AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಕೇಳುವ ಪ್ರಶ್ನೆಗೆ ವಿಪಕ್ಷದವರು ಉತ್ತರ ಕೊಡಲಿ: ಡಿಕೆ ಶಿವಕುಮಾರ್ ಆಗ್ರಹ

ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಾಗುವ ಮೊದಲೇ ಪ್ರಮುಖ 5 ಸ್ಥಳಗಳಲ್ಲಿ ಬಹಿರಂಗ ಸಭೆ ನಡೆಸಲು ಕಾಂಗ್ರೆಸ್​ ನಿರ್ಧರಿಸಿದೆ. ಆ ಮೂಲಕ ಉಭಯ ಪಕ್ಷಗಳಿಗೆ ಟಕ್ಕರ್​ ನೀಡಿದೆ. ಇಂದು ರಾಮನಗರದಲ್ಲಿ ಕಾಂಗ್ರೆಸ್​​​ ಜನಾಂದೋಲ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ನಾವು ಕೇಳುವ ಪ್ರಶ್ನೆಗಳಿಗೆ ವಿರೋಧ ಪಕ್ಷದವರು ಉತ್ತರ ಕೊಡಲಿ. ನನಗೆ ಬೈಯಲಿ, ನಂದೇನಾದರೂ ಇದ್ರೆ ಬಿಚ್ಚಿಡಲಿ ಎಂದು ಸವಾಲು ಹಾಕಿದ್ದಾರೆ.  

ನಾವು ಕೇಳುವ ಪ್ರಶ್ನೆಗೆ ವಿಪಕ್ಷದವರು ಉತ್ತರ ಕೊಡಲಿ: ಡಿಕೆ ಶಿವಕುಮಾರ್ ಆಗ್ರಹ
ನಾವು ಕೇಳುವ ಪ್ರಶ್ನೆಗೆ ವಿಪಕ್ಷದವರು ಉತ್ತರ ಕೊಡಲಿ: ಡಿಕೆ ಶಿವಕುಮಾರ್ ಆಗ್ರಹ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Aug 03, 2024 | 6:08 PM

Share

ರಾಮನಗರ, ಆಗಸ್ಟ್​​ 03: ನಾವು ಕೇಳುವ ಪ್ರಶ್ನೆಗಳಿಗೆ ವಿರೋಕ್ಷ ಪಕ್ಷದವರು ಉತ್ತರ ಕೊಡಲಿ. ನನಗೆ ಬೈಯಲಿ, ನಂದೇನಾದರೂ ಇದ್ರೆ ಬಿಚ್ಚಡಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸವಾಲು ಹಾಕಿದ್ದಾರೆ. ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ ಈಗಾಗಲೇ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ (Padayatra) ಆರಂಭಿಸಿದೆ. ಇದಕ್ಕೆ ಟಕ್ಕರ್ ಕೊಡಲು ರಾಮನಗರದಲ್ಲಿ ನಡೆದ ಕಾಂಗ್ರೆಸ್​​​ ಜನಾಂದೋಲ ಕಾರ್ಯಕ್ರಮ ನಡೆದಿದೆ.

ಜನಾಂದೋಲ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಡಿಕೆ ಶಿವಕುಮಾರ್​, ಪ್ಯಾಂಟ್ ಶರ್ಟ್ ಎಲ್ಲ ಬಟ್ಟೆ ಬಿಚ್ಚಿ ನೇಣಿಗೆ ಹಾಕಲಿ, ಶಿಲುಬೆಗೇರಿಸಲಿ. ರಾಜ್ಯದ ಜನರಿಗೆ ಬಿಜೆಪಿ ಕಾಲದ ಹಗರಣಗಳು ಗೊತ್ತಾಗಬೇಕು. ಜನಾಂದೋಲನ ಕಾರ್ಯಕ್ರಮದ ಮೂಲಕ ಬಿಡಿಸಿ ಹೇಳುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಸರ್ಕಾರ ಅಲ್ಲಾಡಿಸಲು ಸಾಧ್ಯವಿಲ್ಲ, ಅದು ನಿಮ್ಮ ಭ್ರಮೆ, ತಿರುಕನ‌ ಕನಸು: ಡಿಕೆ ಶಿವಕುಮಾರ್​

ಹಗರಣ ನಡೆದಿದೆ ಎಂದು ಯಾವುದಾದರೂ ತನಿಖೆ ನಡೆದಿದ್ಯಾ? ತಪ್ಪು ಮಾಡಿದೆ ಎಂದು ಯಾವುದಾದರೂ ಆಯೋಗ ಬಂದಿದೆಯಾ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಪ್ರಶ್ನೆ

ನಿನ್ನೆ ಕುಮಾರಸ್ವಾಮಿ ಬೇಕು ಅಂತಲೇ ಪ್ರಶ್ನೆ ಹಾಕಿದೆ. ನಾನು ನಿನ್ನನ್ನ ತಿಹಾರ್ ಜೈಲಿಗೆ ಕಳುಹಿಸುತ್ತೀನಿ. ಮಿಲಿಟರಿಯವರು ಬರುತ್ತಾರೆ ಅಂದರು. ಮಿಸ್ಟರ್ ಕುಮಾರಸ್ವಾಮಿ ನಾನು ತಿಹಾರ್ ಜೈಲು, ನನ್ನ ಮೇಲೆ ಹಾಕಿದ ಕೇಸೂ ನೋಡಿದ್ದು ಆಯ್ತು. ನಿನ್ನ ನಾಯಕತ್ವಕ್ಕೆ 19 ಸೀಟು ಕೊಟ್ಟದ್ದಾರೆ. ನಾವು 136 ಸೀಟು ಜನ ಕೊಟ್ಟಿದ್ದಾರೆ. ನಿಮಗೂ‌ ಶಕ್ತಿ,‌ ಅವರಿಗೂ‌ ಶಕ್ತಿ ಇಲ್ಲ ಅಂತ‌ ತಬ್ಬಾಡಿಕೊಂಡು ಇದ್ದೀರಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೆಡಿಎಸ್ ಪಾದಯಾತ್ರೆ: ಹೆಚ್​ಡಿ ಕುಮಾರಸ್ವಾಮಿ ಮುನಿಸು ತಣಿಸಿದ್ದೇ ಪ್ರಲ್ಹಾದ್ ಜೋಶಿ!

ಪೆನ್ ಡ್ರೈವ್ ಬಿಡುವಷ್ಟು ನೀಚ ಅಲ್ಲ. ಪ್ರೀತಂಗೌಡ ನನ್ನ ಕುಟುಂಬ ಹಾಳು ಮಾಡಿದ. ನಾನು ಪಾದಯಾತ್ರೆಯಲ್ಲಿ ಭಾಗಿಯಾಗುವುದಲ್ಲ ಅಂದ್ರಿ. ನನಗೂ ಪ್ರಜ್ವಲ್, ರೇವಣ್ಣ ಕುಟುಂಬ ಬೇರೆ ಬೇರೆ ಅಂದ್ರಿ ಈಗ‌ ಎಲ್ಲಿ ಹೋಯ್ತು ಆ ಅಕ್ಕರೆ ಎಂದು ಪ್ರಶ್ನಿಸಿದ್ದು, ನಾಳೆ ಉತ್ತರ ಕೊಡುತ್ತೇನೆ ಅಂತ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾಗಿ ನಾನು‌ ಅವರ ಉತ್ತರಕ್ಕೆ ಕಾತುರದಿಂದ ಕಾಯುತ್ತಿದ್ದೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:08 pm, Sat, 3 August 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್