AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ
ರಾಜ್ಯ ಒಕ್ಕಲಿಗರ ಸಂಘದ ಜೊತೆ ಡಿವಿ ಸದಾನಂದಗೌಡ ಸಭೆ
ಕಿರಣ್​ ಹನಿಯಡ್ಕ
| Edited By: |

Updated on:Mar 19, 2024 | 4:37 PM

Share

ಬೆಂಗಳೂರು, ಮಾ.19: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ (DV Sadananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.

ಇದನ್ನೂ ಓದಿ: ಮಾಜಿ ಸಿಎಂ ಸದಾನಂದ ಗೌಡಗೆ ಕಾಂಗ್ರೆಸ್ ಆಹ್ವಾನ: ಅಚ್ಚರಿಯ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.

ಇದನ್ನೂ ಓದಿ: ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಇನ್ನೂ ಮೂಡದ ಒಮ್ಮತ

ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Tue, 19 March 24

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್