AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್ ಎಫೆಕ್ಟ್​: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ಕ್ಯಾನ್ಸಲ್

ಪಾಕಿಸ್ತಾನದ ಮೇಲೆ ಭಾರತ ಸೇನೆಯಿಂದ ಏರ್‌ಸ್ಟ್ರೈಕ್‌ ಹಿನ್ನೆಲೆ, ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ಟ್ವೀಟ್​​ ಮೂಲಕ ಮಾಹಿತಿ ನೀಡಿದೆ. ಹಾಗಾದರೆ ಯಾವೆಲ್ಲಾ ರಾಜ್ಯಗಳ ವಿಮಾನಗಳನ್ನು ರದ್ದು ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಆಪರೇಷನ್ ಸಿಂಧೂರ್ ಎಫೆಕ್ಟ್​: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ಕ್ಯಾನ್ಸಲ್
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ನವೀನ್ ಕುಮಾರ್ ಟಿ
| Edited By: |

Updated on:May 07, 2025 | 2:36 PM

Share

ಬೆಂಗಳೂರು, ಮೇ 07: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್​ನ (Pahalgam) ಉಗ್ರರ ದಾಳಿ ಪ್ರತೀಕಾರವನ್ನು ತೀರಿಸಿಕೊಂಡಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ಸೂಚನೆ ಹಿನ್ನೆಲೆ ಭಾರತದ ವಿವಿಧೆಡೆ ವಿಮಾನ ಸಂಚಾರ ರದ್ದು (Flights Cancelled) ಮಾಡಲಾಗಿದೆ. ಅದೇ ರೀತಿಯಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ.

ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನದ ಜೋಧಪುರ್, ಯುಪಿಯ ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್​​ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಟ್ವೀಟ್

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಟ್ವೀಟ್​ ಮಾಡಿದ್ದು, ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದು ಮೊಳಗಲಿದೆ ಸೈರನ್: ಮಾಕ್ ಡ್ರಿಲ್​​ಗೆ ಸಜ್ಜಾದ ಸಿಲಿಕಾನ್​ ಸಿಟಿ

ಈ ಕಾರಣ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಿ ಪರಿಶೀಲಿಸಲು ವಿನಂತಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನಗಳ ವೇಳಾಪಟ್ಟಿಯಲ್ಲಿನ ಬದಲಾವಣೆಗಳನ್ನು ಆಯಾ ವಿಮಾನಯಾನ ಸಂಸ್ಥೆಗಳ ಅಧಿಕೃತ ಟ್ವಿಟರ್ (ಎಕ್ಸ್) ಖಾತೆಗಳ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಮಂಗಳೂರು ಏರ್​ಪೋರ್ಟ್​ನಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

ಕ್ಷಿಪಣಿ ದಾಳಿ ಹಿನ್ನೆಲೆ ಕೆಲ ವಾಯು ಮಾರ್ಗಗಳಲ್ಲಿ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಮಂಗಳೂರು ಏರ್​ಪೋರ್ಟ್ ಪ್ರಯಾಣಿಕರಿಗೆ ಸೂಚನೆ ನೀಡಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ಪರಿಶೀಲನೆ ಮಾಡಿ ತೆರಳುವಂತೆ ಮಂಗಳೂರು ವಿಮಾನ ನಿಲ್ದಾಣದ ಆಡಳಿತ ವಿಭಾಗದಿಂದ ಪ್ರಕಟಣೆ ಹೊರಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:24 pm, Wed, 7 May 25

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More