AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘​ಕನ್ನಡದ ಅನಿವಾರ್ಯತೆಯನ್ನು ನಾವು ಸೃಷ್ಟಿ ಮಾಡಬೇಕು.. ಆಗ ಕನ್ನಡೇತರರು ಕೂಡ ನಮ್ಮ ಭಾಷೆ ಕಲೀತಾರೆ’

ನಮಗೆ ಭಾಷಾ ಅಭಿಮಾನದ ಕೊರತೆ ಇದೆ. ಕನ್ನಡದ ಅನಿವಾರ್ಯತೆಯನ್ನು ನಾವು ಸೃಷ್ಟಿ ಮಾಡಬೇಕು. ಆಗ ಕನ್ನಡೇತರರು ಕೂಡ ಕನ್ನಡವನ್ನ ಕಲಿತು ಮಾತನಾಡ್ತಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

‘​ಕನ್ನಡದ ಅನಿವಾರ್ಯತೆಯನ್ನು ನಾವು ಸೃಷ್ಟಿ ಮಾಡಬೇಕು.. ಆಗ ಕನ್ನಡೇತರರು ಕೂಡ ನಮ್ಮ ಭಾಷೆ ಕಲೀತಾರೆ’
ಸಿದ್ದರಾಮಯ್ಯ
KUSHAL V
|

Updated on: Jan 30, 2021 | 10:50 PM

Share

ಬೆಂಗಳೂರು: ನಾನು ರಾಜಕಾರಣಕ್ಕೆ ಬಂದಾಗ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಲು ನನ್ನನ್ನ ಕರೆದು ಅಂದಿನ ಸಿಎಂ ರಾಮಕೃಷ್ಣ ಹೆಗಡೆ ಹೇಳಿದ್ದರು. ಅಲ್ಲಿಯವರೆಗೆ ಕಾವಲು ಸಮಿತಿ ಇರಲಿಲ್ಲ, ಅದು ಪ್ರಥಮ ಸಮಿತಿ. ಈ ವೇಳೆ ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ, ನನಗೆ ಬಾಟ್ನಿ, ಜುವಾಲಜಿ, ಮತ್ತು ಲಾ ಓದಿದ್ದೀನಿ ಎಂದು ಹೇಳಿದ್ದೆ. ಆದರೆ, ಇಲ್ಲ ನಿನಗೆ ಕನ್ನಡದ ಬಗ್ಗೆ ಸಾಕಷ್ಟು ಕಳಕಳಿ ಇದೆ ಅಂದಿದ್ದರು. ನಾನು ಮರು ಮಾತನಾಡದೇ ಒಪ್ಪಿಕೊಂಡಿದ್ದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದ ಕಾಸಿಯಾ ಸಭಾಂಗಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆಯಲ್ಲಿ ಸಿದ್ದರಾಮಯ್ಯ ಮಾತನಾಡಿದರು. ನಿಸಾರ್ ಅಹಮದ್, ಪಾಟೀಲ್ ಪುಟ್ಟಪ್ಪರಂಥ ಘಟಾನುಘಟಿಗಳ ಜೊತೆ ಒಂದು ವರ್ಷ ಇದ್ದೆ. ಆಮೇಲೆ ಮಂತ್ರಿ ಮಾಡಿದ್ರು ಬಿಟ್ ಬಿಟ್ಟೆ ಎಂದು ಹೇಳಿದರು.

ಇತಿಹಾಸದಲ್ಲಿ ನಮ್ಮ ಭಾಷೆಯನ್ನ ಕಾಯಲು ಸಮಿತಿ ಮಾಡಿದ್ದು ನಮ್ಮಲ್ಲೇ ಮೊದಲು. ಭಾಷೆ ಮೇಲೆ ಅಭಿಮಾನ ಇರಬೇಕು, ಆದ್ರೆ ನಮ್ಮಲ್ಲಿ ಔದಾರ್ಯ ಹೆಚ್ಚು. ನಮಗೆ ಭಾಷಾ ಅಭಿಮಾನದ ಕೊರತೆ ಇದೆ. ಕನ್ನಡದ ಅನಿವಾರ್ಯತೆಯನ್ನು ನಾವು ಸೃಷ್ಟಿ ಮಾಡಬೇಕು. ಆಗ ಕನ್ನಡೇತರರು ಕೂಡ ಕನ್ನಡವನ್ನ ಕಲಿತು ಮಾತನಾಡ್ತಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈಗ ನಕಲಿ ದೇಶಭಕ್ತರೇ ಹೆಚ್ಚಾಗಿದ್ದಾರೆ -ಸಿದ್ದರಾಮಯ್ಯ ಡೈಲಾಗ್​ಗೆ ‘ಹೌದು ಹುಲಿಯಾ’ ಎಂದ ಅಭಿಮಾನಿ!

Follow Us
KUSHAL V
KUSHAL V
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್