AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಸಭೆಯಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ: ಮುಂದೇನಾಯ್ತು?

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್​ ರೆಪ್​ ಬಗ್ಗೆ ಮಾತನಾಡುವಾಗ ವಿಧಾನಸಭೆಯಲ್ಲಿ ವಿಶೇಷ ಪ್ರಸಂಗವೊಂದು ನಡೆಯಿತು. ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ಸಿದ್ದರಾಮಯ್ಯ ತಮ್ಮ ಪಂಚೆ ಬೀಳಿಸಿಕೊಂಡರು.

ವಿಧಾನ ಸಭೆಯಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ: ಮುಂದೇನಾಯ್ತು?
ಸಿದ್ದರಾಮಯ್ಯ
TV9 Web
| Edited By: |

Updated on:Sep 22, 2021 | 1:43 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್​ ರೆಪ್​ ಬಗ್ಗೆ ಮಾತನಾಡುವಾಗ ವಿಧಾನಸಭೆಯಲ್ಲಿ ವಿಶೇಷ ಪ್ರಸಂಗವೊಂದು ನಡೆಯಿತು. ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ಸಿದ್ದರಾಮಯ್ಯ ತಮ್ಮ ಪಂಚೆ ಬೀಳಿಸಿಕೊಂಡರು.

ತಕ್ಷಣ ಅವರ ನೆರವಿಗೆ ಬಂದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಬಳಿ ಬಂದು ಪಂಚೆ ಕಳಚಿದೆ ಎಂದು ಸಿದ್ದರಾಮಯ್ಯ ಕಿವಿಯಲ್ಲಿ ಹೇಳಿದರು. ಆಗ ಸ್ವಲ್ಪ ಪಂಚೆ ಕಳಚಿಕೊಂಡಿದೆ ಸರಿಮಾಡಿಕೊಂಡು ಮಾತನಾಡುತ್ತೇನೆ. ಪಂಚೆ ಕಳಚಿಕೊಂಡಿದೆ ಈಶ್ವರಪ್ಪ ಏಕೋ ದಪ್ಪವಾಗಿದ್ದೇನೆ ಎಂದು ತಮ್ಮ ಆರೋಗ್ಯದ ಬಗ್ಗೆ ಹೇಳಿದರು.

ಮೈಸೂರು ರೇಪ್ ಪ್ರಕರಣ ಚರ್ಚೆ ವೇಳೆ ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಂಚೆ ಬಿಚ್ಚಿಕೊಂಡಿತು. ಸಿದ್ದರಾಮಯ್ಯ ಪಂಚೆ ಜಾರಿದ್ದನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ತಕ್ಷಣ ಸಿದ್ದರಾಮಯ್ಯ ಹತ್ತಿರ ಬಂದು ಕಿವಿಯಲ್ಲಿ ಹೇಳಿದರು. ನಂತರ ಸಿದ್ದರಾಮಯ್ಯ ಕುಳಿತುಕೊಂಡು ಪಂಚೆ ಕಟ್ಟಿಕೊಂಡರು.

ಆ ವೇಳೆ ಸಿದ್ದರಾಮಯ್ಯ ಅವರು ನಗುನಗುತಾ ಪಂಚೆ ಬಿಚ್ಚಿ ಹೋಗಿದೆ, ಸರಿ ಮಾಡಿಕೊಳ್ಳುತ್ತೇನೆ, ಈಶ್ವರಪ್ಪಾ ಪಂಚೆ ಬಿಚ್ಚಿ ಹೋಗಿದೆ ಎಂದರು. ಇದನ್ನೆಲ್ಲಾ ಗಮನಿಸಿದ ರಮೇಶ್ ಕುಮಾರ್ ನಮ್ಮ ಅಧ್ಯಕ್ಷರು ಪಂಚೆ ಬಿಚ್ಚಿದ್ದನ್ನು ಕಿವಿಯಲ್ಲಿ ಬಂದು ಹೇಳಿದರೆ, ಇವರು ಅದನ್ನು ಊರಿಗೆಲ್ಲಾ ಹೇಳಿದರು ಎಂದರು.

ಮೊದಲು ಪಂಚೆ ಕಟ್ಟಿದರೆ ಬಿಚ್ಚಿಕೊಳ್ಳುತ್ತಿರಲಿಲ್ಲ,‌ ಈಗ ಕೊರೋನಾ‌ ಬಂದ ಬಳಿಕ ಬೊಜ್ಜು ಜಾಸ್ತಿ ಬಂದಿದೆ, ಪಂಚೆ ಬಿಚ್ಚಿಕೊಳ್ಳುತ್ತದೆ, ಅದಕ್ಕೆ ಯಾವಾಗಲೂ ಜುಬ್ಬಾ ಹಾಕಿಕೊಳ್ಳೋದು ಎಂದರು ಸಿದ್ದರಾಮಯ್ಯ. ಬಹಳಷ್ಟು ಮಂದಿ ನಿಲುವಂಗಿ ಹಾಕಿಕೊಳ್ಳುತ್ತಾರೆ. ಇದರಿಂದ ಪಂಚೆನೂ ಬೇಕಿಲ್ಲ, ಪ್ಯಾಂಟ್ ಕೂಡ ಬೇಕಿಲ್ಲ ಎಂದು ಪಂಚೆಯ ಬಗ್ಗೆ ಸಿದ್ದರಾಮಯ್ಯ ತಮ್ಮ ವಿಶೇಷ ವಿಶ್ಲೇಷಣೆ ನೀಡಿ, ಪ್ರಸಂಗ ಕೊನೆಗಾಣಿಸಿದರು.

ಸದನದಲ್ಲಿ ಸಿದ್ದರಾಮಯ್ಯ ಪಂಚೆ ಪುರಾಣ.. ಪಂಚೆ ಬಿಚ್ಚೋಗಿದೆ ನೋಡಿ ಸರ್ ಎಂದ ಡಿಕೆಶಿ | Siddaramaiah in Session |

(Opposition leader siddaramaiah dhoti loses in assembly session)

Published On - 1:34 pm, Wed, 22 September 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?