AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಸಭೆಯಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ: ಮುಂದೇನಾಯ್ತು?

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್​ ರೆಪ್​ ಬಗ್ಗೆ ಮಾತನಾಡುವಾಗ ವಿಧಾನಸಭೆಯಲ್ಲಿ ವಿಶೇಷ ಪ್ರಸಂಗವೊಂದು ನಡೆಯಿತು. ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ಸಿದ್ದರಾಮಯ್ಯ ತಮ್ಮ ಪಂಚೆ ಬೀಳಿಸಿಕೊಂಡರು.

ವಿಧಾನ ಸಭೆಯಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ: ಮುಂದೇನಾಯ್ತು?
ಸಿದ್ದರಾಮಯ್ಯ
TV9 Web
| Edited By: |

Updated on:Sep 22, 2021 | 1:43 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್​ ರೆಪ್​ ಬಗ್ಗೆ ಮಾತನಾಡುವಾಗ ವಿಧಾನಸಭೆಯಲ್ಲಿ ವಿಶೇಷ ಪ್ರಸಂಗವೊಂದು ನಡೆಯಿತು. ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ಸಿದ್ದರಾಮಯ್ಯ ತಮ್ಮ ಪಂಚೆ ಬೀಳಿಸಿಕೊಂಡರು.

ತಕ್ಷಣ ಅವರ ನೆರವಿಗೆ ಬಂದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಬಳಿ ಬಂದು ಪಂಚೆ ಕಳಚಿದೆ ಎಂದು ಸಿದ್ದರಾಮಯ್ಯ ಕಿವಿಯಲ್ಲಿ ಹೇಳಿದರು. ಆಗ ಸ್ವಲ್ಪ ಪಂಚೆ ಕಳಚಿಕೊಂಡಿದೆ ಸರಿಮಾಡಿಕೊಂಡು ಮಾತನಾಡುತ್ತೇನೆ. ಪಂಚೆ ಕಳಚಿಕೊಂಡಿದೆ ಈಶ್ವರಪ್ಪ ಏಕೋ ದಪ್ಪವಾಗಿದ್ದೇನೆ ಎಂದು ತಮ್ಮ ಆರೋಗ್ಯದ ಬಗ್ಗೆ ಹೇಳಿದರು.

ಮೈಸೂರು ರೇಪ್ ಪ್ರಕರಣ ಚರ್ಚೆ ವೇಳೆ ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಂಚೆ ಬಿಚ್ಚಿಕೊಂಡಿತು. ಸಿದ್ದರಾಮಯ್ಯ ಪಂಚೆ ಜಾರಿದ್ದನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ತಕ್ಷಣ ಸಿದ್ದರಾಮಯ್ಯ ಹತ್ತಿರ ಬಂದು ಕಿವಿಯಲ್ಲಿ ಹೇಳಿದರು. ನಂತರ ಸಿದ್ದರಾಮಯ್ಯ ಕುಳಿತುಕೊಂಡು ಪಂಚೆ ಕಟ್ಟಿಕೊಂಡರು.

ಆ ವೇಳೆ ಸಿದ್ದರಾಮಯ್ಯ ಅವರು ನಗುನಗುತಾ ಪಂಚೆ ಬಿಚ್ಚಿ ಹೋಗಿದೆ, ಸರಿ ಮಾಡಿಕೊಳ್ಳುತ್ತೇನೆ, ಈಶ್ವರಪ್ಪಾ ಪಂಚೆ ಬಿಚ್ಚಿ ಹೋಗಿದೆ ಎಂದರು. ಇದನ್ನೆಲ್ಲಾ ಗಮನಿಸಿದ ರಮೇಶ್ ಕುಮಾರ್ ನಮ್ಮ ಅಧ್ಯಕ್ಷರು ಪಂಚೆ ಬಿಚ್ಚಿದ್ದನ್ನು ಕಿವಿಯಲ್ಲಿ ಬಂದು ಹೇಳಿದರೆ, ಇವರು ಅದನ್ನು ಊರಿಗೆಲ್ಲಾ ಹೇಳಿದರು ಎಂದರು.

ಮೊದಲು ಪಂಚೆ ಕಟ್ಟಿದರೆ ಬಿಚ್ಚಿಕೊಳ್ಳುತ್ತಿರಲಿಲ್ಲ,‌ ಈಗ ಕೊರೋನಾ‌ ಬಂದ ಬಳಿಕ ಬೊಜ್ಜು ಜಾಸ್ತಿ ಬಂದಿದೆ, ಪಂಚೆ ಬಿಚ್ಚಿಕೊಳ್ಳುತ್ತದೆ, ಅದಕ್ಕೆ ಯಾವಾಗಲೂ ಜುಬ್ಬಾ ಹಾಕಿಕೊಳ್ಳೋದು ಎಂದರು ಸಿದ್ದರಾಮಯ್ಯ. ಬಹಳಷ್ಟು ಮಂದಿ ನಿಲುವಂಗಿ ಹಾಕಿಕೊಳ್ಳುತ್ತಾರೆ. ಇದರಿಂದ ಪಂಚೆನೂ ಬೇಕಿಲ್ಲ, ಪ್ಯಾಂಟ್ ಕೂಡ ಬೇಕಿಲ್ಲ ಎಂದು ಪಂಚೆಯ ಬಗ್ಗೆ ಸಿದ್ದರಾಮಯ್ಯ ತಮ್ಮ ವಿಶೇಷ ವಿಶ್ಲೇಷಣೆ ನೀಡಿ, ಪ್ರಸಂಗ ಕೊನೆಗಾಣಿಸಿದರು.

ಸದನದಲ್ಲಿ ಸಿದ್ದರಾಮಯ್ಯ ಪಂಚೆ ಪುರಾಣ.. ಪಂಚೆ ಬಿಚ್ಚೋಗಿದೆ ನೋಡಿ ಸರ್ ಎಂದ ಡಿಕೆಶಿ | Siddaramaiah in Session |

(Opposition leader siddaramaiah dhoti loses in assembly session)

Published On - 1:34 pm, Wed, 22 September 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ