AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಲ್ಲ, ಮಿಸ್ಟರ್ ಯಡಿಯೂರಪ್ಪನವರೇ ಗೊಂದಲ ಸೃಷ್ಟಿಸ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಳೆಗೆ 100 ದಿನ ಪೂರೈಸುತ್ತೆ. ಆದ್ರೆ, ಈ ಸರ್ಕಾರ ಬಂದಿರುವುದೇ ಅನೈತಿಕವಾಗಿ. ಬಿಜೆಪಿ ಸರ್ಕಾರಕ್ಕೆ ಜನಾದೇಶ ಇಲ್ಲ, ಆದರೂ ಹಿಂಬಾಗಿಲಿನಿಂದ ಬಂದು ಸರ್ಕಾರವನ್ನು ರಚಿಸಿದ್ದಾರೆ ಎಂದು ಪ್ರೆಸ್​ಕ್ಲಬ್​ನಲ್ಲಿ ನಡೆದ ಮಾಧ್ಯಮ ಸಂವಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈಗಲೂ ಬಿಜೆಪಿಗೆ ಬಹುಮತ ಇಲ್ಲ, ಈ ಮಾತನ್ನು ನಾನು ಸಿಎಂ ಆಗಬೇಕು ಎಂಬ ಕನಸು ಇಟ್ಕೊಂಡು ಹೇಳ್ತಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿಗೆ 8 ಸ್ಥಾನ ಬರದಿದ್ರೆ ಬಿಎಸ್​ವೈ ಪರಿಸ್ಥಿತಿ ಏನಾಗುತ್ತೆ? ಒಂದು ವೇಳೆ […]

ನಾನಲ್ಲ, ಮಿಸ್ಟರ್ ಯಡಿಯೂರಪ್ಪನವರೇ ಗೊಂದಲ ಸೃಷ್ಟಿಸ್ತಿದ್ದಾರೆ: ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Nov 02, 2019 | 12:17 PM

Share

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಳೆಗೆ 100 ದಿನ ಪೂರೈಸುತ್ತೆ. ಆದ್ರೆ, ಈ ಸರ್ಕಾರ ಬಂದಿರುವುದೇ ಅನೈತಿಕವಾಗಿ. ಬಿಜೆಪಿ ಸರ್ಕಾರಕ್ಕೆ ಜನಾದೇಶ ಇಲ್ಲ, ಆದರೂ ಹಿಂಬಾಗಿಲಿನಿಂದ ಬಂದು ಸರ್ಕಾರವನ್ನು ರಚಿಸಿದ್ದಾರೆ ಎಂದು ಪ್ರೆಸ್​ಕ್ಲಬ್​ನಲ್ಲಿ ನಡೆದ ಮಾಧ್ಯಮ ಸಂವಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈಗಲೂ ಬಿಜೆಪಿಗೆ ಬಹುಮತ ಇಲ್ಲ, ಈ ಮಾತನ್ನು ನಾನು ಸಿಎಂ ಆಗಬೇಕು ಎಂಬ ಕನಸು ಇಟ್ಕೊಂಡು ಹೇಳ್ತಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿಗೆ 8 ಸ್ಥಾನ ಬರದಿದ್ರೆ ಬಿಎಸ್​ವೈ ಪರಿಸ್ಥಿತಿ ಏನಾಗುತ್ತೆ? ಒಂದು ವೇಳೆ ಮಧ್ಯಂತರ ಚುನಾವಣೆ ಬರಬಹುದು ಅಂಥ ಹೇಳಿದ್ದೇನೆ ಎಂದರು.

ಮಿಸ್ಟರ್ ಯಡಿಯೂರಪ್ಪ ನೀವು ಗೊಂದಲ ಸೃಷ್ಟಿಸುತ್ತಿದ್ದೀರಿ: 2009ರಲ್ಲಿ ಕಟ್ಟಿರುವ ಆಸರೆ ಮನೆಗಳು ಈಗ ಹಾಳಾಗಿವೆ. ಈ ಬಗ್ಗೆ ಪ್ರಶ್ನಿಸಿದ್ರೆ ನಾನು ಗೊಂದಲ ಸೃಷ್ಟಿಸ್ತಿದ್ದೀನಿ ಅಂತಾರೆ. ಗೊಂದಲವನ್ನ ನಾನು ಸೃಷ್ಟಿಸ್ತಿಲ್ಲ ಮಿಸ್ಟರ್ ಯಡಿಯೂರಪ್ಪ, ಗೊಂದಲ ನೀವು ಸೃಷ್ಟಿಸುತ್ತಿದ್ದೀರಿ. ಜನರಿಗೆ ನೀವು ಸುಳ್ಳು ಹೇಳ್ತಿದ್ದೀರಿ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ತಾರೆ. ನಾನು ಆರೋಪ ಮಾಡಿದ ಮೇಲೆ ಜಾಹೀರಾತು ನೀಡ್ತಾರೆ. ಆದ್ರೆ ಅಲ್ಲೂ ಸತ್ಯ ಹೇಳುವುದಿಲ್ಲ. ಕೇಂದ್ರಕ್ಕೆ ಒಂದು ಅಂಕಿ ಅಂಶ, ಜಾಹೀರಾತಿನಲ್ಲಿ ಬೇರೆ ಅಂಕಿ ಇರುತ್ತೆ. ಯಾವುದು ಸುಳ್ಳು, ಯಾವುದು ಸತ್ಯ ಎಂದು ಸಿಎಂ ಯಡಿಯೂರಪ್ಪ ಹೇಳಲಿ ನೋಡೋಣ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದರು

ನಾನೇ ಟಿಪ್ಪು ಅಂತ ಯಡಿಯೂರಪ್ಪ ಹೇಳಿದ್ರು: ಮಿಸ್ಟರ್ ಅಶೋಕ್ ಟಿಪ್ಪು ಪೇಟ ಹಾಕಿದ್ದವರು ಯಾರು? ಯಡಿಯೂರಪ್ಪ, ಜಗದೀಶ್​ ಶೆಟ್ರು ಎಲ್ಲರೂ ಪೇಟ ಹಾಕಿರಲಿಲ್ವೇ? ನಾನೇ ಟಿಪ್ಪು ಅಂತ ಯಡಿಯೂರಪ್ಪ ಹೇಳಿರಲಿಲ್ವೇ? ಟಿಪ್ಪು ಬಗ್ಗೆ ಗೋವಿಂದ ಕಾರಜೋಳ ಏನಂತ ಬರೆದಿದ್ದಾರೆ ಗೊತ್ತಾ? ಮಿಸ್ಟರ್ ಅಶೋಕ್ ಇದರ ಬಗ್ಗೆ ಮಾತನಾಡಪ್ಪ, ಆಗ ಯಾರು ಅಬ್ದುಲ್ ಅನ್ನೋದು ಗೊತ್ತಾಗುತ್ತದೆ ಎಂದು ಸಚಿವ ಆರ್​.ಅಶೋಕ್​ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಆಪರೇಷನ್​ ಕಮಲ ಜುಲೈನಲ್ಲಿ ನಡೆದದ್ದಲ್ಲ: ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಆಪರೇಷನ್ ಕಮಲ ನಡೆಯುತ್ತಿತ್ತು. ಹಣದ ಆಮಿಷ ಒಡ್ಡಿ ಶಾಸಕರನ್ನು ಖರೀದಿ ಮಾಡಿದ್ದಾರೆ. ದೇವದುರ್ಗದಲ್ಲಿ ಯಡಿಯೂರಪ್ಪ ಆಡಿಯೋ ರೆಕಾರ್ಡ್ ಆಗಿದ್ದ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದರು. ಆದ್ರೆ ನಾವು ಆಪರೇಷನ್ ಕಮಲ ಮಾಡಿಲ್ಲ ಎಂದು ಸುಳ್ಳು ಹೇಳ್ತಾರೆ. ಹಾಗಾದ್ರೆ, ಅನರ್ಹರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಟ್ಟಿದ್ಯಾಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Published On - 2:01 pm, Fri, 1 November 19

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ