ಆರ್ಕೆಸ್ಟ್ರಾ ಕಲಾವಿದರ ಬದುಕು ಹರಿದ ಕೊರೊನಾ ಮಹಾಮಾರಿ

ಬೆಂಗಳೂರು:ಕೊರೊನಾ ಸೋಂಕು ದೇಶದ ಪ್ರತಿಯೊಂದು ಉದ್ಯಮದ ಮೇಲೆ ಭಾರಿ ಹೊಡೆತ ನೀಡಿದ್ದು, ಈಗ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ಕಲಾವಿದರು ಜೀವನ ನಿರ್ವಹಣೆ ಮಾಡಲಾಗದೆ ಬೀದಿಗೆ ಬಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ರಾಜ್ಯ ಸರ್ಕಾರವು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿದೆ. ಇದರಿಂದಾಗಿ ರಾಜ್ಯದಲ್ಲಿರುವ ಐದು ಲಕ್ಷಕ್ಕೂ ಹೆಚ್ಚು ಆರ್ಕೆಸ್ಟ್ರಾ ಕಲಾವಿದರು ಉದ್ಯೋಗವಿಲ್ಲದೆ ಪರಿತಪಿಸುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕಲಾವಿದರು ಈ ಹಿಂದೆ ಮನವಿ ಮಾಡಿದ್ದರು. ಆದರೆ ಮನವಿಗೆ […]

ಆರ್ಕೆಸ್ಟ್ರಾ ಕಲಾವಿದರ ಬದುಕು ಹರಿದ ಕೊರೊನಾ ಮಹಾಮಾರಿ
ಸಾಧು ಶ್ರೀನಾಥ್​

Updated on: Aug 24, 2020 | 11:31 AM

ಬೆಂಗಳೂರು:ಕೊರೊನಾ ಸೋಂಕು ದೇಶದ ಪ್ರತಿಯೊಂದು ಉದ್ಯಮದ ಮೇಲೆ ಭಾರಿ ಹೊಡೆತ ನೀಡಿದ್ದು, ಈಗ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ಕಲಾವಿದರು ಜೀವನ ನಿರ್ವಹಣೆ ಮಾಡಲಾಗದೆ ಬೀದಿಗೆ ಬಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ರಾಜ್ಯ ಸರ್ಕಾರವು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿದೆ. ಇದರಿಂದಾಗಿ ರಾಜ್ಯದಲ್ಲಿರುವ ಐದು ಲಕ್ಷಕ್ಕೂ ಹೆಚ್ಚು ಆರ್ಕೆಸ್ಟ್ರಾ ಕಲಾವಿದರು ಉದ್ಯೋಗವಿಲ್ಲದೆ ಪರಿತಪಿಸುತ್ತಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕಲಾವಿದರು ಈ ಹಿಂದೆ ಮನವಿ ಮಾಡಿದ್ದರು. ಆದರೆ ಮನವಿಗೆ ಕಿವಿಕೊಡದ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವ ಕಲಾವಿದರು, ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ಅಖಿಲ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ 2 ಸಾವಿರಕ್ಕೂ ಅಧಿಕ ಕಲಾವಿದರಿಂದ ಮೌರ್ಯ ಸರ್ಕಲ್ ಬಳಿ ನಾಳೆ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪನವರ ಗಮನ ಸೆಳೆಯುವುದು ಪ್ರತಿಭಟನೆಯ ಉದ್ದೇಶ ಎಂದಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us