AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕಾಡಾನೆ ದಾಳಿ; ಕಾಫಿ ತೋಟದ ಮಾಲೀಕ ಸಾವು

ಇಂದು ಬೆಳಿಗ್ಗೆ 6.30ರ ಸುಮಾರಿಗೆ ಒಂಟಿ ಸಲಗ 59 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಂದಿದೆ. ಮನೆ ಸಮೀಪವೇ ಕಾಡಾನೆ ಬಂದು ತೋಟದ ಮಾಲೀಕನ ಜೀವವನ್ನು ತೆಗೆದಿದೆ. ಆನೆಯ ದಾಳಿಯಿಂದ ವ್ಯಕ್ತಿಯ ತಲೆ ಛಿದ್ರ ಛಿದ್ರವಾಗಿದೆ.

ಹಾಸನದಲ್ಲಿ ಕಾಡಾನೆ ದಾಳಿ; ಕಾಫಿ ತೋಟದ ಮಾಲೀಕ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Jun 02, 2021 | 9:56 AM

Share

ಹಾಸನ: ಹಾಸನದಲ್ಲಿ ಇತ್ತೀಚೆಗೆ ಕಾಡಾನೆಗಳ ಹಾವಳಿ ಜೋರಾಗಿದ್ದು, ಆನೆ ದಾಳಿಗೆ ತೋಟದ ಮಾಲೀಕ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಕಿರುಹುಣಸೆ ಗ್ರಾಮದ ರಾಜಣ್ಣ ಎಂಬುವವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ 6.30ರ ಸುಮಾರಿಗೆ ಒಂಟಿ ಸಲಗ 59 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಂದಿದೆ. ಮನೆ ಸಮೀಪವೇ ಕಾಡಾನೆ ಬಂದು ತೋಟದ ಮಾಲೀಕನ ಜೀವವನ್ನು ತೆಗೆದಿದೆ. ಆನೆಯ ದಾಳಿಯಿಂದ ವ್ಯಕ್ತಿಯ ತಲೆ ಛಿದ್ರ ಛಿದ್ರವಾಗಿದ್ದು, ಆನೆ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಮಾವ ತಯಾರಿಸುತ್ತಿದ್ದ ಮೂವರು ಆರೋಪಿಗಳ ಬಂಧನ ವಿಜಯಪುರ: ಮಾವ ತಯಾರಿಸುತ್ತಿದ್ದ ಮೂವರು ಆರೋಪಿಗಳನ್ನು ತಿಕೋಟ ಪೊಲೀಸರು ಬಂಧಿಸಿದ್ದಾರೆ. ಮದರ್​ಸಾಬ್ ಮಡ್ಡಿಮನಿ, ಅಬ್ದುಲ್ಕರೀಂ ಬಡಕಲ್ ಮತ್ತು ಮುಬಾರಕ್ ಬಡಕಲ್ ಬಂಧಿತ ಆರೋಪಿಗಳು. ಮೂವರು ತಿಕೋಟ ಪಟ್ಟಣದ ಬಡಕಲ್​ನಲ್ಲಿ, ಗೌಡರ ಗಲ್ಲಿಯಲ್ಲಿ ಅಪಾರ ಪ್ರಮಾಣದಲ್ಲಿ ಮಾವ ತಯಾರಿಸಿ, ಲಾಕ್​ಡೌನ್​ ನಡುವೆ ಯುವಕರಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಇವರನ್ನು ಬಂಧಿಸಿದ್ದು, 185 ಕೆ.ಜಿ ಮಾವ ಮತ್ತು 1.50 ಲಕ್ಷ ರೂ. ಮೌಲ್ಯದ ಮಾವ ಜೊತೆಗೆ ತಯಾರಿಸಲು ಬಳಸುತ್ತಿದ್ದ ಮಿಕ್ಸರ್, ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳ್ಳಭಟ್ಟಿ ಅಡ್ಡೆಯ ಮೇಲೆ ಅಧಿಕಾರಿಗಳ ದಾಳಿ ಶಿವಮೊಗ್ಗ: ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡಾದ ಮಲ್ಲಪ್ಪನ ಕಟ್ಟೆ ಕೆರೆಯ ಬಳಿ ಅಡ್ಡೆಯಿತ್ತು. ಆರೋಪಿಗಳಾದ ಬೀರಾ ನಾಯಕ್ ಮತ್ತು ಲೋಕಿ ಬಾಯಿ ಪರಾರಿಯಾಗಿದ್ದಾರೆ. 135 ಲೀಟರ್ ಬೆಲ್ಲದ ಕೊಳೆ ಹಾಗೂ 09 ಲೀಟರ್ ಕಳ್ಳಭಟ್ಟಿ ಸಾರಾಯಿಯ ಜೊತೆಗೆ ತಯಾರಿಕೆಗೆ ಬಳಸುವ ಸಾಮಗ್ರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

Covid 19 Vaccine: ಚೀನಾ ಸಹಾಯದೊಂದಿಗೆ ಲಸಿಕೆ ಅಭಿವೃದ್ಧಿ ಪಡಿಸಿದ ಪಾಕಿಸ್ತಾನ; ನಿನ್ನೆ ಉದ್ಘಾಟನೆಯಾದ ‘ಪಾಕ್​​ವಾಕ್’​

ಸಿಲಿಂಡರ್ ಸ್ಫೋಟದಿಂದ ಕುಸಿದುಬಿದ್ದ ಕಟ್ಟಡ; 7 ಮಂದಿ ಸಾವು, 14 ಜನರಿಗೆ ಗಾಯ

(owner of coffee plantation has died from a elephant attack)

Published On - 9:24 am, Wed, 2 June 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ