AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ

Kannada: ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ
ಸಿದ್ದರಾಮಯ್ಯ
KUSHAL V
|

Updated on: Feb 13, 2021 | 7:32 PM

Share

ಮಂಡ್ಯ: ಕರ್ನಾಟಕದಲ್ಲಿ ಕನ್ನಡ ಕಲಿಯದಿದ್ದರೆ ಬದುಕಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಸೃಷ್ಟಿಸಬೇಕಾಗಿದೆ. ರಾಜ್ಯದಲ್ಲಿ ಕನ್ನಡ ಕಲಿಯುವ ಅನಿವಾರ್ಯತೆ ಸೃಷ್ಟಿಸಬೇಕಾಗಿದೆ. ಈ ರೀತಿ ಮಾಡುವುದು ನಮ್ಮ ಕರ್ತವ್ಯವಾಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು. ಇನ್ನೊಬ್ಬರಿಗೆ ಕೆಡುಕನ್ನು ಬಯಸದಿರುವುದೇ ಮನುಷ್ಯತ್ವ. ಹಾಗಾಗಿಯೇ ಬಸವಣ್ಣ ದಯೆಯೇ ಧರ್ಮದ ಮೂಲ ಎಂದರು. ಕನ್ನಡ ಭಾಷೆ ಬಹಳ ಶ್ರೀಮಂತ, ಪ್ರಾಚೀನ ಭಾಷೆಯಾಗಿದ್ದು. ಇದನ್ನು ಉಳಿಸಿ ಬೆಳೆಸಬೇಕಿರುವುದು ನಮ್ಮ ಕರ್ತವ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ಕರ್ನಾಟಕ ಸಂಘದ ಕಟ್ಟಡ ನಿರ್ಮಾಣಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ 50 ಲಕ್ಷ ಹಣ ಕೇಳಿದ್ದರು. 50 ಲಕ್ಷ ಹಣ ಕೇಳಿದ್ದರೂ ನಾನು 25 ಲಕ್ಷ ಹಣ ನೀಡಿದ್ದೆ. ಏನಾದರೂ 1 ಕೋಟಿ ಕೇಳಿದ್ರೆ 50 ಲಕ್ಷ ಹಣ ಕೊಡುತ್ತಿದ್ದೆ. ಕನ್ನಡಿಗರ ಹಣ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕೊಡುತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

‘ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ’ ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಬಳಿಕ ಶಾಸಕರು ಸಿಎಂ ಸ್ಥಾನದ ಬಗ್ಗೆ ನಿರ್ಧಾರ ಮಾಡ್ತಾರೆ. ಬಳಿಕ ಹೈಕಮಾಂಡ್ ಅಂತಿಮವಾಗಿ ಮುದ್ರೆ ಒತ್ತುತ್ತೆ ಎಂದು ತಾವು ಸಿಎಂ ಆಗುವ ವಿಚಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಡುವೆ, ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ. ಆತನ ಬಗ್ಗೆ ಪದೇಪದೆ ಉತ್ತರ ನೀಡಲಾಗಲ್ಲ ಎಂದು ಸಹ ಹೇಳಿದರು. ಜೊತೆಗೆ, ರಾಜ್ಯ ಬಜೆಟ್ ಬಗ್ಗೆ ನಿರೀಕ್ಷೆಯೇ ಇಲ್ಲವೆಂದ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಖಜಾನೆ ಖಾಲಿಯಾಗಿದೆ. 35 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಸಾಲ ಮಾಡಿದೆ. ಸಾಲ, ಬಡ್ಡಿ, ಚಕ್ರ ಬಡ್ಡಿ ಮನ್ನಾ ಮಾಡೋದೇ ಆಗುತ್ತೆ. ಇನ್ನೇನು ಉತ್ತಮ ಯೋಜನೆ ನೀಡಲು ಸಾಧ್ಯವಾಗುತ್ತೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಇದನ್ನೂ ಓದಿ: ಮಂಡ್ಯಕ್ಕೆ ಹೋಗುವಾಗ Tea ಬ್ರೇಕ್​.. ಮದ್ದೂರು ವಡೆ ಜೊತೆ ಚಹಾ ಸವಿದ ಸಿದ್ದರಾಮಯ್ಯ!

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!