Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ
ರಾಜ್ಯ ಒಕ್ಕಲಿಗರ ಸಂಘದ ಜೊತೆ ಡಿವಿ ಸದಾನಂದಗೌಡ ಸಭೆ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on:Mar 19, 2024 | 4:37 PM

ಬೆಂಗಳೂರು, ಮಾ.19: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ (DV Sadananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.

ಇದನ್ನೂ ಓದಿ: ಮಾಜಿ ಸಿಎಂ ಸದಾನಂದ ಗೌಡಗೆ ಕಾಂಗ್ರೆಸ್ ಆಹ್ವಾನ: ಅಚ್ಚರಿಯ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.

ಇದನ್ನೂ ಓದಿ: ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಇನ್ನೂ ಮೂಡದ ಒಮ್ಮತ

ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Tue, 19 March 24