ಕರ್ನಾಟಕದಲ್ಲಿ 100ಕ್ಕೂ ಹೆಚ್ಚು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಇವೆ..ಸಾವಿನ ವರದಿಯಾಗಿಲ್ಲ: ಡಿಸಿಎಂ ಅಶ್ವತ್ಥ ನಾರಾಯಣ್​

ಲಾಕ್​ಡೌನ್ ಬಗ್ಗೆ ಮೇ 23ರಂದು ಮುಖ್ಯಮಂತ್ರಿ ಯಡಿಯೂರಪ್ಪನವರೇ ತಿಳಿಸಲಿದ್ದಾರೆ. ಲಾಕ್​ಡೌನ್​ ಮುಂದುವರಿಸಬೇಕೋ..ಬಿಡಬೇಕೋ ಎಂಬುದನ್ನು ಅವರೇ ನಿರ್ಧಾರ ಮಾಡುತ್ತಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ತಿಳಿಸಿದರು.

ಕರ್ನಾಟಕದಲ್ಲಿ 100ಕ್ಕೂ ಹೆಚ್ಚು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಇವೆ..ಸಾವಿನ ವರದಿಯಾಗಿಲ್ಲ: ಡಿಸಿಎಂ ಅಶ್ವತ್ಥ ನಾರಾಯಣ್​
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
Follow us
|

Updated on: May 20, 2021 | 10:20 PM

ಮೈಸೂರು: ರಾಜ್ಯದಲ್ಲಿ 100ಕ್ಕೂ ಹೆಚ್ಚು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಪತ್ತೆಯಾಗಿವೆ. ಆದರೆ ಬ್ಲ್ಯಾಕ್​ ಫಂಗಸ್​​ನಿಂದ ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್​ ನಾರಾಯಣ್​ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಮೂರು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಲಾಗಿತ್ತು. ಆದರೆ ಅದರಲ್ಲಿ 2 ಅಲ್ಲ ಎಂಬುದು ನಂತರ ಗೊತ್ತಾಯಿತು. ಈ ಸೋಂಕಿನ ಚಿಕಿತ್ಸೆಗೆ ಅಗತ್ಯವಾದ ಔಷಧಗಳ ಕೊರತೆ ಇದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಕೆಲವೇ ವಾರಗಳಲ್ಲಿ ಅವುಗಳ ಪೂರೈಕೆ ಆಗಲಿದೆ ಎಂದೂ ಮಾಹಿತಿ ನೀಡಿದರು.

ಲಾಕ್​ಡೌನ್​ ತೀರ್ಮಾನ ಸಿಎಂಗೆ ಬಿಟ್ಟಿದ್ದು ಇನ್ನು ಲಾಕ್​ಡೌನ್ ಬಗ್ಗೆ ಮೇ 23ರಂದು ಮುಖ್ಯಮಂತ್ರಿ ಯಡಿಯೂರಪ್ಪನವರೇ ತಿಳಿಸಲಿದ್ದಾರೆ. ಲಾಕ್​ಡೌನ್​ ಮುಂದುವರಿಸಬೇಕೋ..ಬಿಡಬೇಕೋ ಎಂಬುದನ್ನು ಅವರೇ ನಿರ್ಧಾರ ಮಾಡುತ್ತಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಮಾಹಿತಿ ನೀಡಿದ್ದಾರೆ. ಲಾಕ್​ಡೌನ್​ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿನ ಅಂಕಿ-ಅಂಶ ಗಮನಿಸಿ ಸಿಎಂ ಕ್ರಮ ಕೈಗೊಳ್ಳುತ್ತಾರೆ. ಈಗಿರುವ ಕಠಿಣ ಕ್ರಮಗಳನ್ನು ಮುಂದುವರಿಸಬೇಕಾ? ಸಡಿಲಗೊಳಿಸಬೇಕಾ? ಎಂಬುದೆಲ್ಲ ಅವರಿಗೇ ಬಿಟ್ಟಿದ್ದು ಎಂದೂ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಇಲ್ಲಿ ಉತ್ಪಾದನೆಯಾದ ಶೇ.50ರಷ್ಟು ಸ್ಪುಟ್ನಿಕ್ ವಿ ಲಸಿಕೆಯನ್ನು ಸರ್ಕಾರಕ್ಕೆ ನೀಡಬೇಕು. ಉಳಿದ ಶೇ.50ರಷ್ಟನ್ನು ಮಾತ್ರ ಓಪನ್ ಮಾರ್ಕೆಟ್​ನಲ್ಲಿ ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್-19 ಪಿಡುಗಿನಿಂದ ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲು ಸೋನಿಯಾ ಗಾಂಧಿ ಸಲಹೆ

18-44 Vaccination in Karnataka: ಮೇ 22ರಿಂದಲೇ 18 ರಿಂದ 44 ವರ್ಷದವರಿಗೆ ಕೊವಿಡ್ ಲಸಿಕೆ; ಕೊವಿಡ್ ಸೇನಾನಿಗಳಿಗೆ ಮೊದಲ ಆದ್ಯತೆ

(Over 100 cases of black fungus in Karnataka said DCM Ashwath Narayan)

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ