AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಲ್ಲ, ಮಿಸ್ಟರ್ ಯಡಿಯೂರಪ್ಪನವರೇ ಗೊಂದಲ ಸೃಷ್ಟಿಸ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಳೆಗೆ 100 ದಿನ ಪೂರೈಸುತ್ತೆ. ಆದ್ರೆ, ಈ ಸರ್ಕಾರ ಬಂದಿರುವುದೇ ಅನೈತಿಕವಾಗಿ. ಬಿಜೆಪಿ ಸರ್ಕಾರಕ್ಕೆ ಜನಾದೇಶ ಇಲ್ಲ, ಆದರೂ ಹಿಂಬಾಗಿಲಿನಿಂದ ಬಂದು ಸರ್ಕಾರವನ್ನು ರಚಿಸಿದ್ದಾರೆ ಎಂದು ಪ್ರೆಸ್​ಕ್ಲಬ್​ನಲ್ಲಿ ನಡೆದ ಮಾಧ್ಯಮ ಸಂವಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈಗಲೂ ಬಿಜೆಪಿಗೆ ಬಹುಮತ ಇಲ್ಲ, ಈ ಮಾತನ್ನು ನಾನು ಸಿಎಂ ಆಗಬೇಕು ಎಂಬ ಕನಸು ಇಟ್ಕೊಂಡು ಹೇಳ್ತಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿಗೆ 8 ಸ್ಥಾನ ಬರದಿದ್ರೆ ಬಿಎಸ್​ವೈ ಪರಿಸ್ಥಿತಿ ಏನಾಗುತ್ತೆ? ಒಂದು ವೇಳೆ […]

ನಾನಲ್ಲ, ಮಿಸ್ಟರ್ ಯಡಿಯೂರಪ್ಪನವರೇ ಗೊಂದಲ ಸೃಷ್ಟಿಸ್ತಿದ್ದಾರೆ: ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Nov 02, 2019 | 12:17 PM

Share

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಳೆಗೆ 100 ದಿನ ಪೂರೈಸುತ್ತೆ. ಆದ್ರೆ, ಈ ಸರ್ಕಾರ ಬಂದಿರುವುದೇ ಅನೈತಿಕವಾಗಿ. ಬಿಜೆಪಿ ಸರ್ಕಾರಕ್ಕೆ ಜನಾದೇಶ ಇಲ್ಲ, ಆದರೂ ಹಿಂಬಾಗಿಲಿನಿಂದ ಬಂದು ಸರ್ಕಾರವನ್ನು ರಚಿಸಿದ್ದಾರೆ ಎಂದು ಪ್ರೆಸ್​ಕ್ಲಬ್​ನಲ್ಲಿ ನಡೆದ ಮಾಧ್ಯಮ ಸಂವಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈಗಲೂ ಬಿಜೆಪಿಗೆ ಬಹುಮತ ಇಲ್ಲ, ಈ ಮಾತನ್ನು ನಾನು ಸಿಎಂ ಆಗಬೇಕು ಎಂಬ ಕನಸು ಇಟ್ಕೊಂಡು ಹೇಳ್ತಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿಗೆ 8 ಸ್ಥಾನ ಬರದಿದ್ರೆ ಬಿಎಸ್​ವೈ ಪರಿಸ್ಥಿತಿ ಏನಾಗುತ್ತೆ? ಒಂದು ವೇಳೆ ಮಧ್ಯಂತರ ಚುನಾವಣೆ ಬರಬಹುದು ಅಂಥ ಹೇಳಿದ್ದೇನೆ ಎಂದರು.

ಮಿಸ್ಟರ್ ಯಡಿಯೂರಪ್ಪ ನೀವು ಗೊಂದಲ ಸೃಷ್ಟಿಸುತ್ತಿದ್ದೀರಿ: 2009ರಲ್ಲಿ ಕಟ್ಟಿರುವ ಆಸರೆ ಮನೆಗಳು ಈಗ ಹಾಳಾಗಿವೆ. ಈ ಬಗ್ಗೆ ಪ್ರಶ್ನಿಸಿದ್ರೆ ನಾನು ಗೊಂದಲ ಸೃಷ್ಟಿಸ್ತಿದ್ದೀನಿ ಅಂತಾರೆ. ಗೊಂದಲವನ್ನ ನಾನು ಸೃಷ್ಟಿಸ್ತಿಲ್ಲ ಮಿಸ್ಟರ್ ಯಡಿಯೂರಪ್ಪ, ಗೊಂದಲ ನೀವು ಸೃಷ್ಟಿಸುತ್ತಿದ್ದೀರಿ. ಜನರಿಗೆ ನೀವು ಸುಳ್ಳು ಹೇಳ್ತಿದ್ದೀರಿ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ತಾರೆ. ನಾನು ಆರೋಪ ಮಾಡಿದ ಮೇಲೆ ಜಾಹೀರಾತು ನೀಡ್ತಾರೆ. ಆದ್ರೆ ಅಲ್ಲೂ ಸತ್ಯ ಹೇಳುವುದಿಲ್ಲ. ಕೇಂದ್ರಕ್ಕೆ ಒಂದು ಅಂಕಿ ಅಂಶ, ಜಾಹೀರಾತಿನಲ್ಲಿ ಬೇರೆ ಅಂಕಿ ಇರುತ್ತೆ. ಯಾವುದು ಸುಳ್ಳು, ಯಾವುದು ಸತ್ಯ ಎಂದು ಸಿಎಂ ಯಡಿಯೂರಪ್ಪ ಹೇಳಲಿ ನೋಡೋಣ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದರು

ನಾನೇ ಟಿಪ್ಪು ಅಂತ ಯಡಿಯೂರಪ್ಪ ಹೇಳಿದ್ರು: ಮಿಸ್ಟರ್ ಅಶೋಕ್ ಟಿಪ್ಪು ಪೇಟ ಹಾಕಿದ್ದವರು ಯಾರು? ಯಡಿಯೂರಪ್ಪ, ಜಗದೀಶ್​ ಶೆಟ್ರು ಎಲ್ಲರೂ ಪೇಟ ಹಾಕಿರಲಿಲ್ವೇ? ನಾನೇ ಟಿಪ್ಪು ಅಂತ ಯಡಿಯೂರಪ್ಪ ಹೇಳಿರಲಿಲ್ವೇ? ಟಿಪ್ಪು ಬಗ್ಗೆ ಗೋವಿಂದ ಕಾರಜೋಳ ಏನಂತ ಬರೆದಿದ್ದಾರೆ ಗೊತ್ತಾ? ಮಿಸ್ಟರ್ ಅಶೋಕ್ ಇದರ ಬಗ್ಗೆ ಮಾತನಾಡಪ್ಪ, ಆಗ ಯಾರು ಅಬ್ದುಲ್ ಅನ್ನೋದು ಗೊತ್ತಾಗುತ್ತದೆ ಎಂದು ಸಚಿವ ಆರ್​.ಅಶೋಕ್​ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಆಪರೇಷನ್​ ಕಮಲ ಜುಲೈನಲ್ಲಿ ನಡೆದದ್ದಲ್ಲ: ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಆಪರೇಷನ್ ಕಮಲ ನಡೆಯುತ್ತಿತ್ತು. ಹಣದ ಆಮಿಷ ಒಡ್ಡಿ ಶಾಸಕರನ್ನು ಖರೀದಿ ಮಾಡಿದ್ದಾರೆ. ದೇವದುರ್ಗದಲ್ಲಿ ಯಡಿಯೂರಪ್ಪ ಆಡಿಯೋ ರೆಕಾರ್ಡ್ ಆಗಿದ್ದ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದರು. ಆದ್ರೆ ನಾವು ಆಪರೇಷನ್ ಕಮಲ ಮಾಡಿಲ್ಲ ಎಂದು ಸುಳ್ಳು ಹೇಳ್ತಾರೆ. ಹಾಗಾದ್ರೆ, ಅನರ್ಹರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಟ್ಟಿದ್ಯಾಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Published On - 2:01 pm, Fri, 1 November 19

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ