AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ

Kannada: ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
KUSHAL V
|

Updated on: Feb 13, 2021 | 7:32 PM

ಮಂಡ್ಯ: ಕರ್ನಾಟಕದಲ್ಲಿ ಕನ್ನಡ ಕಲಿಯದಿದ್ದರೆ ಬದುಕಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಸೃಷ್ಟಿಸಬೇಕಾಗಿದೆ. ರಾಜ್ಯದಲ್ಲಿ ಕನ್ನಡ ಕಲಿಯುವ ಅನಿವಾರ್ಯತೆ ಸೃಷ್ಟಿಸಬೇಕಾಗಿದೆ. ಈ ರೀತಿ ಮಾಡುವುದು ನಮ್ಮ ಕರ್ತವ್ಯವಾಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು. ಇನ್ನೊಬ್ಬರಿಗೆ ಕೆಡುಕನ್ನು ಬಯಸದಿರುವುದೇ ಮನುಷ್ಯತ್ವ. ಹಾಗಾಗಿಯೇ ಬಸವಣ್ಣ ದಯೆಯೇ ಧರ್ಮದ ಮೂಲ ಎಂದರು. ಕನ್ನಡ ಭಾಷೆ ಬಹಳ ಶ್ರೀಮಂತ, ಪ್ರಾಚೀನ ಭಾಷೆಯಾಗಿದ್ದು. ಇದನ್ನು ಉಳಿಸಿ ಬೆಳೆಸಬೇಕಿರುವುದು ನಮ್ಮ ಕರ್ತವ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ಕರ್ನಾಟಕ ಸಂಘದ ಕಟ್ಟಡ ನಿರ್ಮಾಣಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ 50 ಲಕ್ಷ ಹಣ ಕೇಳಿದ್ದರು. 50 ಲಕ್ಷ ಹಣ ಕೇಳಿದ್ದರೂ ನಾನು 25 ಲಕ್ಷ ಹಣ ನೀಡಿದ್ದೆ. ಏನಾದರೂ 1 ಕೋಟಿ ಕೇಳಿದ್ರೆ 50 ಲಕ್ಷ ಹಣ ಕೊಡುತ್ತಿದ್ದೆ. ಕನ್ನಡಿಗರ ಹಣ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕೊಡುತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

‘ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ’ ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಬಳಿಕ ಶಾಸಕರು ಸಿಎಂ ಸ್ಥಾನದ ಬಗ್ಗೆ ನಿರ್ಧಾರ ಮಾಡ್ತಾರೆ. ಬಳಿಕ ಹೈಕಮಾಂಡ್ ಅಂತಿಮವಾಗಿ ಮುದ್ರೆ ಒತ್ತುತ್ತೆ ಎಂದು ತಾವು ಸಿಎಂ ಆಗುವ ವಿಚಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಡುವೆ, ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ. ಆತನ ಬಗ್ಗೆ ಪದೇಪದೆ ಉತ್ತರ ನೀಡಲಾಗಲ್ಲ ಎಂದು ಸಹ ಹೇಳಿದರು. ಜೊತೆಗೆ, ರಾಜ್ಯ ಬಜೆಟ್ ಬಗ್ಗೆ ನಿರೀಕ್ಷೆಯೇ ಇಲ್ಲವೆಂದ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಖಜಾನೆ ಖಾಲಿಯಾಗಿದೆ. 35 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಸಾಲ ಮಾಡಿದೆ. ಸಾಲ, ಬಡ್ಡಿ, ಚಕ್ರ ಬಡ್ಡಿ ಮನ್ನಾ ಮಾಡೋದೇ ಆಗುತ್ತೆ. ಇನ್ನೇನು ಉತ್ತಮ ಯೋಜನೆ ನೀಡಲು ಸಾಧ್ಯವಾಗುತ್ತೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಇದನ್ನೂ ಓದಿ: ಮಂಡ್ಯಕ್ಕೆ ಹೋಗುವಾಗ Tea ಬ್ರೇಕ್​.. ಮದ್ದೂರು ವಡೆ ಜೊತೆ ಚಹಾ ಸವಿದ ಸಿದ್ದರಾಮಯ್ಯ!

ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ