AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 1 ಲಕ್ಷದಿಂದ 5 ಲಕ್ಷ ರೂಪಾಯಿಗೆ ಏರಿಸಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಸಾಧ್ಯವಿದೆ. ಕೇಂದ್ರಕ್ಕೆ ಮನವರಿಕೆ ಮಾಡಿ ಈ ಅವಕಾಶ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಅವರು ಆಗ್ರಹಿಸಿದ್ದಾರೆ.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 1 ಲಕ್ಷದಿಂದ 5 ಲಕ್ಷ ರೂಪಾಯಿಗೆ ಏರಿಸಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ
Follow us
TV9 Web
| Updated By: Skanda

Updated on: Jun 15, 2021 | 8:25 AM

ಬೆಂಗಳೂರು: ಕೊರೊನಾದಿಂದ ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ನೀಡುವಂತೆ ಟ್ವಿಟರ್​ನಲ್ಲಿ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೊರೊನಾ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ, ಆದ್ದರಿಂದ ವಿಪತ್ತು ಪರಿಹಾರ‌ದ ನಿಯಮಗಳಡಿ ಪರಿಹಾರ ನೀಡಿ ಎಂದು ಅವರು ಆಗ್ರಹಿಸಿದ್ದಾರೆ. ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಸಾಧ್ಯವಿದೆ. ಕೇಂದ್ರಕ್ಕೆ ಮನವರಿಕೆ ಮಾಡಿ ಈ ಅವಕಾಶ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಅವರು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಜೊತೆಗೆ, ಇದು BPL ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. BPL ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟ ಪಡ್ತಾ ಇದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದಕ್ಕಾಗಿ ಸುಮಾರು 250-300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲ ಬಾರಿಗೆ ಇಂತಹ ಹಣಕಾಸು ನೆರವನ್ನು ನಾವು ನೀಡುತ್ತಿದ್ದೇವೆ. ಹಣಕಾಸಿನ‌ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಈಗ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಕೊಡ್ತಾ ಇದ್ದೇವೆ. ಅಂದ್ರೆ ಇದರ ಅರ್ಥ ಹಣಕಾಸಿನ ಪರಿಸ್ಥಿತಿ ಇರೋದರಲ್ಲಿಯೇ ಉತ್ತಮವಾಗಿದೆ ಎಂಬುದು ತಿಳಿದುಬರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಆರ್ಥಿಕ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಮಂಗಳವಾರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್ ಅಂತಿಮ ದರ್ಶನಕ್ಕೆ ಅವಕಾಶ

Sanchari Vijay: ಸಂಚಾರಿ ವಿಜಯ್​ ದೇಹದಿಂದ ಲಿವರ್, 2 ಕಿಡ್ನಿ, 2 ಕಣ್ಣು, ಹೃದಯದ ವಾಲ್ವ್ ಪಡೆಯುತ್ತಿದ್ದೇವೆ; ವೈದ್ಯರ ಮಾಹಿತಿ

(Opposition leader Siddaramaiah urges increase the relief fund to Covid 19 death family)

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ