AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ
ರಾಜ್ಯ ಒಕ್ಕಲಿಗರ ಸಂಘದ ಜೊತೆ ಡಿವಿ ಸದಾನಂದಗೌಡ ಸಭೆ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Mar 19, 2024 | 4:37 PM

Share

ಬೆಂಗಳೂರು, ಮಾ.19: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ (DV Sadananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.

ಇದನ್ನೂ ಓದಿ: ಮಾಜಿ ಸಿಎಂ ಸದಾನಂದ ಗೌಡಗೆ ಕಾಂಗ್ರೆಸ್ ಆಹ್ವಾನ: ಅಚ್ಚರಿಯ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.

ಇದನ್ನೂ ಓದಿ: ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಇನ್ನೂ ಮೂಡದ ಒಮ್ಮತ

ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Tue, 19 March 24

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ