AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಸಭೆಯಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ: ಮುಂದೇನಾಯ್ತು?

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್​ ರೆಪ್​ ಬಗ್ಗೆ ಮಾತನಾಡುವಾಗ ವಿಧಾನಸಭೆಯಲ್ಲಿ ವಿಶೇಷ ಪ್ರಸಂಗವೊಂದು ನಡೆಯಿತು. ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ಸಿದ್ದರಾಮಯ್ಯ ತಮ್ಮ ಪಂಚೆ ಬೀಳಿಸಿಕೊಂಡರು.

ವಿಧಾನ ಸಭೆಯಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ: ಮುಂದೇನಾಯ್ತು?
ಸಿದ್ದರಾಮಯ್ಯ
TV9 Web
| Updated By: ಸಾಧು ಶ್ರೀನಾಥ್​|

Updated on:Sep 22, 2021 | 1:43 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್​ ರೆಪ್​ ಬಗ್ಗೆ ಮಾತನಾಡುವಾಗ ವಿಧಾನಸಭೆಯಲ್ಲಿ ವಿಶೇಷ ಪ್ರಸಂಗವೊಂದು ನಡೆಯಿತು. ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ಸಿದ್ದರಾಮಯ್ಯ ತಮ್ಮ ಪಂಚೆ ಬೀಳಿಸಿಕೊಂಡರು.

ತಕ್ಷಣ ಅವರ ನೆರವಿಗೆ ಬಂದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಬಳಿ ಬಂದು ಪಂಚೆ ಕಳಚಿದೆ ಎಂದು ಸಿದ್ದರಾಮಯ್ಯ ಕಿವಿಯಲ್ಲಿ ಹೇಳಿದರು. ಆಗ ಸ್ವಲ್ಪ ಪಂಚೆ ಕಳಚಿಕೊಂಡಿದೆ ಸರಿಮಾಡಿಕೊಂಡು ಮಾತನಾಡುತ್ತೇನೆ. ಪಂಚೆ ಕಳಚಿಕೊಂಡಿದೆ ಈಶ್ವರಪ್ಪ ಏಕೋ ದಪ್ಪವಾಗಿದ್ದೇನೆ ಎಂದು ತಮ್ಮ ಆರೋಗ್ಯದ ಬಗ್ಗೆ ಹೇಳಿದರು.

ಮೈಸೂರು ರೇಪ್ ಪ್ರಕರಣ ಚರ್ಚೆ ವೇಳೆ ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಂಚೆ ಬಿಚ್ಚಿಕೊಂಡಿತು. ಸಿದ್ದರಾಮಯ್ಯ ಪಂಚೆ ಜಾರಿದ್ದನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ತಕ್ಷಣ ಸಿದ್ದರಾಮಯ್ಯ ಹತ್ತಿರ ಬಂದು ಕಿವಿಯಲ್ಲಿ ಹೇಳಿದರು. ನಂತರ ಸಿದ್ದರಾಮಯ್ಯ ಕುಳಿತುಕೊಂಡು ಪಂಚೆ ಕಟ್ಟಿಕೊಂಡರು.

ಆ ವೇಳೆ ಸಿದ್ದರಾಮಯ್ಯ ಅವರು ನಗುನಗುತಾ ಪಂಚೆ ಬಿಚ್ಚಿ ಹೋಗಿದೆ, ಸರಿ ಮಾಡಿಕೊಳ್ಳುತ್ತೇನೆ, ಈಶ್ವರಪ್ಪಾ ಪಂಚೆ ಬಿಚ್ಚಿ ಹೋಗಿದೆ ಎಂದರು. ಇದನ್ನೆಲ್ಲಾ ಗಮನಿಸಿದ ರಮೇಶ್ ಕುಮಾರ್ ನಮ್ಮ ಅಧ್ಯಕ್ಷರು ಪಂಚೆ ಬಿಚ್ಚಿದ್ದನ್ನು ಕಿವಿಯಲ್ಲಿ ಬಂದು ಹೇಳಿದರೆ, ಇವರು ಅದನ್ನು ಊರಿಗೆಲ್ಲಾ ಹೇಳಿದರು ಎಂದರು.

ಮೊದಲು ಪಂಚೆ ಕಟ್ಟಿದರೆ ಬಿಚ್ಚಿಕೊಳ್ಳುತ್ತಿರಲಿಲ್ಲ,‌ ಈಗ ಕೊರೋನಾ‌ ಬಂದ ಬಳಿಕ ಬೊಜ್ಜು ಜಾಸ್ತಿ ಬಂದಿದೆ, ಪಂಚೆ ಬಿಚ್ಚಿಕೊಳ್ಳುತ್ತದೆ, ಅದಕ್ಕೆ ಯಾವಾಗಲೂ ಜುಬ್ಬಾ ಹಾಕಿಕೊಳ್ಳೋದು ಎಂದರು ಸಿದ್ದರಾಮಯ್ಯ. ಬಹಳಷ್ಟು ಮಂದಿ ನಿಲುವಂಗಿ ಹಾಕಿಕೊಳ್ಳುತ್ತಾರೆ. ಇದರಿಂದ ಪಂಚೆನೂ ಬೇಕಿಲ್ಲ, ಪ್ಯಾಂಟ್ ಕೂಡ ಬೇಕಿಲ್ಲ ಎಂದು ಪಂಚೆಯ ಬಗ್ಗೆ ಸಿದ್ದರಾಮಯ್ಯ ತಮ್ಮ ವಿಶೇಷ ವಿಶ್ಲೇಷಣೆ ನೀಡಿ, ಪ್ರಸಂಗ ಕೊನೆಗಾಣಿಸಿದರು.

ಸದನದಲ್ಲಿ ಸಿದ್ದರಾಮಯ್ಯ ಪಂಚೆ ಪುರಾಣ.. ಪಂಚೆ ಬಿಚ್ಚೋಗಿದೆ ನೋಡಿ ಸರ್ ಎಂದ ಡಿಕೆಶಿ | Siddaramaiah in Session |

(Opposition leader siddaramaiah dhoti loses in assembly session)

Published On - 1:34 pm, Wed, 22 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ