AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ

Kannada: ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ
ಸಿದ್ದರಾಮಯ್ಯ
KUSHAL V
|

Updated on: Feb 13, 2021 | 7:32 PM

Share

ಮಂಡ್ಯ: ಕರ್ನಾಟಕದಲ್ಲಿ ಕನ್ನಡ ಕಲಿಯದಿದ್ದರೆ ಬದುಕಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಸೃಷ್ಟಿಸಬೇಕಾಗಿದೆ. ರಾಜ್ಯದಲ್ಲಿ ಕನ್ನಡ ಕಲಿಯುವ ಅನಿವಾರ್ಯತೆ ಸೃಷ್ಟಿಸಬೇಕಾಗಿದೆ. ಈ ರೀತಿ ಮಾಡುವುದು ನಮ್ಮ ಕರ್ತವ್ಯವಾಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು. ಇನ್ನೊಬ್ಬರಿಗೆ ಕೆಡುಕನ್ನು ಬಯಸದಿರುವುದೇ ಮನುಷ್ಯತ್ವ. ಹಾಗಾಗಿಯೇ ಬಸವಣ್ಣ ದಯೆಯೇ ಧರ್ಮದ ಮೂಲ ಎಂದರು. ಕನ್ನಡ ಭಾಷೆ ಬಹಳ ಶ್ರೀಮಂತ, ಪ್ರಾಚೀನ ಭಾಷೆಯಾಗಿದ್ದು. ಇದನ್ನು ಉಳಿಸಿ ಬೆಳೆಸಬೇಕಿರುವುದು ನಮ್ಮ ಕರ್ತವ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ಕರ್ನಾಟಕ ಸಂಘದ ಕಟ್ಟಡ ನಿರ್ಮಾಣಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ 50 ಲಕ್ಷ ಹಣ ಕೇಳಿದ್ದರು. 50 ಲಕ್ಷ ಹಣ ಕೇಳಿದ್ದರೂ ನಾನು 25 ಲಕ್ಷ ಹಣ ನೀಡಿದ್ದೆ. ಏನಾದರೂ 1 ಕೋಟಿ ಕೇಳಿದ್ರೆ 50 ಲಕ್ಷ ಹಣ ಕೊಡುತ್ತಿದ್ದೆ. ಕನ್ನಡಿಗರ ಹಣ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕೊಡುತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

‘ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ’ ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಬಳಿಕ ಶಾಸಕರು ಸಿಎಂ ಸ್ಥಾನದ ಬಗ್ಗೆ ನಿರ್ಧಾರ ಮಾಡ್ತಾರೆ. ಬಳಿಕ ಹೈಕಮಾಂಡ್ ಅಂತಿಮವಾಗಿ ಮುದ್ರೆ ಒತ್ತುತ್ತೆ ಎಂದು ತಾವು ಸಿಎಂ ಆಗುವ ವಿಚಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಡುವೆ, ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ. ಆತನ ಬಗ್ಗೆ ಪದೇಪದೆ ಉತ್ತರ ನೀಡಲಾಗಲ್ಲ ಎಂದು ಸಹ ಹೇಳಿದರು. ಜೊತೆಗೆ, ರಾಜ್ಯ ಬಜೆಟ್ ಬಗ್ಗೆ ನಿರೀಕ್ಷೆಯೇ ಇಲ್ಲವೆಂದ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಖಜಾನೆ ಖಾಲಿಯಾಗಿದೆ. 35 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಸಾಲ ಮಾಡಿದೆ. ಸಾಲ, ಬಡ್ಡಿ, ಚಕ್ರ ಬಡ್ಡಿ ಮನ್ನಾ ಮಾಡೋದೇ ಆಗುತ್ತೆ. ಇನ್ನೇನು ಉತ್ತಮ ಯೋಜನೆ ನೀಡಲು ಸಾಧ್ಯವಾಗುತ್ತೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಇದನ್ನೂ ಓದಿ: ಮಂಡ್ಯಕ್ಕೆ ಹೋಗುವಾಗ Tea ಬ್ರೇಕ್​.. ಮದ್ದೂರು ವಡೆ ಜೊತೆ ಚಹಾ ಸವಿದ ಸಿದ್ದರಾಮಯ್ಯ!

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!