Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸರ್ಕಾರ ಅಲ್ಲಾಡಿಸಲು ಸಾಧ್ಯವಿಲ್ಲ, ಅದು ನಿಮ್ಮ ಭ್ರಮೆ, ತಿರುಕನ‌ ಕನಸು: ಡಿಕೆ ಶಿವಕುಮಾರ್​

ರಾಮನಗರದಲ್ಲಿ ನಡೆದ ಕಾಂಗ್ರೆಸ್​​​ ಜನಾಂದೋಲ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅದು ನಿಮ್ಮ ಭ್ರಮೆ, ತಿರುಕನ ಕನಸು ಎಂದು ವಾಗ್ದಾಳಿ ಮಾಡಿದ್ದಾರೆ. 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಅಲ್ಲಾಡಿಸಲು ಸಾಧ್ಯವಿಲ್ಲ, ಅದು ನಿಮ್ಮ ಭ್ರಮೆ, ತಿರುಕನ‌ ಕನಸು: ಡಿಕೆ ಶಿವಕುಮಾರ್​
ನಮ್ಮ ಸರ್ಕಾರ ಅಲ್ಲಾಡಿಸಲು ಸಾಧ್ಯವಿಲ್ಲ, ಅದು ನಿಮ್ಮ ಭ್ರಮೆ, ತಿರುಕನ‌ ಕನಸು: ಡಿಕೆ ಶಿವಕುಮಾರ್​
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Aug 03, 2024 | 3:43 PM

ರಾಮನಗರ, ಆಗಸ್ಟ್​ 3: ನಮ್ಮ‌ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಆಗುವುದಿಲ್ಲ. ಅದು ನಿಮ್ಮ ಭ್ರಮೆ. ತಿರುಕನ‌ ಕನಸು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ವಾಗ್ದಾಳಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ ಪಾದಯಾತ್ರೆಗೆ (Padayatra) ಟಕ್ಕರ್ ಕೊಡಲು ರಾಮನಗರದಲ್ಲಿ ನಡೆದ ಕಾಂಗ್ರೆಸ್​​​ ಜನಾಂದೋಲ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೆಂಬರ್​​, ಡಿಸೆಂಬರ್​ಗೆ ಸರ್ಕಾರ ಪಲ್ಟಿ ಮಾಡುತ್ತೇವೆ ಅಂತಾರೆ. ಅದೇನು ಹೊಡೆಯೋಕೆ ಮಡಕೆನಾ ಎಂದು ಟಾಂಗ್ ನೀಡಿದ್ದಾರೆ.

2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ

ಪಾದಯಾತ್ರೆಗೆ ಮುನ್ನ ಆಗ ನಿಮ್ಮ ಮಂತ್ರಿಗಳು ಕೇಳಿದ ಪ್ರಶ್ನೆಗೆ ಉತ್ತರ ಕೊಡಿ. ಆರ್ಟಿಜಿಎಸ್​ನಲ್ಲಿ‌ ಅಕೌಂಟ್​ಗೆ ಹಣ ಹೋಗಿದೆ. ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ. ದೇಶವನ್ನ ಆಳುವ ಶಕ್ತಿ‌ ಮತ್ತೆ ಉದ್ಭವ ಆಗುತ್ತೆ. 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುವುದು ನಿಶ್ಚಿತ: ಭವಿಷ್ಯ ನುಡಿದ ಯಡಿಯೂರಪ್ಪ

ಪಾದಯಾತ್ರೆ ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು, ಪಾಂಡವಪುರ ಕಡೆ ಕಾಂಗ್ರೆಸ್ ಶಾಸಕರು ಇದ್ದಾರೆ. ನಿನ್ನೆ ಜೆಡಿಎಸ್ ಬಾವುಟವೇ ಇರಲಿಲ್ಲ. ನಾವು ನಿನ್ನೆ ಮಾತಾಡಿದ್ದಕ್ಕೆ ಜೆಡಿಎಸ್ ಬಾವುಟ ಹಾಕಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕಿಡಿ

ಬಿಜೆಪಿ ಶಾಸಕ ಯತ್ನಾಳ್, ಪತ್ರಿಕಾ ಜಾಹೀರಾತಿಗೆ ಬಿಜೆಪಿ ಉತ್ತರ ಕೊಡಬೇಕು. ಕಾವೇರಿ, ಮೇಕೆದಾಟು ನೀರಿಗೆ ಹೆಜ್ಜೆ ಹಾಕಿಲ್ಲ. ಈಗ ಕುಮಾರಸ್ವಾಮಿ ಮಂತ್ರಿ ಆಗಿದ್ದಾರೆ. ಫ್ಯಾಕ್ಟರಿ ಮಾಡ್ತೀನಿ ಅಂದಿದ್ದೀರಿ. ಉದ್ಯೋಗಿ‌ ಕೊಡಿ, ಖಾಲಿ‌ ಮಾತನಾಡಬೇಡಿ. ಚನ್ನಪಟ್ಟಣಕ್ಕೆ ಹೋಗಿದ್ದಾಗ 22 ಸಾವಿರ ಜನ ಅರ್ಜಿ ಕೊಟ್ಟಿದ್ದಾರೆ. ಅಭಿವೃದ್ಧಿ ವಿಚಾರ ಆಮೇಲೆ ಮಾತನಾಡುತ್ತೀನಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: BJP JDS Padayatra: ಮೈಸೂರು ಚಲೋ ಸಮಾವೇಶದ ಪೋಟೋಸ್​ ಇಲ್ಲಿವೆ

ನಾನು ಬರುವಾಗ ವಿಪರೀತ ಮಳೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ‌ ಬಂದಿದ್ದೀರಿ. ಪಾದಯಾತ್ರೆ ಮಾಡುವವರಿಗೆ ನೀವು ಪ್ರಶ್ನೆ ಕೇಳಿ. ನುಡಿದಂತೆ ನಡೆದಿದ್ದೇನೆ, ಬದುಕನ್ನ‌ ಬದಲಾವಣೆ ಮಾಡಿದ್ದೇವೆ. ಯಾವುದೇ ಈ ರೀತಿಯ ಕಾರ್ಯಕ್ರಮ ಬಿಜೆಪಿ ಮಾಡಿಲ್ಲ. ನಿಮ್ಮ‌ ಬದುಕು ನಮ್ಮ ಉಸಿರು ಎಂದರು.

ಯಡಿಯೂರಪ್ಪನವರು ಜೈಲಿಗೆ ಹೋಗಲು ಜೆಡಿಎಸ್​​ನವರು ಕಾರಣ

ಪೆನ್‌ ಡ್ರೈವ್ ಬಗ್ಗೆ ಯಾಕೆ ಚರ್ಚೆ ಮಾಡುತ್ತಿಲ್ಲ. ಪ್ರಧಾನಿ ಮೋದಿ ಬಳಿ ಯಾಕೆ ಮಾತನಾಡುತ್ತಿಲ್ಲ. ಬಿಜೆಪಿ ಯಾಕೆ ಬಾಯಿ ಮುಚ್ಚಿಕೊಂಡಿದೆ. ಬಿಚ್ಚಿ ಬಿಚ್ಚಿ ರಾಜ್ಯದ ಜನತೆಯ ಮುಂದೆ ಇಡಬೇಕು. ಭ್ರಷ್ಟಾಚಾರ ಪಿತಾಮಹ ಎಂದಿದ್ದಾರೆ. ನಿಮ್ಮ‌ ತಂದೆ ಯಾಕೆ‌ ರಾಜೀನಾಮೆ ಕೊಟ್ಟರು. ಕಣ್ಣೀರು ಹಾಕಿ ಹೋದವರು ಯಾರು? ಯಾಕೆ ರಾಜೀನಾಮೆ ಅಂಗೀಕಾರ ಮಾಡಿದರು. ಯಡಿಯೂರಪ್ಪನವರು ಜೈಲಿಗೆ ಹೋಗಲು ಜೆಡಿಎಸ್​​ನವರು ಕಾರಣ. ಈಗ ಅವರೊಂದಿಗೆ ಪಾದಯಾತ್ರೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ