಕಾರಿಗಳಿಂದ ಸಾಧ್ಯವಾಗಿಲ್ಲ. ಗಂಭೀರ ಆರೋಪ ಎದುರಿಸಿ, ಕೋರ್ಟ್​ಗೆ ಹಾಜರಾಗದೆ, ವಾರಂಟ್ ಜಾರಿಯಾಗಿದ್ರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೂ ಕಾರಣವಾಗಿದೆ.

ಒಟ್ನಲ್ಲಿ ನಿತ್ಯಾನಂದನ ಕೇಸ್ ಕಗ್ಗಂಟಾಗಿದೆ. ಕೋರ್ಟ್ ಆದೇಶಕ್ಕೂ ತಲೆಬಾಗದೆ ಎಸ್ಕೇಪ್ ಆಗಿರುವ ಆಸಾಮಿ ನಿತ್ಯಾನಂದನ ಜಾಡು ಹಿಡಿಯಲು ಅಧಿಕಾರಿಗಳು ಮುಂದಾಗ್ತಿಲ್ಲ. ಈಗಲಾದ್ರೂ ಆ ಕೆಲಸ ಆಗಬೇಕಿದೆ.

ನಿತ್ಯಾನಂದ ಕಾಣಿಸ್ತಿಲ್ಲ.. ಬಿಡದಿ ಪೀಠಕ್ಕೆ ಕಾಲಿಟ್ಟು ವರ್ಷವಾಗಿದೆ!

Published On - 7:16 am, Fri, 5 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!