AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್​ನಿಂದ ಬಂತು ಖಡಕ್ ಸಂದೇಶ, ಸಚಿವರ ವರದಿ ಸಲ್ಲಿಸಲು ಸೂಚನೆ

ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ಕಲಹದ ಬಗ್ಗೆ ಹೈಕಮಾಂಡ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಸಚಿವರ ಅನಗತ್ಯ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಹೈಕಮಾಂಡ್ ಅಭಿಪ್ರಾಯಪಟ್ಟಿದ್ದು, ಪಕ್ಷದ ಶಿಸ್ತು ಉಲ್ಲಂಘಿಸಿ ವಿರುದ್ಧ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ನಾಯಕತ್ವ ಬದಲಾವಣೆ ಸಂಬಂಧ ಮಾತನಾಡುವವರ ವರದಿ ಕೋರಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್​ನಿಂದ ಬಂತು ಖಡಕ್ ಸಂದೇಶ, ಸಚಿವರ ವರದಿ ಸಲ್ಲಿಸಲು ಸೂಚನೆ
ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್​ನಿಂದ ಬಂತು ಖಡಕ್ ಸಂದೇಶ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Jan 16, 2025 | 7:58 AM

Share

ಬೆಂಗಳೂರು, ಜನವರಿ 16: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿರುವ ಬೆನ್ನಲ್ಲೇ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ಖಡಕ್ ಸಂದೇಶ ರವಾನೆ ಮಾಡಿದೆ. ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬ ಸ್ಪಷ್ಟೀಕರಣ ನೀಡಿದ್ದಾರೆ.

ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ಎಂದಿರುವ ಹೈಕಮಾಂಡ್ ಹೇಳಿರುವುದಾಗಿ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಬಹಿರಂಗ ಹೇಳಿಕೆ ನೀಡುವವರ ವರದಿ ಕೇಳಿದ ಹೈಕಮಾಂಡ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ, ಸಚಿವರ ಬದಲಾವಣೆ ಎಲ್ಲವೂ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು. ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ, ಪಕ್ಷದ ಹೈಕಮಾಂಡ್. ಪಕ್ಷದ ನಾಯಕರು ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕು. ಇಂತಹ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್‌ ನಾಯಕರು ಕೇಳಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಚಿವರ ನಡತೆ ಸರಿಯಲ್ಲ: ಹೈಕಮಾಂಡ್ ಗರಂ

ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ. ಆದರೆ ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುವವರ ಸಂಪೂರ್ಣ ವರದಿ ನೀಡಿ ಎಂದು ಹೈಕಮಾಂಡ್ ಕೇಳಿದೆ. ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್‌ ಸೂಚಿಸಿದೆ. ಕೆಲವು ಸಚಿವರು ಪದೇ ಪದೆ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ ಹೆಚ್​ಸಿ ಮಹದೇವಪ್ಪ ಅವರು ಪದೇ ಪದೇ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಪರಿಣಾಮ ತಟ್ಟಲಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸಾಹುಕಾರ್ ಹೊಸ ಆಟ: ಸಿಎಂ ಕರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆಶಿಗೆ ಜಾರಕಿಹೊಳಿ ಶಾಕ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ